![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 1, 2024, 1:57 AM IST
ಬೆಂಗಳೂರು: ವಿಚ್ಛೇ ದನ ಪ್ರಕರಣಗಳಲ್ಲಿ ಪತಿಯ ಆದಾಯದ ಶೇ.10ರಷ್ಟನ್ನು ಪತ್ನಿಗೆ ಜೀವನಾಂಶ ನೀಡಿದರೆ ಅದು ಹೆಚ್ಚೇನಲ್ಲ ಎಂದು ಹೇಳಿರುವ ಹೈಕೋರ್ಟ್, ಪತ್ನಿಗೆ ಮಾಸಿಕ 60 ಸಾವಿರ ರೂ. ಜೀವನಾಂಶ ನೀಡಬೇಕು ಎಂಬ ವಿಚಾರಣ ನ್ಯಾಯಾ ಲಯದ ಆದೇಶವನ್ನು ಎತ್ತಿಹಿಡಿದಿದೆ. ವಿಚ್ಛೇ ದಿತ ಪತ್ನಿಗೆ ಮಾಸಿಕ 60 ಸಾವಿರ ಜೀವನಾಂಶ ನೀಡುವಂತೆ ವಿಚಾರಣ ನ್ಯಾಯಾಲಯ ನೀಡಿದ ಆದೇಶ ಪ್ರಶ್ನಿಸಿ ಬೆಂಗಳೂರಿನ ನಿವಾಸಿಯೊ ಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪತಿಯ ವಾದವನ್ನು ತಳ್ಳಿಹಾಕಿತು. ಪತಿಗೆ ಮಾಸಿಕ 7 ಲಕ್ಷ ರೂ. ಆದಾಯ ಇದ್ದಾಗ, ಗೃಹಿಣಿಯಾಗಿರುವ ವಿಚ್ಛೇದಿತೆಗೆ ಮಾಸಿಕ 60 ಸಾವಿರ ರೂ. ಜೀವ ನಾಂಶ ನೀಡುವುದು ಒಟ್ಟು ಆದಾಯದ ಶೇ.10ರಷ್ಟು ಮಾತ್ರ ಆಗಲಿದೆ. ಆದ್ದರಿಂದ ವಿಚಾರಣ ನ್ಯಾಯಾಲಯದ ಆದೇಶದಲ್ಲಿ ಮಧ್ಯ ಪ್ರವೇಶಿಸುತ್ತಿಲ್ಲ ಎಂದು ಹೇಳಿದೆ.
ಪತಿಯ ಅಫಿದವಿತ್ ಪ್ರಕಾರ, ಆತ ವಾರ್ಷಿಕ 83 ಲಕ್ಷ ರೂ.ಗಳನ್ನು ಸಂಪಾದಿಸುತ್ತಾನೆ. ಇದು ತಿಂಗಳಿಗೆ 7 ಲಕ್ಷ ರೂ.ಗಳಷ್ಟಿರು ತ್ತದೆ ಮತ್ತು ಪತ್ನಿಯು ಯಾವುದೇ ಸ್ವತಂತ್ರ ಆದಾಯ ಹೊಂದಿಲ್ಲ ಎಂಬ ಅಂಶವನ್ನು ಕುಟುಂಬ ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ. ಜತೆಗೆ, ಪತ್ನಿಯು ಮಾನಸಿಕ ಆರೋಗ್ಯಕ್ಕಾಗಿ ಚಿಕಿತ್ಸೆ ಪಡೆಯುವ ಅಗತ್ಯವಿರುತ್ತದೆ. ಇದಕ್ಕಾಗಿ ದೊಡ್ಡ ಮೊತ್ತದ ಹಣ ಬೇಕಾಗುತ್ತದೆ. ಆದ್ದರಿಂದ ವಿಚಾರಣ ನ್ಯಾಯಲಯ ನೀಡಿರುವ ಆದೇಶ ನ್ಯಾಯಸಮ್ಮತವಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.