Lok sabha election: ಕಾಂಗ್ರೆಸ್‌ನಂತೆ ಈಗ ಕಮಲದಲ್ಲೂ ಟಿಕೆಟ್‌ ಸಮರ!


Team Udayavani, Feb 6, 2024, 4:53 PM IST

15

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಸಮೀಪದ ಬೆನ್ನಲ್ಲೇ ಕ್ಷೇತ್ರದಲ್ಲಿ ಟಿಕೆಟ್‌ ಕಲಹ ಎಲ್ಲಾ ಪಕ್ಷಗಳಿಗೂ ವಿಸ್ತರಿಸ ತೊಡಗಿದೆ. ಕಾಂಗ್ರೆಸ್‌ ಪಾಳೆಯದಲ್ಲಿ ಮಾತ್ರ ಕಾಣುತ್ತಿದ್ದ ಟಿಕೆಟ್‌ ಆಕಾಂಕ್ಷಿಗಳ ಶೀತಲ ಸಮರ ಇದೀಗ ಬಿಜೆಪಿಗೂ ಅಂಟಿಕೊಂಡಿದೆ.

ಹೌದು, ಮಾಜಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌  ಹಾಗೂ ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ನಡುವೆ ಕಮಲ ಟಿಕೆಟ್‌ಗೆ ಪೈಪೋಟಿ ಶುರುವಾಗಿರು ವುದು ಕ್ಷೇತ್ರದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿದ್ದು, ಟಿಕೆಟ್‌ ಕದನದಲ್ಲಿ ಗೆಲ್ಲುವ ಕುದುರೆ ಯಾರೆಂದು ಕ್ಷೇತ್ರದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಸಂಚಲನ ತಂದ ಡಾ.ಕೆ.ಸುಧಾಕರ್‌ ಹೇಳಿಕೆ: ಲೋಕಸಭಾ ಚುನಾವಣೆಗೆ ಜೆಡಿಎಸ್‌ ವರಿಷ್ಠರಾದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನನಗೆ ಒಂದು ರೀತಿ ಹಸಿರು ನಿಶಾನೆ ತೋರಿದ್ದಾರೆಂದು, ಮುಂದಿನ ಲೋಕ ಸಭಾ ಚುನಾವಣೆಗೆ ಬಿಜೆಪಿ ಪ್ರಬಲ ಟಿಕೆಟ್‌ ಆಕಾಂಕ್ಷಿ ಆಗಿರುವ ಮಾಜಿ ಆರೋಗ್ಯ ಸಚಿವ ರಾದ ಡಾ.ಕೆ.ಸುಧಾಕರ್‌ ಭಾನುವಾರ ಚೇಳೂರು ತಾಲೂಕಿನ ಚಾಕವೇಲು ಗ್ರಾಮದಲ್ಲಿ ನೀಡಿರುವ ಹೇಳಿಕೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಒಂದು ರೀತಿ ಸಂಚಲನ ಸೃಷ್ಠಿಸಿದೆ.

ಕಳೆದ ಸಂಕ್ರಾಂತಿಯೆಂದೇ ಎನ್‌ಡಿಎ ಮೈತ್ರಿ ಭಾಗವಾಗಿರುವ ಜೆಡಿಎಸ್‌ ಪಕ್ಷದ ವರಿಷ್ಠರನ್ನು ಭೇಟಿ ಬಳಿಕ ದೆಹಲಿ ಅಂಗಳದಲ್ಲಿ ಬಿಜೆಪಿ ರಾಷ್ಟ್ರೀಯ ವರಿಷ್ಠರನ್ನು ಭೇಟಿ ಮಾಡಿ ಬಂದಿರುವ ಡಾ.ಕೆ.ಸುಧಾಕರ್‌, ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಭರದ ತಯಾರಿ ನಡೆಸಿದ್ದು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ.

