KSOU; ದೇಶದಲ್ಲೇ 64 ಕೋರ್ಸ್‍ಗಳ ಪದವಿ ನೀಡುವ ಏಕೈಕ ವಿವಿ

ಯುಜಿಸಿ ಮಾನ್ಯತೆ...ಡಿ.ಕೆ.ಶಿವಕುಮಾರ್, ಉಮಾಶ್ರೀ, ಸಿ.ಟಿ.ರವಿ ಅವರಿಗೆ ಉನ್ನತ ಶಿಕ್ಷಣ

Team Udayavani, Feb 8, 2024, 5:15 PM IST

1-sadsad

ವಿಜಯಪುರ : ವೈವಿಧ್ಯಮ 64 ಕೋರ್ಸ್‍ಗಳನ್ನು ಹೊಂದಿರುವ ದೇಶದ ಏಕೈಕ ವಿಶ್ವವಿದ್ಯಾಲಯ ಎನಿಸಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ. ಉನ್ನತ ಶಿಕ್ಷಣದಿಂದ ವಂಚಿತರಿಗೆ ನಮ್ಮ ವಿಶ್ವವಿದ್ಯಾಲಯ ಅವರ ಉನ್ನತ ಶಿಕ್ಷಣದ ಕನಸು ನನಸು ಮಾಡುವಲ್ಲಿ ಸೂಕ್ತ ಆಯ್ಕೆಯಾಗಿದೆ ಎಂದು ಕುಲಪತಿ ಪ್ರೊ.ಶರಣಪ್ಪ ಹಲಸೆ ಹೇಳಿದರು.

ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ಸಾಧನೆ, ಕೋರ್ಸ್‍ಗಳು, ಪ್ರವೇಶದ ಅವಕಾಶಗಳ ಕುರಿತು ವಿವರಿಸಿದ ಅವರು, ರಾಜ್ಯದಲ್ಲಿ ದೂರ ಶಿಕ್ಷಣ ನೀಡುತ್ತಿರುವ ಏಕೈಕ ವಿಶ್ವವಿದ್ಯಾಲಯ ನಮ್ಮದು ಮಾತ್ರ. ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳು ನೀಡುವ ಶೈಕ್ಷಣಿಕ ಕ್ರಮಗಳ ಪದವಿಗೆ ದೂರ ಶಿಕ್ಷಣದ ಮೂಲಕ ಪಡೆಯುವ ನಮ್ಮ ಪದಿವಿಗಳೂ ಸಮಾನವಾಗಿವೆ ಎಂದರು.

ನಮ್ಮ ವಿಶ್ವವಿದ್ಯಾಲಯದಲ್ಲಿ 10 ವಿಷಯಗಳ ಆನ್‍ಲೈನ್ ಕೋರ್ಸ್‍ಗಳೂ ಇದ್ದು, ರಾಜ್ಯದಲ್ಲಿ 34 ಪ್ರಾದೇಶಿಕ ಕೇಂದ್ರ. 131 ಪ್ರಾದೇಶಿಕ ಕಲಿಕಾ ಕೇಂದ್ರಗಳನಗನು ಹೊಂದಿದೆ. ಮೈಸೂರು ಭಾಗದಲ್ಲಿ ನಮ್ಮ ವಿಶ್ವವಿದ್ಯಾಲಯ ಹೆಚ್ಚು ಪ್ರಗತಿ ಸಾಧಿಸಿದ್ದು, ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ವಿಸ್ತರಿಸಲು ವಿಶೇಷ ಆದ್ಯತೆ ನೀಡುತ್ತಿದ್ದೇವೆ ಎಂದರು.

ಕೆಲಸದಲ್ಲಿರುವವರು, ಬಡತನ, ಗ್ರಾಮೀಣ ಭಾಗದ ಉನ್ನತ ಶಿಕ್ಷಣ ಅವಕಾಶ ವಂಚಿತರು, ಇತರೆ ಕಾರಣಕ್ಕೆ ಉನ್ನತ ಶಿಕ್ಷಣದಿಂದ ವಂಚಿತರಿಗೆ ನಮ್ಮ ವಿಶ್ವವಿದ್ಯಾಲಯದ ಮೊದಲ ಆಯ್ಕೆಯಾಗಿದೆ. ಯುಜಿಸಿ ಎ+ ಮಾನ್ಯತೆ ಪಡೆದಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಕಡಿಮೆ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಅವಕಾಶವಿದೆ ಎಂದರು.

ಇದಲ್ಲದೇ ಬೇರೆ ವಿಶ್ವವಿದ್ಯಾಲಯದಲ್ಲಿ ಈಗಾಗಲೇ ಭೌತಿಕ ಪ್ರವೇಶದೊಂದಿಗೆ ನೇರ ತರಗತಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಕೂಡ ನಮ್ಮ ವಿಶ್ವವಿದ್ಯಾಲಯದಲ್ಲಿ ಬೇರೊಂದು ಕೋರ್ಸ್‍ನಲ್ಲಿ ದೂರ ಶಿಕ್ಷಣದಲ್ಲಿ ಪ್ರವೇಶ ಪಡೆದು, ಏಕ ಕಾಲಕ್ಕೆ ಎರಡೂ ಕೋರ್ಸ್ ಮಾಡಲು ಅವಕಾಶವಿದೆ. ಇದರು ನಮ್ಮ ವಿಶ್ವವಿದ್ಯಾಲಯದ ಹಿರಿಮೆ ಎಂದರು.

