NEP : 4ನೇ ವರ್ಷದ ಪದವಿ ಓದಲು ಆಸಕ್ತಿ ಇದೆಯೇ?

ಆಸಕ್ತ ವಿದ್ಯಾರ್ಥಿಗಳಿಂದ ಮಾಹಿತಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚನೆ

Team Udayavani, Feb 7, 2024, 11:16 PM IST

text books

ಬೆಂಗಳೂರು:ರಾಷ್ಟ್ರೀಯ ಶಿಕ್ಷಣ ನೀತಿ -2020 (ಎನ್‌ಇಪಿ)ಯಡಿ ಓದುತ್ತಿರುವ ವಿದ್ಯಾರ್ಥಿಗಳಿಂದ ನಾಲ್ಕನೇ ವರ್ಷದ ಪದವಿಯ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ.

ಈ ಹಿಂದೆ 3 ವರ್ಷಕ್ಕೆ ಸೀಮಿತವಾಗಿದ್ದ ಪದವಿ ಶಿಕ್ಷಣವನ್ನು ಎನ್‌ಇಪಿಯಡಿ 4 ವರ್ಷಕ್ಕೆ ವಿಸ್ತರಿಸಿ ಆನರ್ ಪದವಿಯ ಸ್ಥಾನ ನೀಡಲಾಗಿದೆ. ಆದರೆ ರಾಜ್ಯದಲ್ಲಿನ ಕಾಂಗ್ರೆಸ್‌ ಸರಕಾರ ನಾಲ್ಕನೇ ವರ್ಷದ ಪದವಿಯ ಬಗ್ಗೆ ಉತ್ಸಾಹ ಹೊಂ ದಿಲ್ಲ. ಹಾಗೆಯೇ ಹಲವು ಶಿಕ್ಷಣ ತಜ್ಞರು ಈ ಹಿಂದಿನಂ ತೆಯೇ ಪದವಿ ಇರಲಿ ಎಂದು ಅಭಿಪ್ರಾಯಪಟ್ಟಿ ದ್ದಾರೆ. ಈ ಬಗ್ಗೆ ಅವಸರದ ತೀರ್ಮಾನ ಕೈಗೊಳ್ಳದೆ, ಕೂಲಂಕಷ ಚರ್ಚಿಸಿ ನಿರ್ಧರಿಸಲು ಮುಂದಾದ ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್‌ ಈಗ ಅಭಿಪ್ರಾಯ ಸಂಗ್ರಹಕ್ಕೆ ಉತ್ಸುಕರಾ ಗಿದ್ದಾರೆ.

ಎನ್‌ಇಪಿಯಡಿ ಪ್ರವೇಶ ಪಡೆದ ವಿದ್ಯಾರ್ಥಿ ಗಳು ಈಗ 3ನೇ ವರ್ಷದಲ್ಲಿ ಐದನೇ ಸೆಮಿಸ್ಟರ್‌ ಓದುತ್ತಿದ್ದಾರೆ. ಇನ್ನೊಂದು ಸೆಮಿಸ್ಟರ್‌ ಪೂರ್ಣಗೊಳಿಸಿದ ಬಳಿಕ 4ನೇ ವರ್ಷಕ್ಕೆ ಪ್ರವೇಶ ಪಡೆಯುತ್ತಾರೆ. ಇದು ರಾಜ್ಯದ ಶೈಕ್ಷಣಿಕ ವಲಯಕ್ಕೆ ಹೊಸ ಪರಿಕಲ್ಪನೆ. ಈ ಹಿನ್ನೆಲೆಯಲ್ಲಿ ಪದವಿಯ ನಾಲ್ಕನೇ ವರ್ಷ ಓದಲು ಆಸಕ್ತರಿರುವ ವಿದ್ಯಾರ್ಥಿ ಗಳು ಮತ್ತು ವಿಷಯ ಆಸಕ್ತಿಯ ಮಾಹಿತಿ ಸಂಗ್ರಹಿಸಲು ಕಾಲೇಜು ಪ್ರಾಂಶುಪಾಲರಿಗೆ ಸೂಚಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.

