Scam: ಆರೋಪಿ ವಿ.ವಿ. ಕುಲಸಚಿವ ಅಮಾನತು, ಕುಲಪತಿ ರಾಜೀನಾಮೆಗೆ ಎಬಿವಿಪಿ ಆಗ್ರಹ

ಕೋಚಿಮುಲ್‌ ಪರೀಕ್ಷೆಯಲ್ಲಿ ಅವ್ಯವಹಾರ

Team Udayavani, Feb 6, 2024, 11:36 PM IST

Scam: ಆರೋಪಿ ವಿ.ವಿ. ಕುಲಸಚಿವ ಅಮಾನತು, ಕುಲಪತಿ ರಾಜೀನಾಮೆಗೆ ಎಬಿವಿಪಿ ಆಗ್ರಹ

ಮಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ (ಕೋಚಿಮುಲ್‌) ಉದ್ಯೋಗಿಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಕೋಟ್ಯಂತರ ರೂ. ಅವ್ಯವಹಾರ ಪ್ರಕರಣದಲ್ಲಿ ಕೈಜೋಡಿಸಿದ ಮಂಗಳೂರು ವಿ.ವಿ.ಯ ಅಧಿಕಾರಿಗಳನ್ನು ವಜಾಮಾಡಬೇಕು, ಪರೀಕ್ಷಾಂಗ ಕುಲಸಚಿವರನ್ನು ಅಮಾನತುಗೊಳಿಸಬೇಕು ಹಾಗೂ ಪ್ರಭಾರ ಕುಲಪತಿ ರಾಜೀನಾಮೆ ನೀಡಬೇಕು, ರಾಜ್ಯ ಸರಕಾರ ಕೂಡಲೇ ಖಾಯಂ ಕುಲಪತಿಯನ್ನು ನೇಮಿಸಬೇಕು ಎಂದು ಅಖಿಲಭಾರತೀಯ ವಿದ್ಯಾರ್ಥಿ ಪರಿಷತ್‌ ಮಂಗಳೂರು ಆಗ್ರಹಿಸಿದೆ.

ರಾಷ್ಟ್ರೀಯ ಕಾರ್ಯಕಾರಿಆಣಿ ಸದಸ್ಯ ಶ್ರೀರಾಮ್‌ ಅಂಗೀರಸ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೋಚಿಮುಲ್‌ ಪರೀಕ್ಷಾ ಅವ್ಯವಹಾರ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ವ್ಯವಸ್ಥಾಪಕ ನಿರ್ದೇಶಕ, ಅಧಿಕಾರಿಗಳು, ಕೆಲವು ನಿರ್ದೇಶಕರನ್ನು ಇಡಿ ತನಿಖೆ ನಡೆಸಿ, ಮಾಹಿತಿ ಕಲೆ ಹಾಕಿದೆ. ಮಂಗಳೂರು ವಿ.ವಿ.ಗೂ ದಾಳಿ ನಡೆಸಿತ್ತು. ಪರೀಕ್ಷಾಂಗ ಕುಲಸಚಿವ ಪ್ರೊ| ರಾಜು ಚೆಲ್ಲಣ್ಣನವರ್‌ ಪರೀಕ್ಷೆಯ ಜವಾಬ್ದಾರಿ ವಹಿಸಿಕೊಂಡಿದ್ದರು. ಅವರ ಮೇಲೆ ಪ್ರಶ್ನೆಪತ್ರಿಕೆ ಮಾರಾಟ ಆರೋಪವಿದ್ದು, ಇಡಿ ತಂಡದ ದಾಳಿ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಬೇಕು ಎಂದರು.

