Lok sabha election: ಕಾಂಗ್ರೆಸ್‌ನಂತೆ ಈಗ ಕಮಲದಲ್ಲೂ ಟಿಕೆಟ್‌ ಸಮರ!


Team Udayavani, Feb 6, 2024, 4:53 PM IST

15

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಸಮೀಪದ ಬೆನ್ನಲ್ಲೇ ಕ್ಷೇತ್ರದಲ್ಲಿ ಟಿಕೆಟ್‌ ಕಲಹ ಎಲ್ಲಾ ಪಕ್ಷಗಳಿಗೂ ವಿಸ್ತರಿಸ ತೊಡಗಿದೆ. ಕಾಂಗ್ರೆಸ್‌ ಪಾಳೆಯದಲ್ಲಿ ಮಾತ್ರ ಕಾಣುತ್ತಿದ್ದ ಟಿಕೆಟ್‌ ಆಕಾಂಕ್ಷಿಗಳ ಶೀತಲ ಸಮರ ಇದೀಗ ಬಿಜೆಪಿಗೂ ಅಂಟಿಕೊಂಡಿದೆ.

ಹೌದು, ಮಾಜಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌  ಹಾಗೂ ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ನಡುವೆ ಕಮಲ ಟಿಕೆಟ್‌ಗೆ ಪೈಪೋಟಿ ಶುರುವಾಗಿರು ವುದು ಕ್ಷೇತ್ರದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿದ್ದು, ಟಿಕೆಟ್‌ ಕದನದಲ್ಲಿ ಗೆಲ್ಲುವ ಕುದುರೆ ಯಾರೆಂದು ಕ್ಷೇತ್ರದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಸಂಚಲನ ತಂದ ಡಾ.ಕೆ.ಸುಧಾಕರ್‌ ಹೇಳಿಕೆ: ಲೋಕಸಭಾ ಚುನಾವಣೆಗೆ ಜೆಡಿಎಸ್‌ ವರಿಷ್ಠರಾದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನನಗೆ ಒಂದು ರೀತಿ ಹಸಿರು ನಿಶಾನೆ ತೋರಿದ್ದಾರೆಂದು, ಮುಂದಿನ ಲೋಕ ಸಭಾ ಚುನಾವಣೆಗೆ ಬಿಜೆಪಿ ಪ್ರಬಲ ಟಿಕೆಟ್‌ ಆಕಾಂಕ್ಷಿ ಆಗಿರುವ ಮಾಜಿ ಆರೋಗ್ಯ ಸಚಿವ ರಾದ ಡಾ.ಕೆ.ಸುಧಾಕರ್‌ ಭಾನುವಾರ ಚೇಳೂರು ತಾಲೂಕಿನ ಚಾಕವೇಲು ಗ್ರಾಮದಲ್ಲಿ ನೀಡಿರುವ ಹೇಳಿಕೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಒಂದು ರೀತಿ ಸಂಚಲನ ಸೃಷ್ಠಿಸಿದೆ.

ಕಳೆದ ಸಂಕ್ರಾಂತಿಯೆಂದೇ ಎನ್‌ಡಿಎ ಮೈತ್ರಿ ಭಾಗವಾಗಿರುವ ಜೆಡಿಎಸ್‌ ಪಕ್ಷದ ವರಿಷ್ಠರನ್ನು ಭೇಟಿ ಬಳಿಕ ದೆಹಲಿ ಅಂಗಳದಲ್ಲಿ ಬಿಜೆಪಿ ರಾಷ್ಟ್ರೀಯ ವರಿಷ್ಠರನ್ನು ಭೇಟಿ ಮಾಡಿ ಬಂದಿರುವ ಡಾ.ಕೆ.ಸುಧಾಕರ್‌, ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಭರದ ತಯಾರಿ ನಡೆಸಿದ್ದು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ.