ಆನ್‍ಲೈನ್ ಮೂಲಕವೇ ಅರ್ಜಿ ಸಲ್ಲಿಸುವ ಹಾಗೂ ಆನ್‍ಲೈನ್ ಮೂಲಕವೇ ವಿಶ್ವವಿದ್ಯಾಲಯದ ಎಲ್ಲ ಶುಲ್ಕಗಳನ್ನು ಭರಿಸಬೇಕಿದೆ. ನಮ್ಮ ವಿಶ್ವವಿದ್ಯಾಲಯದಲ್ಲಿ ಜನವರಿ ಹಾಗೂ ಜುಲೈ ಹೀಗೆ ವಾರ್ಷಿಕ ಎರಡು ಬಾರಿ ಪ್ರವೇಶ ಕಲ್ಪಿಸಲಾಗುತ್ತದೆ. 2023-34ನೇ ಸಾಲಿನ ಮೊಲದ ಹಂತದ ಜನವರಿ ಆವೃತ್ತಿಯ ಪ್ರವೇಶಕ್ಕೆ ಮಾರ್ಚ್ 31 ಕೊನೆ ದಿನ. ವಿವಿಧ ವಿಷಯಗಳ ಸಂಯೋಜನೆ ಹೊಂದಿರುವ ಪದವಿಗಳ ಸ್ನಾತಕ-ಸ್ನಾತಕೋತ್ತರ, ಸಂಶೋಧನಾ ಪಿಎಚ್‍ಡಿ ಮಾತ್ರವಲ್ಲದೇ ವಿವಿಧ ವಿಷಯಗಳ ಸರ್ಟಿಫಿಕೇಟ್ ಕೋರ್ಸ್‍ಗಳನ್ನೂ ನೀಡಲಾಗುತ್ತದೆ ಎಂದರು.

ನಮ್ಮ ವಿಶ್ವವಿದ್ಯಾಲಯದಿಂದಲೇ ಈಗಾಗಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಮಾಜಿ ಸಚಿವೆ ಉಮಾಶ್ರೀ, ಸಿ.ಟಿ.ರವಿ ಅವರಂಥ ನಾಯಕರೂ ಸ್ನಾತಕೋತ್ತರ, ಸಂಶೋಧನಾ ಮಹಾಪ್ರಬಂಧ ಮಂಡಿಸುವ ಮೂಲಕ ಪಿಎಚ್‍ಡಿ ಪದವಿಗಳನ್ನೂ ಪಡೆದಿದ್ದಾರೆ. ನಮ್ಮ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿರುವ ಹಲವರು ಕೇಂದ್ರ-ರಾಜ್ಯ ಸರ್ಕಾರಗಳ ಉನ್ನತ ಹುದ್ದೆಗಳಿಗೆ ಆಯ್ಕೆಯಾಗಿ, ಸೇವೆ ಸಲ್ಲಿಸುತ್ತಿದ್ದಾರೆ ಎಂದು ವಿವರಿಸಿದರು.

ನಮ್ಮ ವಿಶ್ವವಿದ್ಯಾಲಯದಲ್ಲಿ ಇಲ್ಲದ ಕೋಸ್‍ಗಳಲ್ಲೂ ಅಧ್ಯಯನ ಮಾಡಲು ಪ್ರತಿಷ್ಠಿತಿ ಇತರೆ ವಿಶ್ವವಿದ್ಯಾಲಯಗಳೊಂದಿಗೆ ಶೈಕ್ಷಣಿಕ ಒಪ್ಪಂದ ಮಾಡಿಕೊಳ್ಳಲೂ ಯೋಜಿಸಿದ್ದೇವೆ. ಕೌಶಲ್ಯಾಭಿವೃದ್ಧಿಗೆ ಪ್ರತ್ಯೇಕ ವಿಭಾಗವಿದ್ದು, ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ. ಡಿಜಿಟಲ್ ಮೌಲ್ಯಮಾಪನದ ಮೂಲಕ ಗುಣಮಟ್ಟದ ಮೌಲ್ಯಮಾಪನ, ಶೀಘ್ರ ಫಲಿತಾಂಶ ಪ್ರಕಟಣೆಗೆ ಅನುಕೂಲ ಕಲ್ಪಿಸಲಾಗಿದೆ. ಪ್ರಸಾರಾಂಗ, ರೇಡಿಯೋ ಸೌಲಭ್ಯವೂ ಇದೆ ಎಂದು ವಿವರಿಸಿದರು.

ವಿಜಯಪುರ ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಡಿ.ಎಸ್.ಮೈತ್ರಿ, ಧಾರವಾಡ ಪ್ರಾದೇಶಿಕ ಕೇಂದ್ರದ ನಿರ್ದೇಶಕ ರಾಘವೇಂದ್ರ ಕುಲಕರ್ಣಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.