![Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ](https://www.udayavani.com/wp-content/uploads/2024/07/tu-1-415x167.jpg)
Facebook live ವೇಳೆ ಜೊತೆಯಲ್ಲಿ ಇದ್ದಾತನಿಂದಲೇ ಗುಂಡಿನ ದಾಳಿ… ಶಿವಸೇನೆ ಮುಖಂಡನ ಹತ್ಯೆ
Team Udayavani, Feb 9, 2024, 9:13 AM IST
![Facebook live: ಫೇಸ್ಬುಕ್ ಲೈವ್ ವೇಳೆ ಗುಂಡಿನ ದಾಳಿ… ಶಿವಸೇನೆ ನಾಯಕನ ಹತ್ಯೆ](https://www.udayavani.com/wp-content/uploads/2024/02/facebook-620x360.jpg)
ಮುಂಬಯಿ: ಮಹಾರಾಷ್ಟ್ರದ ಥಾಣೆಯಲ್ಲಿ ಬಿಜೆಪಿ ಶಾಸಕನ ಮೇಲೆ ಗುಂಡಿನ ದಾಳಿ ನಡೆದ ಬೆನ್ನಲ್ಲೇ ಮುಂಬೈನಲ್ಲಿ ಮತ್ತೊಂದು ಗುಂಡಿನ ದಾಳಿ ನಡೆಸಿದ ಘಟನೆ ಬೆಳಕಿಗೆ ಬಂದಿದೆ.
ಫೇಸ್ಬುಕ್ ಲೈವ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಉದ್ಧವ್ ಠಾಕ್ರೆ ಗುಂಪಿನ ನಾಯಕ ಅಭಿಷೇಕ್ ಘೋಸಲ್ಕರ್ ಮೇಲೆ ಅಲ್ಲೇ ನೆರೆದಿದ್ದ ವ್ಯಕ್ತಿಯೊಬ್ಬರು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ ಗುಂಡಿನ ದಾಳಿ ನಡೆಸಿದ ವ್ಯಕ್ತಿ ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ದಹಿಸರ್ ಪ್ರದೇಶದ MHB ಕಾಲೋನಿಯಲ್ಲಿರುವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯ ಭಯಾನಕ ದೃಶ್ಯ ಸೆರೆಯಾಗಿದ್ದು ಇಲ್ಲಿ ಅಭಿಷೇಕ್ ಘೋಸಲ್ಕರ್ ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು ಕೊನೆಯದಾಗಿ ಕಾರ್ಯಕ್ರಮ ಮುಗಿದ ಬಳಿಕ ಇನ್ನೇನು ಏಳಬೇಕು ಎನ್ನುವಷ್ಟರಲ್ಲಿ ಅಲ್ಲೇ ಇದ್ದ ವ್ಯಕ್ತಿ ಬಂದೂಕಿನ್ನಿಂದ ಗುಂಡು ಹಾರಿಸಿದ್ದಾನೆ. ಗಂಭೀರ ಗಾಯಗೊಂಡ ಘೋಸಲ್ಕರ್ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟೋತ್ತಿಗಾಗಲೇ ಘೋಸಲ್ಕರ್ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಇನ್ನು ಗುಂಡು ಹಾರಿಸಿದ ವ್ಯಕ್ತಿ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಭಿಷೇಕ್ ಘೋಷಾಲ್ಕರ್ ಮೇಲೆ ಗುಂಡು ಹಾರಿಸಿದ ಆರೋಪಿಯನ್ನು ಮೋರಿಸ್ ಎನ್ನಲಾಗಿದ್ದು ಈತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮಾರಿಸ್ ನೊರೊನ್ಹಾ ಬೊರಿವಲಿ ವೆಸ್ಟ್ ನಿವಾಸಿಯಾಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷೆಯನ್ನು ಹೊಂದಿದ್ದ ಸಮಾಜ ಸೇವಕ ಎಂದು ಹೇಳಿಕೊಂಡಿದ್ದಾರೆ.
