J&K; ಇಲ್ಲಿ ಕೇಂದ್ರ ಸರಕಾರ ಹೇಳಿಕೊಂಡಿರುವ ಹಾಗೆ ಪರಿಸ್ಥಿತಿ ಇಲ್ಲ: ಒಮರ್ ಅಬ್ದುಲ್ಲಾ
ಉಗ್ರರಿಂದ ಪಂಜಾಬಿಗಳಿಬ್ಬರ ಹತ್ಯೆ ಕುರಿತು ಖಾರವಾದ ಪ್ರತಿಕ್ರಿಯೆ...
Team Udayavani, Feb 8, 2024, 4:15 PM IST
ಜಮ್ಮು: ಅಮೃತಸರದ ಇಬ್ಬರು ವ್ಯಕ್ತಿಗಳನ್ನು ಶ್ರೀನಗರದಲ್ಲಿ ಉಗ್ರರು ಗುಂಡಿಕ್ಕಿ ಹತ್ಯೆಗೈದಿರುವ ಬಗ್ಗೆ, ಮಾಜಿ ಸಿಎಂ ಮತ್ತು ಜೆಕೆಎನ್ಸಿ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಕೇಂದ್ರ ಸರಕಾರ ಹೇಳಿಕೊಂಡಿರುವ ಹಾಗೆ ಪರಿಸ್ಥಿತಿ ಇಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ”ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದು ನಮಗೆ ದುಃಖ ತಂದಿದೆ.ಇದು ಖಂಡನೀಯ. ಕಳೆದ 2-3 ವರ್ಷಗಳಲ್ಲಿ ಈ ರೀತಿಯ ಉದ್ದೇಶಿತ ಹತ್ಯೆಗಳು ಹೆಚ್ಚಿವೆ” ಎಂದರು.
”ಸರಕಾರ ಹೇಳಿ ಕೊಂಡಿರುವಷ್ಟು ಪರಿಸ್ಥಿತಿ ಇಲ್ಲ ಎಂಬುದನ್ನು ಈ ಕೃತ್ಯ ತೋರಿಸುತ್ತದೆ. 370 ನೇ ವಿಧಿಯನ್ನು ರದ್ದುಗೊಳಿಸಿದ ತತ್ ಕ್ಷಣ ಇದೆಲ್ಲವೂ ನಿಲ್ಲುತ್ತದೆ ಎಂದು ಅವರು ಹೇಳಿದ್ದರು. ಅವರು ಈಗ ನಮ್ಮನ್ನು ದೂಷಿಸಲು ಸಾಧ್ಯವಿಲ್ಲ. ಇದು ಅವರದ್ದೇ ವೈಫಲ್ಯ” ಎಂದು ಕಿಡಿ ಕಾರಿದರು.
ಬುಧವಾರ ಸಂಜೆ ಉಗ್ರರು ಕಾಶ್ಮೀರೇತರರನ್ನು ಗುರಿಯಾಗಿಸಿ ದಾಳಿ ನಡೆಸಿದ್ದರು. ಗುಂಡಿನ ದಾಳಿಗೆ ಇಬ್ಬರು ಪಂಜಾಬಿಗಳಾದ ಅಮೃತಪಾಲ್ ಸಿಂಗ್( 31) ಮತ್ತು ರೋಹಿತ್(25)ಬಲಿಯಾಗಿದ್ದರು. ಇಬ್ಬರು ಉದ್ಯೋಗಕ್ಕಾಗಿ ಕಾಶ್ಮೀರಕ್ಕೆ ತೆರಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.