KPTCL ಸಿಬಂದಿ ಪಿಂಚಣಿ ಹೊಣೆ ಗ್ರಾಹಕರ ಹೆಗಲಿಗೆ?

ಇಂದಿನಿಂದ ವಿಚಾರಣೆ ಆರಂಭಿಸಲಿರುವ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ

Team Udayavani, Feb 11, 2024, 11:49 PM IST

KPTCL

ಬೆಂಗಳೂರು: ಸರಕಾರ ಅಂದುಕೊಂಡಂತೆ ನಡೆದರೆ ಮುಂದಿನ ಹಣಕಾಸು ವರ್ಷದಿಂದ ಗ್ರಾಹಕರು ತಮ್ಮ ವಿದ್ಯುತ್‌ ಬಿಲ್‌ ಜತೆಗೆ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ (ಕೆಪಿಟಿಸಿಎಲ್‌)ದ ಸಿಬಂದಿಯ ಪಿಂಚಣಿ ಮತ್ತಿತರ ನಿವೃತ್ತಿ ಸವಲತ್ತುಗಳನ್ನು ಕೂಡ ಭರಿಸಬೇಕಾಗಬಹುದು!

ಈ ಸಂಬಂಧ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮವು ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ (ಕೆಇಆರ್‌ಸಿ)ಯ ಮುಂದೆ ಬೇಡಿಕೆ ಮಂಡಿಸಿದೆ. ಈ ಬಗೆಗಿನ ವಿಚಾರಣೆ ಫೆ. 12ರಿಂದ ಕೆಇಆರ್‌ಸಿಯಲ್ಲಿ ವಿವಿಧ ಹಂತಗಳಲ್ಲಿ ನಡೆಯಲಿದೆ. ಒಂದು ವೇಳೆ ಕೆಇಆರ್‌ಸಿಯು ಕೆಪಿಟಿಸಿಎಲ್‌ನ ಮನವಿಗೆ ಅಂಕಿತ ಮುದ್ರೆ ಒತ್ತಿದರೆ ಬರುವ ಹಣಕಾಸು ವರ್ಷದಿಂದ ವಿದ್ಯುತ್‌ ಬಿಲ್‌ ಜತೆಗೆ ಸಿಬಂದಿ ಪಿಂಚಣಿ ಭರಿಸುವ ಹೊಣೆ ಗ್ರಾಹಕರ ಹೆಗಲೇರಲಿದೆ. ಕೆಪಿಟಿಸಿಎಲ್‌ ನೌಕರರಿಗೆ ನೀಡುವ ಪಿಂಚಣಿ ಮತ್ತು ಇತರ ನಿವೃತ್ತಿ ಸವಲತ್ತುಗಳನ್ನು ಗ್ರಾಹಕರೇ ಭರಿಸಬೇಕೆಂದು ಸರಕಾರ ಈಗಾಗಲೇ ಆದೇಶಿಸಿದೆ. ಆದರೆ ಈ ಆದೇಶದಕ್ಕೆ ರಾಜ್ಯ ಹೈಕೋರ್ಟ್‌ ತಡೆ ನೀಡಿದ್ದರೂ, ಈ ಅಂಶವನ್ನು ಮರೆಮಾಚಿ ಕೆಪಿಸಿಟಿಸಿಎಲ್‌ ಸಿಬಂದಿಯ ಪಿಂಚಣಿಯನ್ನು ಗ್ರಾಹಕರ ತಲೆಗೆ ಕಟ್ಟುವ ಹುನ್ನಾರ ನಡೆಯುತ್ತಿದೆ.

1999ರಲ್ಲಿ ಕೆಪಿಟಿಸಿಎಲ್‌ ಅನ್ನು ವಿಭಜಿಸಿ ಎಸ್ಕಾಂಗಳನ್ನು ರಚಿಸುವ ಮುನ್ನ ಕೆಪಿಟಿಸಿಎಲ್‌ ನೌಕರರು ಸರಕಾರದೊಂದಿಗೆ ಒಪ್ಪಂದ ಮಾಡಿಕೊಂಡು ಸಿಬ್ಬಂದಿಯ ಪಿಂಚಣಿ ಮತ್ತಿತರ ಸವಲತ್ತುಗಳನ್ನು ಸರಕಾರ ಭರಸಬೇಕೆಂದು ಕೋರಿದ್ದರು. ಸರಕಾರ ಇದಕ್ಕೆ ಒಪ್ಪಿಕೊಂಡು ಸದ್ಯ ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ನೀಡುತ್ತ ಬಂದಿತ್ತು. ಆದರೆ 2021ರಿಂದ ಹಣಕಾಸು ಇಲಾಖೆ ಇದನ್ನು ಭರಿಸಲು ನಿರಾಕರಿಸಿದೆ. ನೌಕರರ ಪಿಂಚಣಿ ಮತ್ತಿತರ ವೆಚ್ಚವನ್ನು ಗ್ರಾಹಕರೇ ಭರಿಸಬೇಕೆಂದು ತಿಳಿಸಿದೆ.

