ಅಕ್ಕಿಆಲೂರು: ದೇಶದ ಸಾಹಿತ್ಯ ಲೋಕಕ್ಕೆ ಕನ್ನಡದ ಕೊಡುಗೆ ಅನನ್ಯ


Team Udayavani, Feb 6, 2024, 5:23 PM IST

ಅಕ್ಕಿಆಲೂರು: ದೇಶದ ಸಾಹಿತ್ಯ ಲೋಕಕ್ಕೆ ಕನ್ನಡದ ಕೊಡುಗೆ ಅನನ್ಯ

ಉದಯವಾಣಿ ಸಮಾಚಾರ
ಅಕ್ಕಿಆಲೂರು: ವಿಶ್ವಮಾನ್ಯವಾಗಿರುವ ಭಾರತ ದೇಶದಲ್ಲಿಂದು ನಡೆದಿರುವ ಸಾಕಷ್ಟು ಪೂರಕ ಬದಲಾವಣೆಗಳಿಗೆ ನಾವೆಲ್ಲರೂ
ಸಾಕ್ಷಿಯಾಗುತ್ತಿರುವುದು ನಮ್ಮ ಹೆಮ್ಮೆಯ ವಿಷಯವಾಗಿದೆ. ದೇಶದ ಸಾರಸ್ವತ ಲೋಕಕ್ಕೆ ಕರುನಾಡಿನ ಕೊಡುಗೆ ಅಪಾರವಾಗಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ಮುಖ್ಯಸ್ಥ ಡಾ| ಎ.ಸಿ. ವಾಲಿ ಹೇಳಿದರು.

ಪಟ್ಟಣದಲ್ಲಿ ಶ್ರೀ ದುಂಡಿಬಸವೇಶ್ವರ ಜನಪದ ಕಲಾ ಸಂಘದಿಂದ ಆಯೋಜಿಸಿದ್ದ 32ನೇ ಕನ್ನಡ ನುಡಿ ಸಂಭ್ರಮದ
ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಯಾರನ್ನು ಕೇವಲವಾಗಿ ಕಾಣಬಾರದು. ಎಲ್ಲರಲ್ಲೂ ಅಸಾಮಾನ್ಯ
ಸಾಮರ್ಥವಿರುತ್ತದೆ. ಅದನ್ನು ಗುರುತಿಸುವ ಪ್ರಯತ್ನ ನಮ್ಮದಾಗಬೇಕು.

ಸಮಾಜದಲ್ಲಿ ಮಾನವೀಯತೆ ಮತ್ತು ಧರ್ಮದ ಗುಣಗಳು ಹೆಚ್ಚಾಗುತ್ತಿದೆ. ಕನ್ನಡ ಕಟ್ಟಲು ಸರ್ಕಾರದ ಮೇಲೆ ನಾವು ಅವಲಂಬಿತರಾಗದೇ, ಸ್ವಯಂ ಪ್ರೇರಣೆಯಿಂದ ನಾಡಾಭಿಮಾನ ರಾಷ್ಟ್ರೀಯ ಮನೋಧರ್ಮ, ದೇಶಾಭಿಮಾನ ಬೆಳೆಸಿಕೊಳ್ಳಬೇಕು. ಭಾರತೀಯ ಸಂಸ್ಕೃತಿ ಮತ್ತು ಪ್ರಾಚೀನತೆಗೆ ಕನ್ನಡ ಬಹುದೊಡ್ಡ ಕೊಡುಗೆ ನೀಡಿದೆ. ಅದನ್ನು ನಾವೇ ಉಳಿಸಿಕೊಳ್ಳಬೇಕು. ನಮ್ಮ ಮೂಲಸನಾತನ ಸಂಸ್ಕೃತಿ, ಆಚರಣೆಗಳಿಗೆ ಹಿನ್ನಡೆಯಾಗದಂತೆ ನಾವು ಜಾಗೃತರಾಗಬೇಕು. ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಬೇಕೆಂದರೂ ಸಿಗದ ನಮ್ಮ ಶ್ರೇಷ್ಠ ಆಚಾರ-ವಿಚಾರಗಳನ್ನು ನಾವೆ ಗೌರವಿಸಬೇಕು ಎಂದರು.

