SEP ಜಾರಿಗೆ ಮುಂದಾದ ರಾಜ್ಯ ಸರ್ಕಾರದ ವಿರುದ್ಧ ಅಶ್ವತ್ಥನಾರಾಯಣ ಕಿಡಿ
Team Udayavani, Feb 5, 2024, 10:09 PM IST
ಬೆಂಗಳೂರು: ಎನ್ಇಪಿ ರದ್ದುಪಡಿಸಿ ಎಸ್ಇಪಿ ಜಾರಿಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ, ವಿದ್ಯಾರ್ಥಿ ಹಿತಕ್ಕೆ ಧಕ್ಕೆ ತರುವ ಕೆಲಸವನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.
ಪಕ್ಷ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, 3ನೇ ರಾಷ್ಟ್ರೀಯ ಶಿಕ್ಷಣ ನೀತಿ ಇದಾಗಿದ್ದು, ಶಿಕ್ಷಣ ಗುಣಮಟ್ಟ ಹೆಚ್ಚಳ, ಅದರಲ್ಲಿರುವ ನ್ಯೂನತೆಗಳನ್ನು ಹೋಗಲಾಡಿಸಲು ಪೂರಕವಾಗಿದೆ. ಸಾಕಷ್ಟು ಪೂರ್ವತಯಾರಿ ಮಾಡಿ, 6 ವರ್ಷಕ್ಕಿಂತ ಹೆಚ್ಚು ಸಮಯ ಸಮಾಲೋಚನೆ ಬಳಿಕ ಜಾರಿಗೊಳಿಸಲಾಗಿದೆ. ಅದರ ಅನುಷ್ಠಾನ ಆಗಿ 3 ವರ್ಷಗಳಾಗಿದ್ದು, 2020ರಲ್ಲಿ ಕ್ರಿಯಾ ಯೋಜನೆಯನ್ನು ಸಚಿವ ಸಂಪುಟ ಒಪ್ಪಿದೆ. ಅದರ ಆಧಾರದಲ್ಲೇ ಅನುಷ್ಠಾನ ಕಾರ್ಯ ನಡೆದಿದೆ ಎಂದು ವಿವರಿಸಿದರು.
ಶಿಕ್ಷಣದ ವಿಚಾರದಲ್ಲಿ ವಿನಾಕಾರಣವಾಗಿ ಗೊಂದಲ ನಿರ್ಮಿಸಲಾಗುತ್ತಿದೆ. ರಾಜ್ಯ ಶಿಕ್ಷಣ ನೀತಿ ಸಂಬಂಧ ತಾತ್ಕಾಲಿಕ ವರದಿ ನೀಡಿದ್ದು, 4 ವರ್ಷದ ಪದವಿ ಶಿಕ್ಷಣ ಬೇಕಿಲ್ಲ; 3 ವರ್ಷದ ಪದವಿಯೇ ಇರಲಿ ಎಂಬ ಸಲಹೆ, ಮಲ್ಟಿ ಎಂಟ್ರಿ, ಮಲ್ಟಿ ಎಕ್ಸಿಟ್ಅನ್ನು ರದ್ದು ಮಾಡುವಂತೆ ಸೂಚಿಸಲಾಗಿದೆ ಎಂಬ ಮಾಹಿತಿ ಇದೆ. 4 ವರ್ಷದ ಪದವಿ ಕೋರ್ಸ್ ವಿದ್ಯಾರ್ಥಿ ಆಯ್ಕೆ ಆಧಾರಿತವಾಗಿ ಇರುತ್ತದೆ. ವಿಶ್ವಮಟ್ಟದಲ್ಲಿ 4 ವರ್ಷದ ಪದವಿ ಕೋರ್ಸ್ ಇದೆ. ಬೇರೆ ದೇಶದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ತೆರಳುವವರಿಗೆ 4 ವರ್ಷದ ಪದವಿ ಓದಿರಬೇಕಾಗುತ್ತದೆ. ಡಾಕ್ಟರೇಟ್ ಪ್ರೋಗ್ರಾಂಗೆ ತೆರಳಲು ಇದರ ಆವಶ್ಯಕತೆ ಇದೆ. ಇಲ್ಲಿಯೇ ಮಾಸ್ಟರ್ಸ್ ಮಾಡುವುದಾದರೆ ಒಂದು ವರ್ಷ ಮಾತ್ರ ಸಾಕು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
BCCI: ಇಂದು ಬಿಸಿಸಿಐ ವಾರ್ಷಿಕ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.