ಸಂಜೀವಿನಿ: ವೇತನ ಏರಿಕೆಗೆ ಸರಕಾರ ಸಮ್ಮತಿ


Team Udayavani, Feb 7, 2024, 6:50 AM IST

ಸಂಜೀವಿನಿ: ವೇತನ ಏರಿಕೆಗೆ ಸಮ್ಮತಿ

ಕುಂದಾಪುರ: ರಾಜ್ಯದ ಪಂಚಾಯತ್‌ ವ್ಯಾಪ್ತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಣೆ ಮಾಡುತ್ತಿರುವ ಸಿಬಂದಿಯ ವೇತನ ಪರಿಷ್ಕರಣೆಗೆ ಸರಕಾರ ಒಪ್ಪಿಗೆ ನೀಡಿದೆ.

ಕರ್ನಾಟಕ ರಾಜ್ಯ ಸಂಜೀವಿನಿ ನೌಕರರ ಹಾಗೂ ಫಲಾನುಭವಿಗಳ ಸಂಘ ಸಚಿವ ಶರಣಪ್ರಕಾಶ ಪಾಟೀಲ್‌, ಹಿರಿಯ ಹೆಚ್ಚುವರಿ ಕಾರ್ಯದರ್ಶಿ ಉಮಾ ಮಹಾದೇವನ್‌, ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಇತರ ಹಿರಿಯ ಅಧಿಕಾರಿಗಳ ಜತೆ ನಡೆಸಿದ ಮಾತುಕತೆ ಕೊನೆಗೂ ಫಲಪ್ರದವಾಗಿದೆ.

ವೇತನ ಹೆಚ್ಚಳ ಕುರಿತಂತೆ ಎಂಬಿಕೆಗಳು ಅವರ ವ್ಯಾಪ್ತಿಯಲ್ಲಿ ಬರುವ ಸ್ವ ಸಹಾಯ ಸಂಘಗಳ ಸಂಖ್ಯೆಯ ಆಧಾರದಲ್ಲಿ 40 ಸ್ವಸಹಾಯ ಸಂಘಗಳಿದ್ದರೆ 5 ಸಾವಿರ ರೂ., 45 ಸಂಘಗಳಿದ್ದರೆ 6 ಸಾವಿರ ರೂ., 90 ಸಂಘಗಳಿದ್ದರೆ 9 ಸಾವಿರ ರೂ.ಗಳಂತೆ ಕನಿಷ್ಠ 5 ಸಾವಿರ ರೂ.ಗಳಿಂದ ಗರಿಷ್ಠ 9 ಸಾವಿರ ರೂ.ವರೆಗೆ ವೇತನ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಸಚಿವರು, ಎಪ್ರಿಲ್‌ನಿಂದ ವೇತನ ಏರಿಕೆಗೆ ಕ್ರಮ ಕೈಗೊಳ್ಳಲಾಗುವುದು. ಈ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗುವುದು. ಎಂಬಿಕೆಗಳಿಗೆ ವೇತನ ಹೆಚ್ಚಳ ಜತೆಗೆ ಕೇಂದ್ರ ಸರಕಾರದ ಅಭಿಪ್ರಾಯ ಪಡೆದು ಎಲ್‌ಸಿಆರ್‌ಪಿಗಳಿಗೆ ಮಾಸಿಕ 4 ಸಾವಿರ ರೂ. ವೇತನ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

2021ರಿಂದ 2023ರ ವರೆಗೆ 6 ಬಾರಿ ಗಣತಿ ಕಾರ್ಯ ಮಾಡಿದ್ದು, ಗಣತಿಯಲ್ಲಿ ಭಾಗಿಯಾದವರಿಗೆ ನೀಡಬೇಕಾದ ಬಾಕಿ ವೇತನವನ್ನು ಕೊಡಲು ಒಪ್ಪಿದರು. ಪಂಚಾಯತ್‌ಗಳಲ್ಲಿ ಸಂಜೀವಿನಿ ಸಿಬಂದಿಗೆ ವ್ಯವಸ್ಥೆ, ಪ್ರತ್ಯೇಕ ಕಚೇರಿಗೆ ಸ್ಥಳವಿದ್ದಲ್ಲಿ ನರೇಗಾ ಮೂಲಕ ಕಟ್ಟಡ, ನೌಕರರಿಗೆ ಐಡಿ ಕಾರ್ಡ್‌ ಮತ್ತು ನೇಮಕಾತಿ ಆದೇಶ ಪತ್ರ, ಯುನಿಫಾರಂ ಹಾಗೂ ಸೇವಾ ನಿಯಮಾವಳಿಗಳಿಗೆ ಕ್ರಮ ಕೈಗೊಳ್ಳುವುದು, ಎಂಬಿಕೆಗಳಿಗೆ ಚೆಕ್‌ ಸಹಿ ಮಾಡುವ ಅಧಿಕಾರ ನೀಡುವ ಅವಕಾಶಗಳನ್ನು ಪರಿಶೀಲಿಸಿ ನಿರ್ಧರಿಸುವುದಾಗಿ ತಿಳಿಸಿದರು.

ಸಂಘವು ಬೆಳಗಾವಿ ಅಧಿವೇಶನ ಸಂದರ್ಭ ಪ್ರತಿಭಟನೆ ನಡೆಸಿತ್ತು.ರಾಜ್ಯ ಸಂಚಾಲಕರಾದ ಜಿ. ನಾಗರಾಜ, ಬಿ. ಮಾಳಮ್ಮ, ಯು. ಬಸವರಾಜ, ರುದ್ರಮ್ಮ,ಗೌಸ್‌ ಸಾಬ್‌, ಜೆ.ಎಂ.ವೀರ ಸಂಗಯ್ಯ, ವಿಜಯ ನಗರ, ಧಾರವಾಡ, ಕಲಬುರಗಿ, ಕೊಪ್ಪಳ, ಮಂಡ್ಯ, ಉಡುಪಿ, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ದಾವಣಗೆರೆ, ಮುಂತಾದ ಜಿಲ್ಲೆಗಳ ಮುಖಂಡರು ಉಪಸ್ಥಿತರಿದ್ದರು.

“ಉದಯವಾಣಿ’ 2023ರ ಡಿ.6ರಂದು ಸಂಜೀವಿನಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ಕುರಿತು “ರಾಜ್ಯಾದ್ಯಂತ ಕೆಲಸ ನಿಲ್ಲಿಸಿದ ಸಂಜೀವಿನಿ ಮೇಲ್ವಿಚಾರಕರು’ ಎಂಬ ವರದಿ ಪ್ರಕಟಿಸಿತ್ತು.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krishi Sinchai Yojana: ರೈತರಿಗೆ ಸಿಗಲಿದೆ ಶೇ.90 ಸಬ್ಸಿಡಿ

Krishi Sinchai Yojana: ರೈತರಿಗೆ ಸಿಗಲಿದೆ ಶೇ.90 ಸಬ್ಸಿಡಿ

Theft ಕಟಪಾಡಿ ಫಾರೆಸ್ಟ್‌ಗೇಟ್‌: ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಿಯಿಂದ ಕಳವು

Theft ಕಟಪಾಡಿ ಫಾರೆಸ್ಟ್‌ಗೇಟ್‌: ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಿಯಿಂದ ಕಳವು

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Gangolli ಪೊಲೀಸ್‌ ವಾಹನ ಪಲ್ಟಿ ; ಇಬ್ಬರಿಗೆ ಗಾಯ

Gangolli ಪೊಲೀಸ್‌ ವಾಹನ ಪಲ್ಟಿ ; ಇಬ್ಬರಿಗೆ ಗಾಯ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.