Police ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಈಶ್ವರಪ್ಪ ಅವರಿಗೆ ನೋಟಿಸ್
ಸತ್ಯಾಂಶ ಹಾಗೂ ಸನ್ನಿವೇಶಗಳನ್ನು ಖಚಿತ ಪಡಿಸಿಕೊಳ್ಳಬೇಕು
Team Udayavani, Feb 10, 2024, 5:39 PM IST
ದಾವಣಗೆರೆ: ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಆಗಮಿಸುವಂತೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ಇಲ್ಲಿಯ ಬಡಾವಣೆ ಠಾಣೆ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ.
ದೂರಿನ ಬಗ್ಗೆ ಕೆಲವು ಸತ್ಯಾಂಶ ಹಾಗೂ ಸನ್ನಿವೇಶಗಳನ್ನು ಖಚಿತ ಪಡಿಸಿಕೊಳ್ಳಬೇಕಾಗಿರುವುದರಿಂದ ವಿಚಾರಣೆಗಾಗಿ ಫೆ.15ರಂದು ಬೆಳಗ್ಗೆ 10.30 ಗಂಟೆಗೆ ಬಡಾವಣೆ ಪೊಲೀಸ್ ಠಾಣೆಗೆ ಆಗಮಿಸುವಂತೆ ಆರಕ್ಷಕ ಉಪ ನಿರೀಕ್ಷಕರು ನೋಟಿಸ್ ನಲ್ಲಿ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ನಡೆದಿದ್ದ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ರಾಷ್ಟ್ರ ದ್ರೋಹಿಗಳ ಗುಂಡಿಕ್ಕಿ ಕೊಲ್ಲುವ ಕಾನೊನು ತರುವಂತೆ ಹೇಳಿಕೆ ನೀಡಿದ್ದ ಈಶ್ವರಪ್ಪ ವಿರುದ್ಧ ದಾವಣಗೆರೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಇಂದು ದಾವಣಗೆರೆ ಪೊಲೀಸರಿಂದ ಈಶ್ವರಪ್ಪ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ಶಿವಮೊಗ್ಗದ ಈಶ್ವರಪ್ಪ ಅವರ ನಿವಾಸಕ್ಕೆ ಬಂದಿದ್ದ ದಾವಣಗೆರೆ ಬಡಾವಣೆ ಪೊಲೀಸರು ನೋಟಿಸ್ ನೀಡಿದ್ದರು.
ಕೆ.ಎಸ್. ಈಶ್ವರಪ್ಪ ನಗರದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆಂದು ಶುಕ್ರವಾರ ಇಲ್ಲಿಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಹನುಮಂತ ಎಂಬುವವರು ದೂರು ನೀಡಿದ್ದರು. ಕಲಂ 505 (1)(ಸಿ), 505(2), 506 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ
Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್ ಸವಾಲು
Yakshagana;ಇನ್ನೂ ನೂರಾರು ಸುಶ್ರಾವ್ಯ ರಾಗಗಳ ಅಳವಡಿಕೆ ಸಾಧ್ಯ: ವಿದ್ವಾನ್ ಗಣಪತಿ ಭಟ್
Comet of the Century: ಅಕ್ಟೋಬರ್ನಲ್ಲಿ ಧೂಮಕೇತುಗಳ ಮೆರವಣಿಗೆ
Coastal People in Israel: ಸದ್ಯ ಸುರಕ್ಷಿತ, ಆದರೂ ಆದರೆ ಭವಿಷ್ಯವೇನು ಎಂಬ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.