Ranji ಟ್ರೋಫಿ ಕ್ರಿಕೆಟ್‌: ಕರ್ನಾಟಕ ಗೆಲುವಿಗೆ ಮನೀಷ್‌ ಪಾಂಡೆ ನೆರವು


Team Udayavani, Feb 4, 2024, 11:00 PM IST

1–asdasdas

ಸೂರತ್‌: ಅನುಭವಿ ಬ್ಯಾಟ್ಸ್‌ಮನ್‌ ಮನೀಷ್‌ ಪಾಂಡೆ ಅವರ ಸಮಯೋಚಿತ ಬ್ಯಾಟಿಂಗ್‌ ಬಲದಿಂದಾಗಿ ಕರ್ನಾಟಕ ತಂಡವು ರಣಜಿ ಟ್ರೋಫಿಯ “ಸಿ’ ಬಣದ ಪಂದ್ಯದಲ್ಲಿ ರೈಲ್ವೇಸ್‌ ವಿರುದ್ಧ ಒಂದು ವಿಕೆಟ್‌ ಅಂತರದ ರೋಚಕ ಗೆಲುವು ದಾಖಲಿಸಿದೆ.

ಗೆಲ್ಲಲು 226 ರನ್‌ ತೆಗೆಯುವ ಸವಾಲು ಪಡೆದ ಕರ್ನಾಟಕ ತಂಡವು ಮೂರನೇ ದಿನ ಪಾಂಡೆ ಅವರ ತಾಳ್ಮೆಯ ಆಟದಿಂದಾಗಿ 9 ವಿಕೆಟಿಗೆ 229 ರನ್‌ ಪೇರಿಸಿ ಜಯಭೇರಿ ಬಾರಿಸಿತು. 121 ಎಸೆತ ಎದುರಿಸಿದ ಪಾಂಡೆ ಆರು ಬೌಂಡರಿ ಮತ್ತು ಒಂದು ಸಿಕ್ಸರ್‌ ನೆರವಿನಿಂದ 67 ರನ್‌ ಗಳಿಸಿ ಅಜೇಯರಾಗಿ ಉಳಿದರು. ಈ ಮೊದಲು ರೈಲ್ವೇಸ್‌ ತಂಡವು 8 ವಿಕೆಟಿಗೆ 209 ರನ್ನುಗಳಿಂದ ದಿನದಾಟ ಆರಂಭಿಸಿ 244 ರನ್ನಿಗೆ ಆಲೌಟಾಯಿತು. ರೈಲ್ವೇಸ್‌ ಕುಸಿತಕ್ಕೆ ಕಾರಣರಾದ ವೈಶಾಖ್‌ ವಿಜಯಕುಮಾರ್‌ 67 ರನ್ನಿಗೆ 5 ವಿಕೆಟ್‌ ಕಿತ್ತರು.

ಈ ಗೆಲುವಿನಿಂದ ಕರ್ನಾಟಕ ತಂಡವು “ಸಿ’ ಬಣದಲ್ಲಿ 21 ಅಂಕಗ ಳೊಂದಿಗೆ ಅಗ್ರಸ್ಥಾನದಲ್ಲಿದ್ದು ನಾಕೌಟ್‌ ಹಂತಕ್ಕೇರುವ ಸಾಧ್ಯತೆಯನ್ನು ಹೆಚ್ಚಿ ಕೊಂಡಿದೆ. ಲೀಗ್‌ ಹಂತದಲ್ಲಿ ಇನ್ನೆರಡು ಪಂದ್ಯಗಳು ಬಾಕಿ ಉಳಿದಿದೆ. ಕರ್ನಾಟಕ ಮುಂದಿನೆರಡು ಪಂದ್ಯಗಳಲ್ಲಿ ತಮಿಳು ನಾಡು ಮತ್ತು ಚಂಡೀಗಢ ವಿರುದ್ಧœ ಆಡಬೇಕಾಗಿದೆ.
ಒಂದು ವಿಕೆಟಿಗೆ 70 ರನ್‌ ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದ ಕರ್ನಾಟಕ ತಂಡವು ಆಬಳಿಕ ಬ್ಯಾಟಿಂಗ್‌ ಕುಸಿತಕ್ಕೆ ಒಳಗಾಗಿ 99 ರನ್‌ ತಲಪುವಷ್ಟರಲ್ಲಿ 6 ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿತ್ತು. ಆಬಳಿಕ ಪಾಂಡೆ ಸಹಿತ ಶರತ್‌ ಶ್ರೀನಿವಾಸ್‌ (23), ವೈಶಾಖ್‌ (38) ಅವರ ಉತ್ತಮ ಆಟದಿಂದಾಗಿ ಕರ್ನಾಟಕ ತಂಡ ರೋಚಕ ಗೆಲುವು ಕಾಣುವಂತಾಯಿತು.

ತ್ರಿಪುರಕ್ಕೆ ಜಯ
ಅಹ್ಮದಾಬಾದ್‌ನಲ್ಲಿ ನಡೆದ ಇನ್ನೊಂದು ಪಂದ್ಯದ್ಲಿ ತ್ರಿಪುರ ತಂಡವು ಗುಜರಾತ್‌ ತಂಡವನ್ನು 156 ರನ್ನು ಗಳಿಂದ ಸೋಲಿಸಿ ಅಚ್ಚರಿಗೊಳಿಸಿತು.
ಸಂಕ್ಷಿಪ್ತ ಸ್ಕೋರು: ರೈಲ್ವೇಸ್‌ 155 ಮತ್ತು 244; ಕರ್ನಾಟಕ 174 ಮತ್ತು 9 ವಿಕೆಟಿಗೆ 229 (ಮನೀಷ್‌ ಪಾಂಡೆ 67 ಔಟಾಗದೆ, ವೈಶಾಖ್‌ ವಿಜಯಕುಮಾರ್‌ 38, ಆರ್‌. ಸಮರ್ಥ್ 35, ಕೆವಿ ಅನೀಶ್‌ 35, ಆಕಾಶ್‌ ಪಾಂಡೆ 94ಕ್ಕೆ 5).

