![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 3, 2024, 11:43 PM IST
ಬಂಟ್ವಾಳ: ಕಳೆದ ಒಂದು ವರ್ಷದಿಂದ ಕೊಡಲು ಬಾಕಿ ಇದ್ದ ಬಾಡಿಗೆ ಕೇಳಲು ಹೋದ ಅಪಾರ್ಟ್ಮೆಂಟ್ ಮಾಲಕರಿಗೆ ಬಾಡಿಗೆ ಮನೆ ಪಡೆದಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿದ ಘಟನೆ ಫೆ. 2ರಂದು ಫರಂಗಿಪೇಟೆ ಸಮೀಪದ ಕುಂಪನಮಜಲುನಲ್ಲಿ ನಡೆದಿದೆ.
ಬಾಡಿಗೆದಾರ ಶಬೀರ್ ಪ್ರಕರಣ ಆರೋಪಿಯಾಗಿದ್ದು, ಆತ ಅಪಾರ್ಟ್ಮೆಂಟ್ ಮಾಲಕ ಸಲೀಂ ಅಪ್ತಾಫ್ ಅವರಿಗೆ ಹಲ್ಲೆ ನಡೆಸಿದ್ದಾನೆ. ಕುಂಪನಮಜಲಿನಲ್ಲಿ ಡೈಮಂಡ್ ಹೋಂ ಅಪಾರ್ಟ್ಮೆಂಟ್ನಲ್ಲಿ ಆರೋಪಿ ಶಬೀರ್ ಬಾಡಿಗೆಗೆ ವಾಸವಾಗಿದ್ದು, ಕಳೆದ ಒಂದು ವರ್ಷದಿಂದ ಬಾಡಿಗೆ ಕೊಟ್ಟಿರಲಿಲ್ಲ.
ಜತೆಗೆ ಆತನ ಬಾಡಿಗೆ ಕರಾರು ಮುಗಿದ ಕಾರಣ ಆತನಿಗೆ ವಿಚಾರ ತಿಳಿಸಲು ಮಾಲಕರು ಅಪಾರ್ಟ್ಮೆಂಟ್ಗೆ ತೆರಳಿದ ವೇಳೆ ಆರೋಪಿ ಅವರನ್ನು ತಡೆದು ಹಲ್ಲೆ ನಡೆಸಿ ಬಾಡಿಗೆ ಕೇಳಲು ಬಂದರೆ ಕೊಲ್ಲದೆ ಬಿಡುವುದಿಲ್ಲವೆಂದು ಬೆದರಿಕೆ ಹಾಕಿ ಕತ್ತಿ ತೆಗೆಯಲು ಹೋಗಿದ್ದಾನೆ. ಈ ವೇಳೆ ಮಾಲಕರು ತಪ್ಪಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.