![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 1, 2024, 11:26 PM IST
ಗುಂಡ್ಲುಪೇಟೆ(ಚಾಮರಾಜನಗರ): ಕಾದಾಟದಲ್ಲಿ ಗಂಡು ಹುಲಿಯೊಂದು ಮೃತಪಟ್ಟಿರುವ ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಮದ್ದೂರು ವಲಯ ವ್ಯಾಪ್ತಿಯ ಮದ್ದೂರು ಗಸ್ತು, ಸೀಗನಬೆಟ್ಟದ ಬಳಿ ನಡೆದಿದೆ.
ಮೃತ ಹುಲಿಗೆ ಸುಮಾರು 3-4 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದ್ದು, ಅರಣ್ಯ ಸಿಬ್ಬಂದಿ ಗಸ್ತು ನಡೆಸುತ್ತಿದ್ದ ವೇಳೆ ಹುಲಿ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಹುಲಿಯು ಕಾಡಿನೊಳಗೆ ಮತ್ತೊಂದು ಹುಲಿಯ ಜತೆ ಕಾದಾಟ ನಡೆಸುವಾಗ ದೇಹಕ್ಕೆ ಬಲವಾದ ಪೆಟ್ಟು ಬಿದ್ದಿರುವುದು ತಿಳಿದು ಬಂದಿದ್ದು, ಮರಣೋತ್ತರ ಪರೀಕ್ಷೆ ಸಮಯದಲ್ಲಿ ಹುಲಿಯ ಹೊಟ್ಟೆಯ ಒಳಭಾಗದಲ್ಲಿ ಮುಳ್ಳು ಹಂದಿಯ ಮುಳ್ಳುಗಳು ಕಂಡುಬಂದಿದೆ. ಹೊಟ್ಟೆಯ ಒಳ ಭಾಗದಲ್ಲಿ ಮುಳ್ಳುಗಳು ಚುಚ್ಚಿ ರಕ್ತ ಸ್ರಾವವಾಗಿ ಹುಲಿಯು ಮೃತಪಟ್ಟಿರುತ್ತದೆ ಎಂದು ಇಲಾಖಾ ಪಶುವೈಧ್ಯಾಧಿಕಾರಿ ಡಾ.ಮಿರ್ಜಾ ವಾಸೀಂ ಮಾಹಿತಿ ನೀಡಿದ್ದಾರೆ.
ಹುಲಿ ಸಾವನ್ನಪ್ಪಿರುವ ಮಾಹಿತಿ ಅರಿತ ಬಂಡೀಪುರ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್ ಕುಮಾರ್, ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ. ರವೀಂದ್ರ, ಮದ್ದೂರು ವಲಯದ ವಲಯ ಅರಣ್ಯಾಧಿಕಾರಿ ಬಿ.ಎಂ.ಮಲ್ಲೇಶ್ ಸೇರಿದಂತೆ ಅರಣ್ಯ ಇಲಾಖಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ನಿಯಮಾನುಸಾರ ಸುಡಲಾಯಿತು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.