ನಾಲ್ಕನೇ ವರ್ಷದಲ್ಲಿ ಓಪನ್‌ ಎಲೆಕ್ಟಿವ್‌ ವಿಷಯವಿದೆ. ವಿದ್ಯಾರ್ಥಿಗಳು ಕಲೆ, ವಾಣಿಜ್ಯ ಅಥವಾ ವಿಜ್ಞಾನ ಕೋರ್ಸ್‌ಗಳಲ್ಲಿ ತಮ್ಮ ಆಯ್ಕೆ ಯನ್ನು ಮಾಡಿಕೊಳ್ಳಬಹುದು. ಆದರೆ ರಾಜ್ಯದ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ 237 ರಲ್ಲಿ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಕೋರ್ಸ್‌ಗಳು ಒಟ್ಟಿಗೆ ಇವೆ. ಉಳಿದೆಡೆ ಅನ್ಯ ವಿಷಯಗಳನ್ನು ಆರಿಸಿಕೊಳ್ಳುವವರಿಗ ಶಿಕ್ಷಣ ನೀಡಲು ಸಿದ್ಧತೆ ನಡೆಸಬೇಕಿದೆ. ವಿಭಿನ್ನ ಜ್ಞಾನಶಾಖೆಯ ಕೋರ್ಸ್‌ ಗಳ ಸಂದರ್ಭದಲ್ಲಿ ಹಲವು ಪ್ರಾಯೋಗಿಕ ಸಮಸ್ಯೆಗಳು ಎದುರಾಗಲಿವೆ. ಈ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹಿಸಿದ ಬಳಿಕ ಪೂರ್ವ ಸಿದ್ಧತೆ ನಡೆಸಲು ಸರಕಾರ ಚಿಂತನೆ ನಡೆಸಿದೆ.

ಎಸ್‌ಇಪಿ ವರದಿ ಸಲ್ಲಿಕೆಯಾಗಿಲ್ಲ

ರಾಜ್ಯ ಶಿಕ್ಷಣ ನೀತಿ ಆಯೋಗ ತನ್ನ ಮಧ್ಯಂತರ ವರದಿಯನ್ನು ಇನ್ನೂ ಸಲ್ಲಿಸಿಲ್ಲ. ಆಯೋಗ ಸಲ್ಲಿಸುವ ವರದಿಯನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳುವರು. ಆದ್ದರಿಂದ ಎಸ್‌ಇಪಿಯಡಿ 3 ವರ್ಷದ ಅಥವಾ 4 ವರ್ಷದ ಪದವಿ ಎಂಬ ತೀರ್ಮಾನವಾಗಿಲ್ಲ ಎಂದು ಸಚಿವ ಡಾ| ಎಂ.ಸಿ. ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ.

ನಾಲ್ಕನೇ ವರ್ಷದ ಪದವಿ ಓದುವ ಆಸಕ್ತಿಯಿರುವ ವಿದ್ಯಾರ್ಥಿಗೆ ನೀವು ಮೂರನೇ ವರ್ಷಕ್ಕೆ ಪದವಿ ಮುಗಿಸಿ ಎಂದು ಹೇಳಲಾಗದು. ಆನರ್ ಪದವಿ ಪಡೆಯಲು ಆಸಕ್ತರಾಗಿರುವ ವಿದ್ಯಾರ್ಥಿಗಳ ದತ್ತಾಂಶ ಸಂಗ್ರಹಿಸುವಂತೆ ವಿವಿ ಮತ್ತು ಕಾಲೇಜುಗಳಿಗೆ ಸೂಚಿಸಿದ್ದೇವೆ. ಒಂದಿಬ್ಬರು ಆಯ್ಕೆ ಮಾಡಿಕೊಂಡರೂ ಅವಕಾಶ ಕಲ್ಪಿಸಬೇಕಾಗುತ್ತದೆ.
– ಡಾ| ಎಂ.ಸಿ. ಸುಧಾಕರ್‌, ಉನ್ನತ ಶಿಕ್ಷಣ ಸಚಿವರು

~ ರಾಕೇಶ್‌ ಎನ್‌.ಎಸ್‌.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.