![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 11, 2024, 1:08 PM IST
ತೆಲಂಗಾಣ: ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕಾಈಜಿನ ಹಾಸ್ಟೆಲ್ ನಲ್ಲೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತೆಲಂಗಾಣದ ಇಮಾಂಪೇಟೆಯಲ್ಲಿರುವ ಎಸ್ಸಿ ಕಲ್ಯಾಣ ವಸತಿ ಕಾಲೇಜಿನ ಹಾಸ್ಟೆಲ್ ನಲ್ಲಿ ಶನಿವಾರ ರಾತ್ರಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ದಗ್ಗುಪತಿ ವೈಷ್ಣವಿ ಎಂದು ಗುರುತಿಸಲಾಗಿದೆ.
ಶನಿವಾರ ಸಂಜೆ ವಸತಿ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ ನಡೆದಿದ್ದು, ವೈಷ್ಣವಿ ಕೂಡ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಇದಾದ ಬಳಿಕ ಹಾಸ್ಟೆಲ್ ಗೆ ಬಂದ ವೈಷ್ಣವಿ ತನ್ನ ತಾಯಿಯೊಂದಿಗೆ ವಾಟ್ಸಾಪ್ ವಿಡಿಯೋ ಕಾಲ್ ಮಾಡಿ ಫೇರ್ ವೆಲ್ ಪಾರ್ಟಿಯ ವಿಚಾರಗಳನ್ನು ಹಂಚಿಕೊಂಡಿದ್ದಳು.
ಇದಾದ ಕೆಲವೇ ಹೊತ್ತಿನಲ್ಲಿ ಪೋಷಕರಿಗೆ ಕಾಲೇಜಿನಿಂದ ಕರೆಯೊಂದು ಬಂದಿದ್ದು ಮಗಳ ಅರೋಗ್ಯ ಸ್ಥಿತಿ ಗಂಭೀರವಾಗಿದೆ ಕೂಡಲೇ ಕಾಲೇಜಿಗೆ ಬರುವಂತೆ ಹೇಳಿದ್ದಾರೆ. ಇದಾದ ಬೆನ್ನಲೇ ಪೋಷಕರು ಕಾಲೇಜಿಗೆ ತೆರಳಿದ ವೇಳೆ ವೈಶವಿ ನೇಣುಬಿಗಿದು ಕೊಂಡು ಸಾವನ್ನಪಿರುವುದಾಗಿ ಹೇಳಿಕೊಂಡಿದ್ದಾರೆ.
ಮಗಳ ಸಾವಿನ ಕುರಿತು ಅನುಮಾನ ಇರುವುದಾಗಿ ವ್ಯಕ್ತಪಡಿಸಿದ ಪೋಷಕರು ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಸೂಕ್ತ ತನಿಖೆ ನಡೆಸುವಂತೆ ಕೇಳಿಕೊಂಡಿದ್ದಾರೆ.
ಇದನ್ನೂ ಓದಿ: Helicopter Crash: ನೈಜೀರಿಯಾದ ಪ್ರತಿಷ್ಠಿತ ಬ್ಯಾಂಕ್ನ ಸಿಇಒ ಸೇರಿ 6 ಮಂದಿ ದುರ್ಮರಣ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.