ರಾಜ್ಯ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ| ಸತೀಶ ಕುಲಕರ್ಣಿ ಮಾತನಾಡಿ, ಯುವ ಸಾಹಿತಿಗಳಿಗೆ ವಿನೂತನ ಆಲೋಚನೆಗಳಿರಬೇಕು. ವೈಚಾರಿಕತೆ ಮತ್ತು ನೈತಿಕತೆ ಆಧಾರದ ಮೇಲೆ ಸಾಹಿತ್ಯಗಳು  ರಚನೆಯಾಗಿ ಸಮುದಾಯದ ಬೆಳಕಾಗಿ ಪ್ರಜ್ವಲಿಸುವಂತಾಗಬೇಕು. ಗಡಿಭಾಗಗಳಲ್ಲಿ ಇಂದಿಗೂ ನಡೆದಿರುವ ಭಾಷೆ, ನೆಲ-ಜಲದ ಕುರಿತ ವೈರುಧ್ಯ ಕನ್ನಡಿಗರ ಭಾವನೆಗಳಿಗೆ ಧಕ್ಕೆಯುಂಟು ಮಾಡುತ್ತಿದೆ. ಜನಪದ ಸಂಸ್ಕೃತಿಗೆ ಘಾಸಿಯಾದಾಗ ನಮ್ಮ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ ಎಂದು ಹೇಳಿದರು.

ಹೈಕೋರ್ಟ್‌ ಮತ್ತು ಸುಪ್ರೀಂಕೋರ್ಟ್‌ ನ್ಯಾಯವಾದಿ ಸಂದೀಪ ಪಾಟೀಲ ಮಾತನಾಡಿ, ಕನ್ನಡ ಭಾಷೆ ಬೆಳೆಯುವುದು ಜೈಕಾರ
ಹಾಕುವುದರಿಂದಲ್ಲ ಬದಲಿಗೆ ಓದುವುದು, ಬರೆಯುವುದು ಮತ್ತು ಮಾತನಾಡುವುದರ ಮೇಲೆ ಕನ್ನಡದ ಅಸ್ತಿತ್ವ ಅಡಗಿದೆ. ರಾಷ್ಟ್ರೀಯ ಮನೋಧರ್ಮ, ನಾಡಾಭಿಮಾನ ಅಳವಡಿಸಿಕೊಂಡರೆ ಶಿಕ್ಷಣವಿಲ್ಲದಿದ್ದರು ಜಗತ್ತು ಆಳುವ ನೈತಿಕ ಆತ್ಮವಿಶ್ವಾಸ ನಮ್ಮಲ್ಲಿ ಕರಗತವಾಗುತ್ತದೆ ಎಂದರು.

ವಿರಕ್ತಮಠದ ಶಿವಬಸವ ಶ್ರೀಗಳು ಮಾತನಾಡಿದರು. ನಂತರ ಪ್ರಶಾಂತ ದೈವಜ್ಞ ವಿರಚಿತ ಬಾಬಣ್ಣನ ಚುಟುಕುಗಳು ಕೃತಿ
ಬಿಡುಗಡೆಗೊಂಡಿತು. ಹಾವೇರಿ ಪೃಥ್ವಿ ನೃತ್ಯ ಲೋಕ ತಂಡದಿಂದ, ಕಾಲೇಜು ವಿಭಾಗದಿಂದ ನಡೆದ ನೃತ್ಯ ಸಂಭ್ರಮ ಮನಸೂರೆಗೊಂಡಿತು. ಶಿವಮೊಗ್ಗದ ಅನುಷಾ ಮೇಲೋಡಿಸ್‌, ಸರಿಗಮಪ ಖ್ಯಾತಿಯ ಮಹನ್ಯಾ ಪಾಟೀಲ ಗೀತ ಸಂಭ್ರಮ ನಡೆಸಿಕೊಟ್ಟರು. ತಹಶೀಲ್ದಾರ್‌ ರವಿ ಕೊರವರ, ವಿ.ವಿ. ಸಾಲಿಮಠ, ಶರತ್‌ ಸಣ್ಣವೀರಪ್ಪನವರ, ರಾಜಶೇಖರ ಮಳಗಿ, ಷಣ್ಮುಖಪ್ಪ ಮುಚ್ಚಂಡಿ ಸೇರಿದಂತೆ  ಪ್ರಮುಖರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.