ಸೌರಾಷ್ಟ್ರಕ್ಕೆ ಗೆಲುವು
ಸೋಲಾಪುರ: ಎಡಗೈ ಸ್ಪಿನ್ನರ್‌ ಪರ್ತ್‌ ಭುತ್‌ ಅವರ ಅಮೋಘ ಬೌಲಿಂಗ್‌ನಿಂದಾಗಿ ಸೌರಾಷ್ಟ್ರ ತಂಡವು ರಣಜಿ “ಎ’ ಬಣದ ಪಂದ್ಯದಲ್ಲಿ ಮಹಾರಾಷ್ಟ್ರವನ್ನು 48 ರನ್ನುಗಳಿಂದ ಸೋಲಿಸಿದೆ.
ಗೆಲ್ಲಲು 208 ರನ್‌ ಗಳಿಸುವ ಗುರಿ ಪಡೆದ ಮಹಾರಾಷ್ಟ್ರ ತಂಡವು ಪರ್ತ್‌ ಭುತ್‌ ಅವರ ದಾಳಿಗೆ ಕುಸಿದು 164 ರನ್ನಿಗೆ ಆಲೌಟಾಗಿ ಶರಣಾಯಿತು. 44 ರನ್ನಿಗೆ 7 ವಿಕೆಟ್‌ ಕಿತ್ತ ಭುತ್‌ ಅವರು ಮಹಾರಾಷ್ಟ್ರದ ಕುಸಿತಕ್ಕೆ ಕಾರಣರಾದರು. ಭುತ್‌ ಅವರಿಗೆ ನೆರವು ನೀಡಿದ ಯುವರಾಜ್‌ಸಿನ್‌Ø ದೊಡಿಯ ಎರಡು ವಿಕೆಟ್‌ ಕಿತ್ತರು.
ಸಂಕ್ಷಿಪ್ತ ಸ್ಕೋರು: ಸೌರಾಷ್ಟ್ರ 202 ಮತ್ತು 164; ಮಹಾರಾಷ್ಟ್ರ 159 ಮತ್ತು 164 (ತರಣ್‌ಜಿತ್‌ ಸಿಂಗ್‌ ದಿಲ್ಲೋನ್‌ 28, ಪರ್ತ್‌ ಭುತ್‌ 44ಕ್ಕೆ 7).

ಮುಂಬಯಿಗೆ ಇನ್ನಿಂಗ್ಸ್‌  ಗೆಲುವು
ಕೋಲ್ಕತಾ: ಮೋಹಿತ್‌ ಅವಸ್ಥಿ ಅವರ ಅಮೋಘ ದಾಳಿಯ ನೆರವಿನಿಂದ ಮುಂಬಯಿ ತಂಡವು ರಣಜಿ ಟ್ರೋಫಿಯ “ಬಿ’ ಬಣದ ಪಂದ್ಯದಲ್ಲಿ ಬೆಂಗಾಲ್‌ ವಿರುದ್ಧ ಇನ್ನಿಂಗ್ಸ್‌ ಮತ್ತು ನಾಲ್ಕು ರನ್ನುಗಳಿಂದ ಜಯ ಸಾಧಿಸಿದೆ.
ಫಾಲೋ ಆನ್‌ ಪಡೆದಿದ್ದ ಬೆಂಗಾಲ್‌ ತಂಡವು ತನ್ನ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅವಸ್ಥಿ ಅವರ ದಾಳಿಗೆ ಕುಸಿದು 209 ರನ್ನಿಗೆ ಆಲೌಟಾಯಿತು. ಅವಸ್ಥಿ 52 ರನ್ನಿಗೆ 7 ವಿಕೆಟ್‌ ಕಿತ್ತು ಬೆಂಗಾಲ್‌ ತಂಡದ ಕುಸಿತಕ್ಕೆ ಕಾರಣರಾದರು. ಅವಸ್ಥಿ ಈ ಪಂದ್ಯದಲ್ಲಿ 10 ವಿಕೆಟ್‌ ಕಿತ್ತು ಸಂಭ್ರಮಿಸಿದ್ದಾರೆ. ಈ ಸಾಧನೆಗಾಗಿ ಅವಸ್ಥಿ ರಣಜಿಯಲ್ಲಿ ಮೂರನೇ ಬಾರಿ ಐದು ವಿಕೆಟ್‌ಗಳ ಗೊಂಚಲನ್ನು ಪಡೆದರು.

ಬೆಂಗಾಲ್‌ ಮೊದಲ ಇನ್ನಿಂಗ್ಸ್‌ನಲ್ಲಿ 199 ರನ್ನಿಗೆ ಆಲೌಟಾಗಿತ್ತು. ಅನುಸ್ತುಪ್‌ ಮಜುಂದಾರ್‌ 109 ರನ್‌ ಹೊಡೆದಿದ್ದರು. ಇದರಿಂದಾಗಿ ಮುಂಬಯಿ ಮೊದಲ ಇನ್ನಿಂಗ್ಸ್‌ನಲ್ಲಿ 213 ರನ್‌ ಮುನ್ನಡೆ ಗಳಿಸುವಂತಾಯಿತು. ಈ ಮೊದಲು ಮುಂಬಯಿ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 412 ರನ್‌ ಗಳಿಸಿತ್ತು.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.