ಗ್ರಾಹಕರ ವೇದಿಕೆ ತೀವ್ರ ವಿರೋಧ
ಈ ರೀತಿ ಗ್ರಾಹಕರ ತಲೆ ಮೇಲೆ ನೌಕರರ ಪಿಂಚಣಿ ವೆಚ್ಚವನ್ನು ಹೇರಿರುವ ಉದಾಹರಣೆ ಎಲ್ಲೂ ಇಲ್ಲ. ಗ್ರಾಹಕರು ತಾವು ಬಳಸಿದ ವಿದ್ಯುತ್‌ನ ಶುಲ್ಕ ನೀಡುತ್ತಾರೆಯೇ ಹೊರತು ನೌಕರರ ಪಿಂಚಣಿ ಭರಿಸಲು ಬರುವುದಿಲ್ಲ. ಈಗಾಗಲೇ ಖಾಸಗಿ ರಂಗದವರು ವಿದ್ಯುತ್‌ ರಂಗದಲ್ಲಿದ್ದಾರೆ. ಅವರ ನೌಕರರೂ ಇದೇ ರೀತಿ ಬೇಡಿಕೆ ಇಟ್ಟರೆ ಗ್ರಾಹಕರು ಭರಿಸಲು ಸಾಧ್ಯವಿಲ್ಲ ಎಂದು ವಿದ್ಯುತ್‌ ಗ್ರಾಹಕರ ವೇದಿಕೆಗಳು ತೀವ್ರವಾಗಿ ವಿರೋಧಿಸಿವೆ.

ತಡೆಯಾಜ್ಞೆ ಜಾರಿಯಲ್ಲಿದೆ
ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಮಹಾಸಂಸ್ಥೆ (ಎಎಫ್ಕೆಸಿಸಿಐ) ಈ ಪ್ರಸ್ತಾವನೆಗೆ ಈಗಾಗಲೇ ತನ್ನ ವಿರೋಧವನ್ನು ಲಿಖೀತ ರೂಪದಲ್ಲಿ ಸರಕಾರಕ್ಕೆ ಸಲ್ಲಿಸಿದೆ. ಗ್ರಾಹಕರೊಬ್ಬರು ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿ ತಡೆಯಾಜ್ಞೆ ಪಡೆದುಕೊಂಡಿದ್ದಾರೆ. ತಡೆಯಾಜ್ಞೆ ಈಗಲೂ ಜಾರಿಯಲ್ಲಿದೆ. ಆದರೂ ಸೋಮವಾರ ಆರಂಭಗೊಳ್ಳುವ ಸಾರ್ವಜನಿಕ ವಿಚಾರಣೆಯಲ್ಲಿ ಕೆಪಿಟಿಸಿಎಲ್‌ ನೌಕರರ ಪಿಂಚಣಿಯ ಭಾಗವನ್ನೂ ವಿದ್ಯುತ್‌ ದರ ಪರಿಷ್ಕರಣೆಯಲ್ಲಿ ಪರಿಗಣಿಸುವಂತೆ ಒತ್ತಾಯಿಸಲು ತೀರ್ಮಾನಿಸಿದೆ. ಇದರಿಂದ 2021-22 ಮತ್ತು 2023-24 ಅವಧಿಯ ಬಾಕಿ 3353.27 ಕೋಟಿ ರೂ. ಹಾಗೂ ಮುಂಬರುವ ದಿನಗಳಲ್ಲಿ ಬರುವ ಎಲ್ಲ ನೌಕರರ ಪಿಂಚಣಿ ವೆಚ್ಚವನ್ನು ಗ್ರಾಹಕರು ಭರಿಸಬೇಕಾಗುತ್ತದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.