Mangaluru ಶ್ರೀ ಕಾಶೀಮಠದಿಂದ ಅಯೋಧ್ಯೆಗೆ ಬೆಳ್ಳಿ ಪಲ್ಲಕ್ಕಿ
ಇಂದು ರಥಬೀದಿ ವೆಂಕಟರಮಣ ದೇವಸ್ಥಾನಕ್ಕೆ ಆಗಮನ
Team Udayavani, Feb 2, 2024, 11:57 PM IST
ಮಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಶ್ರೀ ಕಾಶೀ ಮಠ ಸಂಸ್ಥಾನದ ವತಿಯಿಂದ ಬೆಳ್ಳಿ ಪಲ್ಲಕ್ಕಿಯನ್ನು ಸಮರ್ಪಿಸಲಾಗುತ್ತಿದ್ದು, ಫೆ. 3ರಂದು ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಪಲ್ಲಕಿಯ ಪುರ ಪ್ರವೇಶ ಕಾರ್ಯಕ್ರಮ ನಡೆಯಲಿದೆ.
ದೇವಸ್ಥಾನದ ಬಳಿಯಿಂದ ಸಂಜೆ 6ಕ್ಕೆ ಪಲ್ಲಕ್ಕಿಯ ಮೆರವಣಿಗೆ ಹೊರಟು ಡೊಂಗರಕೇರಿ ಮಹಾಮಾಯ ದೇವಸ್ಥಾನದ ಚಿತ್ರಾ ಜಂಕ್ಷನ್ ಬಳಿಯಿಂದ ಎಡಕ್ಕೆ ತಿರುಗಿ ಬಳಿಕ ಸ್ವದೇಶೀ ಸ್ಟೋರ್ಸ್ ಮೂಲಕ ರಥಬೀದಿ ತಲುಪಲಿದೆ.
ಬಳಿಕ ಶ್ರೀ ಕಾಶೀ ಮಠಾಧೀಶ ಶ್ರೀ ಸಂಯಮೀಂದ್ರತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಶೋಭಾ ಯಾತ್ರೆ ನಡೆಯಲಿದೆ. ದೇವಸ್ಥಾನಕ್ಕೆ ತಲುಪಿದ ಅನಂತರ ಶ್ರೀಗಳ ನೇತೃತ್ವದಲ್ಲಿ ದೇವರ ರಾತ್ರಿ ಪೂಜೆ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.