Kannada Cinema; ಶಿವಣ್ಣನ ಹೊಸ ಚಿತ್ರಕ್ಕೆ ಹೇಮಂತ್ ರಾವ್ ಸಾರಥಿ
Team Udayavani, Feb 3, 2024, 5:50 PM IST
ಕನ್ನಡದಲ್ಲಿ “ಗೋಧಿ ಬಣ್ಣ ಸಾಧಾರಣ ಮೈಕಟ್ಟು’, “ಕವಲುದಾರಿ’, “ಸಪ್ತ ಸಾಗರದಾಚೆ ಎಲ್ಲೋ..’ ದಂತಹ ಸದಭಿರುಚಿ ಸಿನಿಮಾಗಳನ್ನು ನಿರ್ದೇಶಿಸಿದ್ದ ಹೇಮಂತ್ ಎಂ. ರಾವ್ ಈಗ ಸದ್ದಿಲ್ಲದೆ ಹೊಸ ಸಿನಿಮಾಕ್ಕೆ ತಯಾರಿ ನಡೆಸಿದ್ದಾರೆ. ಈಗಾಗಲೇ ರಕ್ಷಿತ್ ಶೆಟ್ಟಿ, ರಿಷಿ ಮೊದಲಾದವರಿಗೆ ಆ್ಯಕ್ಷನ್-ಕಟ್ ಹೇಳಿದ್ದ ಹೇಮಂತ್ ಎಂ. ರಾವ್ ಈ ಬಾರಿ ನಟ ಶಿವರಾಜಕುಮಾರ್ ಅವರಿಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ.
ಕೆಲ ದಿನಗಳಿಂದ ನಿರ್ದೇಶಕ ಹೇಮಂತ್ ರಾವ್, ಶಿವರಾಜಕುಮಾರ್ ಅವರ ಹೊಸ ಸಿನಿಮಾಕ್ಕೆ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದರೂ, ಈ ಬಗ್ಗೆ ನಿರ್ದೇಶಕ ಹೇಮಂತ್ ರಾವ್ ಅವರಾಗಲಿ, ಚಿತ್ರತಂಡವಾಗಲಿ ಅಧಿಕೃತ ಮಾಹಿತಿಯನ್ನು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಚಿತ್ರತಂಡದ ಕಡೆಯಿಂದಲೇ ಈ ಸಿನಿಮಾದ ಬಗ್ಗೆ ಅಧಿಕೃತ ಸುದ್ದಿ ಹೊರಬಿದ್ದಿದೆ.
ಈ ಬಗ್ಗೆ ಮಾತನಾಡುವ ನಿರ್ದೇಶಕ ಹೇಮಂತ್ ರಾವ್, “ಇದೊಂದು ಆ್ಯಕ್ಷನ್ ಡ್ರಾಮಾ ಕಥಾಹಂದರದ ಸಿನಿಮಾವಾಗಿದ್ದು, ಈಗಾಗಲೇ ಈ ಸಿನಿಮಾದ ಪ್ರೀ-ಪ್ರೊಡಕ್ಷನ್ ಕೆಲಸಗಳು ಅಂತಿಮ ಹಂತದಲ್ಲಿದೆ. ಸುಮಾರು ಆರು ತಿಂಗಳಿನಿಂದ ಈ ಸಿನಿಮಾದ ಕೆಲಸ ನಡೆಯುತ್ತಿದೆ. ಈ ವರ್ಷದ ಆಗಸ್ಟ್ ಅಥವಾ ಸೆಪ್ಟೆಂಬರ್ನಲ್ಲಿ ಸಿನಿಮಾ ಶೂಟಿಂಗ್ ಶುರು ಮಾಡುವ ಯೋಚನೆಯಿದೆ. ಮುಂದಿನ ವರ್ಷದ ಮಧ್ಯ ಭಾಗದಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ವೃತ್ತಿಯಲ್ಲಿ ವೈದ್ಯರಾಗಿರುವ ವೈಶಾಕ್ ಗೌಡ “ವೈಶಾಕ್ ಜೆ ಫಿಲಂಸ್’ ಬ್ಯಾನರ್ನಲ್ಲಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಶೀಘ್ರದಲ್ಲಿಯೇ ಈ ಸಿನಿಮಾದ ಟೈಟಲ್, ಇತರ ಕಲಾವಿದರ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದೇವೆ’ ಎಂಬ ಮಾಹಿತಿ ನೀಡುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.