“ವಿವಿ ಚಲೋ’ ಎಚ್ಚರಿಕೆ
ವಿ.ವಿ. ಅಧಿಕಾರಿಗಳ ಅಸಮರ್ಪಕ ಕಾರ್ಯನಿರ್ವಹಣೆಯಿಂದ ಪರೀûಾ ನಿರ್ವಹಣೆಯಲ್ಲಿ ಎಡವಿದೆ. ಅನೇಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣ, ವಿದೇಶಿ ಉದ್ಯೋಗದಿಂದ ವಂಚಿತಗೊಳ್ಳುತ್ತಿದ್ದಾರೆ. ಈ ಬಗ್ಗೆ ಇರದ ಆಸಕ್ತಿ ಹೊರಗಿನ ಪರೀಕ್ಷೆ ನಡೆಸಲು ಇರುವುದು ಖೇದಕರ. ಗೊಂದಲದ ಗೂಡಾಗಿರುವ ವಿ.ವಿ.ಯಲ್ಲಿ ಶೈಕ್ಷಣಿಕ ಚಟುವಟಿಕೆ ಸುಗಮವಾಗಿ ನಡೆಯಲು ಸರಕಾರ ಗಮನ ಹರಿಸದೇ ಇದ್ದರೆ ವಿ.ವಿ. ವ್ಯಾಪ್ತಿಯ ಎಲ್ಲ ಕಾಲೇಜುಗಳ ವಿದ್ಯಾರ್ಥಿಗಳನ್ನು ಸೇರಿಸಿ “ವಿವಿ ಚಲೋ’ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

7 ತಿಂಗಳಿಂದ ಖಾಯಂ ಕುಲಪತಿ ನೇಮಕವಾಗಿಲ್ಲ. ಸಿಂಡಿಕೇಟ್‌ ಸದಸ್ಯರನ್ನು ನೇಮಿಸಿರುವ ಸರಕಾರ
ಕುಲಪತಿ ನೇಮಕದ ವಿಚಾರದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ. ಇದರಿಂದಾಗಿ ಶೈಕ್ಷಣಿಕ ಚಟು ವಟಿಕೆಗಳಲ್ಲಿ ಅನಿಶ್ಚಿತತೆ ತಲೆದೋರಿದೆ. ಘಟಿಕೋತ್ಸವ ಸಮೀಪಿಸುತ್ತಿದ್ದು, ಪ್ರಭಾರ ಕುಲಪತಿ ಕರ್ತವ್ಯದಲ್ಲಿದ್ದಾರೆ, ಕುಲಸಚಿವರು (ಆಡಳಿತ) ಅಧಿಕಾರ ವಹಿಸಿಕೊಂಡಿಲ್ಲ. ಇಡಿ ದಾಳಿಯ ಬಳಿಕ ಪರೀಕ್ಷಾಂಗ ಕುಲಸಚಿವರು ಆರೋಗ್ಯದ ಕಾರಣ ನೀಡಿ ಆಸ್ಪತ್ರೆಯಲ್ಲಿದ್ದಾರೆ. ಹಿರಿಯ ಸಿಬಂದಿ,ಅಧ್ಯಾಪಕರಿಗೆ ಜವಾಬ್ದಾರಿ ಹೊರಿಸ ಲಾಗಿದೆ. ಹೀಗಾಗಿ ಮುಖ್ಯ ತೀರ್ಮಾನ ತೆಗೆದುಕೊಳ್ಳಲು ಸಾಧ್ಯ ವಾಗುತ್ತಿಲ್ಲ. ಆದ್ದರಿಂದ ಕೂಡಲೇ ಕುಲಪತಿ ನೇಮಿಸಲು ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ರಾಜ್ಯ ಸಹ ಕಾರ್ಯದರ್ಶಿ ಹರ್ಷಿತ್‌ , ವಿಭಾಗ ಸಂಚಾಲಕ ನಿಶಾನ್‌ ಆಳ್ವ, ತಾಲೂಕು ಸಂಚಾಲಕ ಆದಿತ್ಯ ಶೆಟ್ಟಿ, ಮಹಾನಗರ ಸಂಚಾಲಕ ಶ್ರೇಯಸ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.