Fraud: ನಕಲಿ ದಾಖಲಾತಿ ಸೃಷ್ಟಿಸಿ ಆಸ್ತಿ ಕಬಳಿಸುತ್ತಿದ್ದ ವಂಚಕರು ಸೆರೆ


Team Udayavani, Feb 10, 2024, 12:27 PM IST

6

ಬೆಂಗಳೂರು: ನಕಲಿ ದಾಖಲಾತಿ ಸೃಷ್ಟಿಸಿ ನ್ಯಾಯಾಲಯಕ್ಕೆ ಸ್ವಯಂಪ್ರೇರಿತವಾಗಿ ದಾವೆ ಸಲ್ಲಿಸಿ ನಕಲಿ ವಾದಿ- ಪ್ರತಿವಾದಿಗಳಿಂದ ವಾದ ಮಂಡಿಸಿ ಕೋರ್ಟ್‌ನಿಂದ ಆದೇಶ ಪಡೆದು ಮಾಲೀಕರ ಜಮೀನು, ನಿವೇಶನಗಳನ್ನ ಕಬಳಿಸಿದ ಆರೋಪದಡಿ 18 ಮಂದಿ ವಂಚಕರು ಸಿಐಡಿ ಬಲೆಗೆ ಬಿದ್ದಿದ್ದಾರೆ.

ಪ್ರಮುಖ ಆರೋಪಿ ಬಿ.ಮಣಿ (ನಕಲಿ ಮಾಲೀಕ) ಅರುಣ್‌ (ನಕಲಿ ಬಾಡಿಗೆದಾರ) ಸೆಂದಿಲ್‌ ಕುಮಾರ್‌, ಜಾನ್‌ ಮೋಸಸ್‌, ಅಂಥೋಣಿರಾಜ್‌, ನರೇಂದ್ರ ಕುಮಾರ್‌, ಎಡ್ವಿನ್‌, ಕಾಂತಮ್ಮ ಸೇರಿದಂತೆ 18 ಮಂದಿ ವಂಚಕರನ್ನು ಸಿಐಡಿ ಬಂಧಿಸಿದೆ.

ವಿವಾದಿತ ಅಥವಾ ಖಾಲಿಯಿರುವ ಜಮೀನು, ನಿವೇಶನಗಳನ್ನು ಗುರಿಯಾಗಿಸಿಕೊಳ್ಳುತ್ತಿದ್ದ ಆರೋಪಿಗಳು ಇದಕ್ಕೆ ಸಂಬಂಧಿಸಿದ ಸಮಗ್ರ ದಾಖಲಾತಿ ಮಾಹಿತಿ ಸಂಗ್ರಹಿಸಿ ನಕಲಿ ದಾಖಲೆ ಸೃಷ್ಟಿಸುತ್ತಿದ್ದರು. ಆರೋಪಿಗಳೇ ಮಾಲೀಕ ಹಾಗೂ ಬಾಡಿಗೆದಾರರನ್ನು ಸೃಷ್ಟಿಸಿ ಅವರ ನಡುವೆ ವಿವಾದವಿದೆ ಎಂಬಂತೆ ಪ್ರತಿಬಿಂಬಿಸಿ ಕೋರ್ಟ್‌ ಮೊರೆ ಹೋಗುತ್ತಿದ್ದರು. ನ್ಯಾಯಾಲಯದಲ್ಲಿ ವಾದಿ- ಪ್ರತಿವಾದಿಗಳ ಪರ ಆರೋಪಿತ ವಕೀಲರೇ ವಾದ ಮಂಡಿಸಿ ನ್ಯಾಯಾಲಯ ದಿಂದ ರಾಜಿ ಸಂಧಾನ ಮಾಡಿಸಿ ಆದೇಶ ಪತ್ರ ಪಡೆಯುತ್ತಿದ್ದರು. ಆದೇಶ ಪತ್ರವನ್ನು ಅಸಲಿ ಮಾಲೀಕರಿಗೆ ತೋರಿಸಿ ಹಣಕ್ಕಾಗಿ ಬೇಡಿಕೆಯಿಡುತ್ತಿದ್ದರು. ಬಂಧಿತರ ಪೈಕಿ ಕೆಲವರು ಜೈಲಿಗೆ ಹೋಗಿ ಜಾಮೀನು ಪಡೆದು ಹೊರ ಬಂದಿದ್ದಾರೆ ಎಂಬುದು ಗೊತ್ತಾಗಿದೆ. ಹಲಸೂರು, ಯಲಹಂಕ ಸೇರಿದಂತೆ ಬೆಂಗಳೂರಿನ ವಿವಿಧೆಡೆ ಸುಮಾರು 116 ಪ್ರಕರಣಗಳಲ್ಲಿ ಇದೇ ಮಾದರಿಯಲ್ಲಿ ಆರೋಪಿಗಳು ಕೃತ್ಯ ಎಸಗಿರುವುದು ಪತ್ತೆಯಾಗಿದೆ. ರಾಜಧಾನಿಯಲ್ಲಿರುವ ಖಾಲಿ ನಿವೇಶನ, ಜಮೀನುಗಳನ್ನೇ ಆರೋಪಿಗಳು ಟಾರ್ಗೆಟ್‌ ಮಾಡುತ್ತಿದ್ದರು ಎನ್ನಲಾಗಿದೆ.

