ICC Under 19 World Cup; ಈ ಸಲ ಹಿರಿಯರಂತೆ ಕಿರಿಯರಿಗೂ ಕಪ್ ಭಾಗ್ಯವಿಲ್ಲ

ಪ್ರಾಬಲ್ಯ ಮೆರೆದ ಆಸ್ಟ್ರೇಲಿಯ... 6ನೇ ಬಾರಿ ಕಪ್ ಗೆಲ್ಲಬೇಕೆಂಬ ಕನಸು ನುಚ್ಚುನೂರು

Team Udayavani, Feb 11, 2024, 8:56 PM IST

1-aasasas

ಬೆನೋನಿ (ದಕ್ಷಿಣ ಆಫ್ರಿಕಾ): ಇಲ್ಲಿ ರವಿವಾರ ನಡೆದ ಆಂಡರ್‌-19 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡಕ್ಕೆ ಸೋಲಿನ ಶಾಕ್ ನೀಡಿದ ಆಸ್ಟ್ರೇಲಿಯ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಅಮೋಘ ಬೌಲಿಂಗ್ ಮತ್ತು ಬ್ಯಾಟಿಂಗ್ ಪ್ರದರ್ಶನ ತೋರಿದ ಆಸೀಸ್ ಆಟಗಾರರು 79 ರನ್ ಗಳ ಅಮೋಘ ಜಯ ಸಾಧಿಸಿ 4 ನೇ ಬಾರಿ ಆಂಡರ್‌-19 ವಿಶ್ವಕಪ್‌ ಕಿರೀಟ ಮುಡಿಗೇರಿಸಿಕೊಂಡರು. ಅಜೇಯ ಯಾತ್ರೆಯ ಮೂಲಕ ಫೈನಲ್ ಗೆ ಬಂದಿದ್ದ ಕಿರಿಯರ 6ನೇ ಬಾರಿ ಕಪ್ ಗೆಲ್ಲಬೇಕೆಂಬ ಕನಸು ನುಚ್ಚುನೂರಾಯಿತು.

ಭಾರತದ ಹಿರಿಯರ ತಂಡ ಆಸ್ಟ್ರೇಲಿಯ ವಿರುದ್ಧ ಆಡಿದ ಕಳೆದೆರಡೂ ಐಸಿಸಿ ಕೂಟದ ಫೈನಲ್‌ ಪಂದ್ಯಗಳಲ್ಲಿ ಆಘಾತಕಾರಿ ಸೋಲನುಭವಿಸಿ ಮುಖಭಂಗ ಅನುಭವಿಸಿದಂತೆ ಇಂದೂ ಭಾರತೀಯರಿಗೆ ನಿರಾಸೆ ಅನುಭವಿಸಬೇಕಾಯಿತು.

ಆಸ್ಟ್ರೇಲಿಯ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.50 ಓವರ್ ಗಳಲ್ಲಿ7 ವಿಕೆಟ್ ಗಳನ್ನು ಕಳೆದುಕೊಂಡು 253 ರನ್ ಗಳಿಸಿತು. ಆರಂಭಿಕ ಆಟಾಗಾರ ಸ್ಯಾಮ್ ಕಾನ್ಸ್ಟಾಸ್ ಶೂನ್ಯಕ್ಕೆ ಔಟಾದರು. ಆಬಳಿಕ ಉತ್ತಮ ಆಟವಾಡಿದ ಹ್ಯಾರಿ ಡಿಕ್ಸನ್ 42ರನ್, ನಾಯಕ ಹಗ್ ವೈಬ್ಜೆನ್ 48 ರನ್ ಗಳಿಸಿ ಔಟಾದರು. ಹರ್ಜಸ್ ಸಿಂಗ್ 55 , ರಯಾನ್ ಹಿಕ್ಸ್ 20, ಆಲಿವರ್ ಪೀಕ್ ಔಟಾಗದೆ 46 ರನ್, ರಾಫ್ ಮ್ಯಾಕ್‌ಮಿಲನ್ 2, ಚಾರ್ಲಿ ಆಂಡರ್ಸನ್ 13, ಟಾಮ್ ಸ್ಟ್ರೇಕರ್ ಔಟಾಗದೆ 8 ರನ್ ಗಳಿಸಿದರು. ರಾಜ್ ಲಿಂಬಾನಿ 3 ವಿಕೆಟ್, ನಮನ್ ತಿವಾರಿ 2 ವಿಕೆಟ್, ಸೌಮಿ ಪಾಂಡೆ ಮತ್ತು ಮುಶೀರ್ ಖಾನ್ ತಲಾ ಒಂದು ವಿಕೆಟ್ ಪಡೆದರು.

254 ರನ್ ಗುರಿ ಬೆನ್ನಟ್ಟಿದ ಭಾರತ ಆಸೀಸ್ ಬಿಗಿ ಬೌಲಿಂಗ್ ದಾಳಿಗೆ ಸಿಲುಕಿ 43.5 ಓವರ್ ಗಳಲ್ಲಿ 174 ರನ್ ಗಳಿಗೆ ಆಲೌಟಾಯಿತು. 3 ರನ್ ಆಗುವಷ್ಟರಲ್ಲಿ ಅರ್ಶಿನ್ ಕುಲಕರ್ಣಿ ಅವರ ವಿಕೆಟ್ ಕಳೆದುಕೊಂಡಿತು. ತಾಳ್ಮೆಯ ಆಟವಾಡಿದ ಆದರ್ಶ್ ಸಿಂಗ್ 47 ರನ್ ಗಳಿಸಿದ್ದ ವೇಳೆ ಔಟಾದರು. ಭರವಸೆ ಮೂಡಿಸಿದ್ದ ಮುಶೀರ್ ಖಾನ್ 22 ರನ್ ಗಳಿಗೆ ನಿರ್ಗಮಿಸಿದರು. ನಾಯಕ ಉದಯ್ ಸಹರಣ್ 8, ಸಚಿನ್ ದಾಸ್ 9, ಪ್ರಿಯಾಂಶು ಮೊಲಿಯಾ 9 ಹೀಗೆ ಒಬ್ಬರಾದ ಮೇಲೆ ಒಬ್ಬರ ವಿಕೆಟ್ ಕಳೆದುಕೊಂಡು ಸೋಲಿನ ಸುಳಿಗೆ ಸಿಲುಕಿ ಪರದಾಡಿತು. ಕೊನೆಯಲ್ಲಿ ಮುರುಗನ್ ಅಭಿಷೇಕ್ 42 ರನ್ ಗಳಿಸಿ ಔಟಾದರು. ನಿರೀಕ್ಷೆ ಮೀರಿದ ಆಟವಾಡಿದ ಅವರು ಸೋಲಿನ ಅಂತರ ತಗ್ಗಿಸಿದರು.ನಮನ್ ತಿವಾರಿ ಔಟಾಗದೆ 14 ರನ್ ಗಳಿಸಿದರು. 

ಆಸೀಸ್ ಪರ ಬಿಗಿ ದಾಳಿ ನಡೆಸಿದ ಮಾಹ್ಲಿ ಬಿಯರ್ಡ್ಮನ್ 3 , ಮ್ಯಾಕ್‌ಮಿಲನ್ 3, ಕ್ಯಾಲಮ್ ವಿಡ್ಲರ್ 2 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.