ಇಬ್ಬರೂ ಅಕಪಕ್ಕದಲ್ಲಿ ಕಚೇರಿಯನ್ನು ಹೊಂದಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ, ಅಷ್ಟು ಮಾತ್ರವಲ್ಲದೆ ಸ್ಥಳೀಯ ರಾಜಕೀಯದಲ್ಲಿ ಪ್ರಾಬಲ್ಯ ಸಾಧಿಸಲು ಅವರ ನಡುವೆ ಜಗಳ ನಡೆದಿದೆ ಎಂದು ಅಲ್ಲಿನ ಸ್ಥಳೀಯರು ಹೇಳಿಕೊಂಡಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Uttarakhand Violence: 4 ಮೃತ್ಯು, ಪೊಲೀಸರು ಸೇರಿ 200 ಮಂದಿಗೆ ಗಾಯ, ಕರ್ಫ್ಯೂ ಜಾರಿ
मुंबई में उद्धव ठाकरे गुट के नेता अभिषेक घोषालकर पर फायरिंग हुई है। उन्हें तीन गोलियां लगी हैं। फायरिंग के दौरान अभिषेक फेसबुक पर लाइव थे। ये पूरी घटना कैमरे में रिकॉर्ड हो गई। अभिषेक की हालत गंभीर है और अस्पताल में उनका इलाज चल रहा है। जानकारी के अनुसार मॉरिस भाई नाम के शख्स पर… pic.twitter.com/l6bsSFd27W
— NBT Hindi News (@NavbharatTimes) February 8, 2024
ಟಾಪ್ ನ್ಯೂಸ್
![Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ](https://www.udayavani.com/wp-content/uploads/2024/07/tu-1-415x167.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![TN-BSP-Armstrong](https://www.udayavani.com/wp-content/uploads/2024/07/TN-BSP-Armstrong-150x90.jpg)
Tamil Nadu: ಬಿಎಸ್ಪಿ ಮುಖ್ಯಸ್ಥ ಆರ್ಮ್ಸ್ಟ್ರಾಂಗ್ ಹತ್ಯೆ
![suicide](https://www.udayavani.com/wp-content/uploads/2024/07/suicide-1-150x84.jpg)
Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು
![Sudhamurthy](https://www.udayavani.com/wp-content/uploads/2024/07/Sudhamurthy-1-150x90.jpg)
Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?
![ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/07/lalu-150x83.jpg)
RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್
![1-aaaa](https://www.udayavani.com/wp-content/uploads/2024/07/1-aaaa-150x84.jpg)
Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ
MUST WATCH
ಹೊಸ ಸೇರ್ಪಡೆ
![Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ](https://www.udayavani.com/wp-content/uploads/2024/07/tu-1-150x60.jpg)
Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ
![1-messi](https://www.udayavani.com/wp-content/uploads/2024/07/1-messi-150x75.jpg)
Copa America ಫುಟ್ಬಾಲ್: ಸೆಮಿಫೈನಲ್ಗೆ ಆರ್ಜೆಂಟೀನಾ
![Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ](https://www.udayavani.com/wp-content/uploads/2024/07/dc-3-150x98.jpg)
Pavoor ಉಳಿಯ ಅಕ್ರಮ ಮರಳುಗಾರಿಕೆ ತನಿಖೆಗೆ ಸಮಿತಿ ರಚಿಸಿದ ಜಿಲ್ಲಾಧಿಕಾರಿ
![ಎಂ.ಟಿ.ಪಿ.ಕಿಟ್ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ](https://www.udayavani.com/wp-content/uploads/2024/07/HEALTH-150x104.jpg)
Mangaluru ಎಂ.ಟಿ.ಪಿ.ಕಿಟ್ ಅಕ್ರಮ ಮಾರಾಟ ವಿರುದ್ಧ ಆರೋಗ್ಯ ಇಲಾಖೆ ಎಚ್ಚರಿಕೆ
![1-ghgg](https://www.udayavani.com/wp-content/uploads/2024/07/1-ghgg-150x81.jpg)
T20 World Cup ವಿಜಯೋತ್ಸವವೆಲ್ಲ ಮುಗಿದ ಬಳಿಕ ಕೊಹ್ಲಿ-ಕೋಚ್ ಆತ್ಮೀಯ ಅಪ್ಪುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.