ವಂಚನೆ ಹೇಗೆ?: ಆರೋಪಿ ಜಾನ್‌ ಮೋಸಸ್‌ ತಂಡ ಕಟ್ಟಿಕೊಂಡು ಯಶವಂತಪುರ ವಿಲೇಜ್‌ ಬಳಿಯ ಗೋಕುಲ 1ನೇ ಹಂತದಲ್ಲಿರುವ ರವಿಂದ್ರ ಸಿ.ಷಾ ಅವರಿಗೆ ಸೇರಿದ ಸ್ವತ್ತನ್ನು ಲಪಟಾಯಿಸಲು 2020ರಲ್ಲಿ ಸಂಚು ರೂಪಿಸಿದ್ದ. ಸ್ವತ್ತಿಗೆ ಮಾಲೀಕರಾಗಿ ಆರೋಪಿಗಳಾದ ಮಣಿ, ಬಾಡಿಗೆದಾರನಾಗಿ ಅರುಣ್‌, ಜಿಪಿಎ ಹೋಲ್ಡರ್‌ ಆಗಿ ಸೆಂದಿಲ್‌ ಕುಮಾರ್‌ನನ್ನು ದಾಖಲೆಗಳಲ್ಲಿ ತೋರಿಸಿದ್ದ. ಜಾಗಕ್ಕೆ ಬೇಕಾದ ಎಲ್ಲಾ ರೀತಿಯ ನಕಲಿ ದಾಖಲಾತಿ ಸೃಷ್ಟಿಸಿದ್ದ. ಆರೋಪಿಗಳಿಂದ ನಕಲಿ ಸಹಿ ಮಾಡಿಸಿ ನೈಜವೆಂದು ಬಿಂಬಿಸಿ ನ್ಯಾಯಾಲಯಕ್ಕೆ ಆರೋಪಿತ ವಕೀಲರ ಮೂಲಕ ದಾವೆ ಹೂಡಿದ್ದ. ನಕಲಿ ಸ್ವತ್ತನ್ನು ಖಾಲಿ ಮಾಡಿಸುವ ಸಂಬಂಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ವಿಚಾರಣೆ ನಡೆಸಿ ವಾದಿ-ಪ್ರತಿವಾದಿಗಳ ನಡುವೆ ರಾಜಿ ಸಂಧಾನ ಮಾಡಿಸುವ ರೀತಿ ಕೋರ್ಟ್‌ನಲ್ಲಿ ಆದೇಶ ಪಡೆದಿದ್ದ. ಬಳಿಕ ನ್ಯಾಯಾಲಯ ಆದೇಶ ಮೇರೆಗೆ ಸ್ವತ್ತಿನಲ್ಲಿದ್ದವರನ್ನು ಎಬ್ಬಿಸಿ ಆ ಸ್ವತ್ತನ್ನು ವಶಕ್ಕೆ ಪಡೆದು ವಂಚಿಸಿದ್ದ. ಈ ಸಂಬಂಧ ಸ್ವತ್ತಿನ ಮಾಲೀಕರು ಹೈಕೋರ್ಟ್‌ ಮೊರೆ ಹೋಗಿದ್ದರು. ವಾದ ಆಲಿಸಿ ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ನಗರ ಪೊಲೀಸರಿಗೆ 2020ರಲ್ಲಿ ನ್ಯಾಯಾಲಯವು ನಿರ್ದೇಶನ ನೀಡಿತ್ತು.

 

ಟಾಪ್ ನ್ಯೂಸ್

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.