ಇದು ಸಹಜವಾಗಿಯೇ ಲೋಕಸಭಾ ಕ್ಷೇತ್ರದ ಟಿಕೆಟ್‌ ಕಣ್ಣಿಟ್ಟಿರುವ ಮೊತ್ತೂಬ್ಬ ಶಾಸಕ, ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಕಣ್ಣು ಕೆಂಪಗಾಗಿಸಿದೆ. ವಿಶ್ವನಾಥ್‌ ತಮ್ಮ ಪುತ್ರ ಅಲೋಕ್‌ ವಿಶ್ವನಾಥ್‌ಗೆ ಟಿಕೆಟ್‌ ಕೊಡಿಸಲು ತೆರೆಮೆರೆಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಓಡಾಡಿ ಪಕ್ಷದ ಮುಖಂಡರನ್ನು ಅದರಲ್ಲೂ ಜೆಡಿಎಸ್‌ ಪಕ್ಷದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ. ಅನ್ಯಪಕ್ಷಗಳ ಮುಖಂಡರಿಗೆ ಉಚಿತವಾಗಿ ತಿರುಮಲ ತಿರುಪತಿ ದರ್ಶನ ಮಾಡಿ ಮನ ವೊಲಿಸುತ್ತಿದ್ದಾರೆ. ಯಲಹಂಕ ದೊಡ್ಡ ಕ್ಷೇತ್ರವಾಗಿದ್ದು ತನ್ನ ಪುತ್ರನಿಗೆ ಟಿಕೆಟ್‌ ಕೊಡಿ ಎಂದು ಶಾಸಕ ವಿಶ್ವನಾಥ್‌ ಪಕ್ಷದ ವರಿಷ್ಠರಿಗೆ ಒತ್ತಡ ಹಾಕುತ್ತಿದ್ದಾರೆ.

ಸುಧಾಕರ್‌ ಜೆಡಿಎಸ್‌ನಿಂದ ಸ್ಪರ್ಧಿಸುವ ರೀತಿ ಕಾಣುತ್ತಿದೆ. ನಾನು ಕೂಡ ಉಸ್ತುವಾರಿಯಾಗಿ ಕೆಲಸ ಮಾಡಿದ್ದೇನೆ. ನನ್ನ ಮಗನಿಗೆ ಟಿಕೆಟ್‌ ಕೊಡಬೇಕೆಂದು ಒತ್ತಾಯಿಸಿ ನನ್ನ ಅಭಿಪ್ರಾಯ ತಿಳಿಸಿದ್ದೇನೆ.  ಸುಧಾಕರ್‌ಗೆ ಯಾರು ಗ್ರೀನ್‌ ಸಿಗ್ನಲ್‌ ಕೊಟ್ಟಿಲ್ಲ. ಏಕಪಕ್ಷೀಯವಾಗಿ ವರ್ತಿಸಬಾರದು. ಸುಧಾಕರ್‌ ನಮ್ಮ ಪಕ್ಷದವರಾಗಿದ್ದರೆ  ಮೋದಿ, ಅಮಿತ್‌ ಶಾ , ಹೆಸರು ಹೇಳದೇ ಎಚ್‌ಡಿಡಿ,ಎಚ್‌ಡಿಕೆ ಹೆಸರು ಏಕೆ ಹೇಳಿದರು? ಚಿಕ್ಕಬಳ್ಳಾಪುರದಲ್ಲಿ  ಬಿಜೆಪಿಯವರೇ ಮತ್ತೆ ಸಂಸದರಾಗಬೇಕು.-ಎಸ್‌.ಆರ್‌.ವಿಶ್ವನಾಥ್‌, ಯಲಹಂಕ ಶಾಸಕ

ಬಿಜೆಪಿ ಪಕ್ಷದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಹಾಗೂ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿ ಆಗಲು ನನ್ನ ಶ್ರಮ ಹಾಗೂ ತ್ಯಾಗ ಇದೆ. ನಮಗೆ ಈಗ ಅನ್ಯಾಯವಾ ಗಿದೆ. ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಪಕ್ಷದಿಂದ ಟಿಕೆಟ್‌ ಕೊಡುವ‌ಂತೆ ಕೇಳುವುದರಲ್ಲಿ ತಪ್ಪೇನಿದೆ? ವರಿಷ್ಠರನ್ನು ಟಿಕೆಟ್‌ ಕೇಳದೇ ಮತ್ತೆ ಯಾರನ್ನು ಕೇಳಬೇಕು. -ಡಾ.ಕೆ.ಸುಧಾಕರ್‌, ಮಾಜಿ ಸಚಿವ

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.