ಕೇಂದ್ರ BJP ಯಿಂದ ರಾಜ್ಯ ಸರಕಾರಕ್ಕೆ “ತೆರಿಗೆ ಏಟು”


Team Udayavani, Feb 7, 2024, 11:01 PM IST

tax

ಬೆಂಗಳೂರು: ದಿಲ್ಲಿಯ ಜಂತರ್‌ ಮಂತರ್‌ನಲ್ಲಿ ಅನುದಾನಕ್ಕಾಗಿ ಕೇಂದ್ರ ಸರಕಾರದ ವಿರುದ್ಧ ಹೊರಾಟ ನಡೆಸಿದ ರಾಜ್ಯ ಕಾಂಗ್ರೆಸ್‌ ಸರಕಾರಕ್ಕೆ ಕೇಂದ್ರ ಬಿಜೆಪಿ ತೆರಿಗೆ ಏಟು ನೀಡಿದೆ.
ಕರ್ನಾಟಕ ರಾಜ್ಯವು ವಾಸ್ತವವಾಗಿ ಸಂಗ್ರಹಿಸುವುದಕ್ಕಿಂತ ಕಡಿಮೆ ತೆರಿಗೆ ಆದಾಯವನ್ನು ಪಡೆಯುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯರ ಆರೋಪ ಸುಳ್ಳು ಎಂದಿರುವ ಬಿಜೆಪಿ, ತೆರಿಗೆ ಸಂಗ್ರಹಣೆಯ ಕಾರ್ಯವಿಧಾನಗಳ ತಪ್ಪು ತಿಳಿವಳಿಕೆಯಿಂದಲೂ ಈ ರೀತಿ ಆರೋಪಿಸಿರಬಹುದು ಅಥವಾ ಚುನಾವಣ ಭರವಸೆಗಳನ್ನು ಈಡೇರಿಸಲಾರದ ಅಸಮರ್ಥತೆಯನ್ನು ಸಮರ್ಥಿಸಿಕೊಳ್ಳಲು ಹೀಗೆ ಆರೋಪಿಸುತ್ತಿರಬಹುದು ಎಂದಿದೆ.

ಇದೇ ತರ್ಕವನ್ನು ಕರ್ನಾಟಕಕ್ಕೆ ಅನ್ವಯಿಸುವುದಾದರೆ ಬೆಂಗಳೂರಿನಲ್ಲಿ ಅತೀ ಹೆಚ್ಚು ತೆರಿಗೆ ಸಂಗ್ರಹಣೆ ಆಗುತ್ತದೆ. ಹಾಗೆಂದು ಉಳಿದ ಜಿಲ್ಲೆಗಳನ್ನು ನಿರ್ಲಕ್ಷಿಸಲಾಗುತ್ತದೆ ಎಂದರ್ಥವೇ? ಎಂದು ಪ್ರಶ್ನಿಸಿದೆ. ವಿಭಜನೆಯನ್ನು ಉತ್ತೇಜಿಸುವ, ತಮ್ಮ ನ್ಯೂನತೆಗಳನ್ನು ಮುಚ್ಚಿಕೊಳ್ಳಲು ಜನರಲ್ಲಿ ಪ್ರತ್ಯೇಕತಾ ಭಾವ ಹುಟ್ಟುಹಾಕಲು ಇಂತಹ ವಾದಗಳನ್ನು ಮಾಡಲಾಗುತ್ತಿದೆ. ತುಕೆx ಗ್ಯಾಂಗ್‌ ಜತೆಗಿನ ಇಂತಹ ತಂತ್ರಗಳು ಏಕತೆಯನ್ನು ಹಾಳು ಮಾಡುವುದಲ್ಲದೆ, ಸಾಮಾಜಿಕ ಸಾಮರಸ್ಯಕ್ಕೆ ಅಪಾಯ ಉಂಟು ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದೆ.

ಯಾವ ರಾಜ್ಯಕ್ಕೂ ವಿಶೇಷ ಅನುದಾನ ಶಿಫಾರಸು ಮಾಡಿಲ್ಲ
15ನೇ ಹಣಕಾಸು ಆಯೋಗವು 2021-22ರಿಂದ 2025-26ರ ವರೆಗಿನ ತನ್ನ ಅಂತಿಮ ವರದಿಯಲ್ಲಿ ಯಾವುದೇ ರಾಜ್ಯಕ್ಕೆ ವಿಶೇಷ ಅನುದಾನವನ್ನು ಶಿಫಾರಸು ಮಾಡಿಲ್ಲ. 2020-21ನೇ ಸಾಲಿನಿಂದ ಕರ್ನಾಟಕಕ್ಕೆ ಬಂಡವಾಳ ವೆಚ್ಚದ ಯೋಜನೆಗಳಿಗೆ ಸಹಾಯ ಮಾಡಲು 6,279.94 ಕೋಟಿ ರೂ. ಸಾಲವನ್ನು 50 ವರ್ಷಗಳಿಗೆ ಬಡ್ಡಿ ರಹಿತವಾಗಿ ನೀಡಿದೆ ಎಂದು ಹೇಳಿದೆ.

18,005 ಕೋಟಿ ರೂ. ಹೆಚ್ಚುವರಿ ಅನುದಾನ
2014-24 ರವರೆಗೆ ಕರ್ನಾಟಕಕ್ಕೆ 2,85,452 ಕೋಟಿ ರೂ.ಗಳ ತೆರಿಗೆ ಹಂಚಿಕೆಯನ್ನು ಕೇಂದ್ರ ಸರಕಾರ ಮಾಡಿದ್ದು, ಇದು 2004-14ರ ಅವಧಿಯಲ್ಲಿದ್ದ ಯುಪಿಎ ಸರ್ಕಾರಕ್ಕಿಂತ ಶೇ. 3.5ರಷ್ಟು ಹೆಚ್ಚು. 2014-23ರ ವರೆಗೆ 2,08,832 ಕೋಟಿ ರೂ.ಗಳನ್ನು ಎನ್‌ಡಿಎ ಸರಕಾರ ಬಿಡುಗಡೆ ಮಾಡಿದ್ದರೆ, 2004-14ರ ವರೆಗೆ ಇದ್ದ ಯುಪಿಎ ಸರಕಾರ 60,779 ಕೋಟಿ ರೂ. ಬಿಡುಗಡೆ ಮಾಡಿತ್ತು. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚುವರಿಯಾಗಿ 18,005 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡುವ ಪ್ರಸ್ತಾವ ಮಾಡಿದೆ. ಇದಲ್ಲದೆ 10 ವರ್ಷದಲ್ಲಿ ಎನ್‌ಡಿಎ ಸರಕಾರ ಕೊಟ್ಟ ಸಹಾಯಾನುದಾನದ ಮೊತ್ತವೇ 2,26,837 ಕೋಟಿ ರೂ. ಆಗಿದೆ ಎಂದು ಬಿಜೆಪಿ ಹೇಳಿದೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.