BBMP: ತೆರಿಗೆ ಸಂಗ್ರಹಿಸದ ಅಧಿಕಾರಿಗಳ ಮೇಲೆ “ಶಿಸ್ತು ಕ್ರಮದ ಅಸ್ತ್ರ”


Team Udayavani, Feb 4, 2024, 8:37 AM IST

BBMP: ತೆರಿಗೆ ಸಂಗ್ರಹಿಸದ ಅಧಿಕಾರಿಗಳ ಮೇಲೆ “ಶಿಸ್ತು ಕ್ರಮದ ಅಸ್ತ್ರ”

ಬೆಂಗಳೂರು: ಆಸ್ತಿ ತೆರಿಗೆ ಸಂಗ್ರಹ ವಿಚಾರದಲ್ಲಿ ಆಸಕ್ತಿ ತೋರದ ಕಂದಾಯ ವಿಭಾಗದ ಅಧಿಕಾರಿಗಳ ವಿರುದ್ಧ “ಶಿಸ್ತು ಕ್ರಮದ ಅಸ್ತ್ರ’ ಪ್ರಯೋಗಿಸಲು ಬಿಬಿಎಂಪಿ ಚಿಂತನೆ ನಡೆಸಿದೆ.

ಆಸ್ತಿ ತೆರಿಗೆ ಸಂಗ್ರಹಿಸುವಲ್ಲಿ ವಿಫ‌ಲರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲು ಪಾಲಿಕೆ ವಿಶೇಷ ಆಯುಕ್ತ ಮನೀಶ್‌ ಮೌದ್ಗಿಲ್‌ ಅವರು ಜ.30ರಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ಗೆ ವರದಿ ನೀಡಿದ್ದು, ಅದರಲ್ಲಿ ಬೊಮ್ಮನಹಳ್ಳಿ ವಲಯದ ಆರು ಅಧಿಕಾರಿಗಳ ಹೆಸರು ಪ್ರಸ್ತಾಪಿಸಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಆಸ್ತಿ ತೆರಿಗೆ ಪಾವತಿಸದವರು ಹೆಚ್ಚಿನ ಸಂಖ್ಯೆಯಲ್ಲಿ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿದ್ದಾರೆ. ತೆರಿಗೆ ಕಟ್ಟದ ಟಾಪ್‌-50 ಗೃಹೇತರ ಕಟ್ಟಡಗಳಲ್ಲಿ ಒಂದೇ ಒಂದು ಕಟ್ಟಡವನ್ನು ಕಂದಾಯ ಅಧಿಕಾರಿಗಳು ಸೀಲ್‌ ಮಾಡಿಲ್ಲ. ಜತೆಗೆ ಮಾಲೀಕರಿಂದ ಆಸ್ತಿ ತೆರಿಗೆ ಸಂಗ್ರಹಕ್ಕೆ ಯಾವುದೇ ಕ್ರಮ ವಹಿಸಿಲ್ಲ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸೆಗಿರುವ ಆರು ಅಧಿಕಾರಿಗಳಿಗೆ ಪಾಲಿಕೆ “ಅಮಾನತು ಅಸ್ತ್ರ’ ಪ್ರಯೋಗ ಮಾಡಿ ಇಲಾಖೆ ವಿಚಾರಣೆಗೆ ಆದೇಶಿಸುವಂತೆ ಮೌದ್ಗಿಲ್‌ ಅವರು ಪಾಲಿಕೆ ಮುಖ್ಯ ಆಯುಕ್ತರಿಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖ ಮಾಡಿದ್ದಾರೆ ಎಂದು ಹೇಳಿವೆ.