ಇದು ಸಹಜವಾಗಿಯೇ ಲೋಕಸಭಾ ಕ್ಷೇತ್ರದ ಟಿಕೆಟ್‌ ಕಣ್ಣಿಟ್ಟಿರುವ ಮೊತ್ತೂಬ್ಬ ಶಾಸಕ, ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಕಣ್ಣು ಕೆಂಪಗಾಗಿಸಿದೆ. ವಿಶ್ವನಾಥ್‌ ತಮ್ಮ ಪುತ್ರ ಅಲೋಕ್‌ ವಿಶ್ವನಾಥ್‌ಗೆ ಟಿಕೆಟ್‌ ಕೊಡಿಸಲು ತೆರೆಮೆರೆಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಓಡಾಡಿ ಪಕ್ಷದ ಮುಖಂಡರನ್ನು ಅದರಲ್ಲೂ ಜೆಡಿಎಸ್‌ ಪಕ್ಷದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ. ಅನ್ಯಪಕ್ಷಗಳ ಮುಖಂಡರಿಗೆ ಉಚಿತವಾಗಿ ತಿರುಮಲ ತಿರುಪತಿ ದರ್ಶನ ಮಾಡಿ ಮನ ವೊಲಿಸುತ್ತಿದ್ದಾರೆ. ಯಲಹಂಕ ದೊಡ್ಡ ಕ್ಷೇತ್ರವಾಗಿದ್ದು ತನ್ನ ಪುತ್ರನಿಗೆ ಟಿಕೆಟ್‌ ಕೊಡಿ ಎಂದು ಶಾಸಕ ವಿಶ್ವನಾಥ್‌ ಪಕ್ಷದ ವರಿಷ್ಠರಿಗೆ ಒತ್ತಡ ಹಾಕುತ್ತಿದ್ದಾರೆ.

ಸುಧಾಕರ್‌ ಜೆಡಿಎಸ್‌ನಿಂದ ಸ್ಪರ್ಧಿಸುವ ರೀತಿ ಕಾಣುತ್ತಿದೆ. ನಾನು ಕೂಡ ಉಸ್ತುವಾರಿಯಾಗಿ ಕೆಲಸ ಮಾಡಿದ್ದೇನೆ. ನನ್ನ ಮಗನಿಗೆ ಟಿಕೆಟ್‌ ಕೊಡಬೇಕೆಂದು ಒತ್ತಾಯಿಸಿ ನನ್ನ ಅಭಿಪ್ರಾಯ ತಿಳಿಸಿದ್ದೇನೆ.  ಸುಧಾಕರ್‌ಗೆ ಯಾರು ಗ್ರೀನ್‌ ಸಿಗ್ನಲ್‌ ಕೊಟ್ಟಿಲ್ಲ. ಏಕಪಕ್ಷೀಯವಾಗಿ ವರ್ತಿಸಬಾರದು. ಸುಧಾಕರ್‌ ನಮ್ಮ ಪಕ್ಷದವರಾಗಿದ್ದರೆ  ಮೋದಿ, ಅಮಿತ್‌ ಶಾ , ಹೆಸರು ಹೇಳದೇ ಎಚ್‌ಡಿಡಿ,ಎಚ್‌ಡಿಕೆ ಹೆಸರು ಏಕೆ ಹೇಳಿದರು? ಚಿಕ್ಕಬಳ್ಳಾಪುರದಲ್ಲಿ  ಬಿಜೆಪಿಯವರೇ ಮತ್ತೆ ಸಂಸದರಾಗಬೇಕು.-ಎಸ್‌.ಆರ್‌.ವಿಶ್ವನಾಥ್‌, ಯಲಹಂಕ ಶಾಸಕ

ಬಿಜೆಪಿ ಪಕ್ಷದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಹಾಗೂ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿ ಆಗಲು ನನ್ನ ಶ್ರಮ ಹಾಗೂ ತ್ಯಾಗ ಇದೆ. ನಮಗೆ ಈಗ ಅನ್ಯಾಯವಾ ಗಿದೆ. ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಪಕ್ಷದಿಂದ ಟಿಕೆಟ್‌ ಕೊಡುವ‌ಂತೆ ಕೇಳುವುದರಲ್ಲಿ ತಪ್ಪೇನಿದೆ? ವರಿಷ್ಠರನ್ನು ಟಿಕೆಟ್‌ ಕೇಳದೇ ಮತ್ತೆ ಯಾರನ್ನು ಕೇಳಬೇಕು. -ಡಾ.ಕೆ.ಸುಧಾಕರ್‌, ಮಾಜಿ ಸಚಿವ

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

12

Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!

suicide (2)

Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.