ಬೇಗೂರು, ಯಲಚೇನಹಳ್ಳಿ ಅಧಿಕಾರಿಗಳ ವಿರುದ್ಧ ಕ್ರಮ: ಈ ಮಧ್ಯೆ, ಆಸ್ತಿ ತೆರಿಗೆ ಸಂಗ್ರಹದಲ್ಲಿ ಬೇಗೂರು, ಬೊಮ್ಮನಹಳ್ಳಿ, ಯಲಚೇನಹಳ್ಳಿ, ಉತ್ತರಹಳ್ಳಿ, ಎಚ್‌.ಎಸ್‌.ಆರ್‌.ಲೇ ಔಟ್‌ ಮತ್ತು ಅರಕೆರೆ ಪಾಲಿಕೆ ವಲಯ ಕಂದಾಯ ಅಧಿಕಾರಿಗಳು ಮತ್ತು ಸಿಬ್ಬಂದಿ ಆಸಕ್ತಿ ತೋರಿಲ್ಲ. ಈ ಹಿನ್ನೆಲೆಯಲ್ಲಿ ಆ ಅಧಿಕಾರಿಗಳನ್ನೂ ಅಮಾನತು ಮಾಡಬೇಕೆಂದು ಶಿಫಾರಸು ಮಾಡಲಾಗಿದೆ ಎಂದು ಪಾಲಿಕೆ ಮೂಲಗಳು ಹೇಳಿವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಬಿಬಿಎಂಪಿ ಬೊಮ್ಮನಹಳ್ಳಿ ವಲಯ ಆಯುಕ್ತೆ ರಮ್ಯಾ, ಚುನಾವಣೆ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಕುಂಟಿತವಾಗಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಸರಿಪಡಿಸಿಕೊಳ್ಳುತ್ತಾರೆಂಬ ವಿಶ್ವಾಸ ಇದೆ ಎಂದು ಹೇಳಿದರು.

ತೆರಿಗೆ ಸಂಗ್ರಹಕ್ಕೆ ವಲಯಅಧಿಕಾರಿಗಳ ನಿರಾಸಕ್ತಿ? : ಆಸ್ತಿ ತೆರಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ಪಾಲಿಕೆ ಕಂದಾಯ ವಿಭಾಗ ಹಲವು ರೀತಿಯ ಕಾರ್ಯ ಯೋಜನೆ ರೂಪಿಸಿದೆ. ಇದರಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಗೃಹ ಹಾಗೂ ಗೃಹೇತರ ಕಟ್ಟಡಗಳ ಮಾಲೀಕರ ಆಸ್ತಿ ಮುಟ್ಟುಗೋಲು ಹಾಗೂ ಬೀಗಮುದ್ರೆ ಹಾಕುವುದು ಕೂಡ ಸೇರಿದೆ. ಈ ಸಂಬಂಧ ಈಗಾಗಲೇ ಪಾಲಿಕೆ ಎಂಟೂ ವಲಯಗಳಲ್ಲಿ ಬಿಬಿಎಂಪಿ ವಲಯ ಕಂದಾಯ ಅಧಿಕಾರಿಗಳು ಆಸ್ತಿ ತೆರಿಗೆ ಕಟ್ಟದ ಅಧಿಕಾರಿಗಳಿಗೆ ಚುರುಕು ಮುಟ್ಟಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಆದರೆ, ಬೊಮ್ಮನಹಳ್ಳಿ ವಲಯ, ಬೇಗೂರು, ಯಲಚೇನಹಳ್ಳಿ, ಉತ್ತರಹಳ್ಳಿ, ಎಚ್‌.ಎಸ್‌. ಆರ್‌.ಲೇ ಔಟ್‌ ಮತ್ತು ಅರಕೆರೆ ಸೇರಿ ಮತ್ತಿತರ ಪ್ರದೇಶಗಳಲ್ಲಿ ಹಲವು ಮಾಲೀಕರು 20 ಲಕ್ಷ ರೂ.ಗೂ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಅಂತವರ ವಿರುದ್ಧ ಕಂದಾಯ ಅಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಿಲ್ಲ ಎಂಬ ಮಾತುಗಳು ಪಾಲಿಕೆಯಲ್ಲಿ ಕೇಳಿಬಂದಿವೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.