“ನಮ್ಮ ಭಾವನೆ, ಮನಸ್ಸು ನಿಯಂತ್ರಕರು ನಾವೇ ಆಗಿರಬೇಕು’: ವಾಗ್ಮಿ ಬಿ. ಕೆ. ಶಿವಾನಿ
Team Udayavani, Feb 12, 2024, 12:01 AM IST
ಮಣಿಪಾಲ : ನಮ್ಮೊಳಗಿನ ಭಾವನೆ, ಮನಸ್ಸನ್ನು ನಾವೇ ನಿಯಂತ್ರಿ ಸಬೇಕು. ಇದರ ಕೀಲಿ ಕೈ ಇನ್ನೊಬ್ಬರಿಗೆ ಕೊಡಬಾರದು. ಪ್ರತಿ ವಿಷಯದಲ್ಲೂ ವೈಯಕ್ತಿಕವಾಗಿ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳುವ ಮೂಲಕ ಕುಟುಂಬ ದಲ್ಲೂ ಸಕಾರಾತ್ಮಕತೆ ರೂಪಿಸುತ್ತ ಹೋಗಬೇಕು. ಈ ಪ್ರಕ್ರಿಯೆ ಮುಂದು ವರಿದಂತೆ ಸಮಾಜದಲ್ಲೂ ಸಕಾರಾತ್ಮಕ ಚಿಂತನೆಗಳು ಹೆಚ್ಚಾಗುತ್ತವೆ ಎಂದು ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ವಾಗ್ಮಿ ಬಿ.ಕೆ. ಶಿವಾನಿ ಅವರು ಹೇಳಿದರು.
ಮಣಿಪಾಲ ಶಾಖೆಯ ವತಿಯಿಂದ ರವಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ “ಅಪರಿಮಿತ ಸಂತೋಷಕ್ಕಾಗಿ ಪರಮಾತ್ಮನೊಂದಿಗೆ ಮನಸ್ಸನ್ನು ಜೋಡಿಸಿ’ ಎಂಬ ವಿಷಯದಲ್ಲಿ ಅವರು ಸ್ಫೂರ್ತಿದಾಯಕ ಪ್ರವಚನ ನೀಡಿದರು.
ನಾವು ಮಾಡುವ ಕಾರ್ಯ ದಲ್ಲಿ ಪರಿಪೂರ್ಣ ತೆಯನ್ನು ರೂಢಿಸಿಕೊಳ್ಳ ಬೇಕು. ಪರಿಪೂರ್ಣತೆಯಿದ್ದಂತೆ ಸಕಾರಾತ್ಮಕ ಚಿಂತನೆಗಳು ನಮ್ಮೆಡೆಗೆ ಬರುತ್ತವೆ. ಇನ್ನೊಬ್ಬರ ಕಾರಣದಿಂದ ನಮ್ಮೊಳಗೆ ನಾವು ಒತ್ತಡ ತಂದು ಕೊಳ್ಳಬಾರದು. ಇನ್ನೊಬ್ಬರಿಗೆ ನಾವೂಒತ್ತಡ ನೀಡಬಾರದು. ನಿತ್ಯ ಜೀವನದ ವ್ಯವಹಾರಿಕ ವಿಷಯಗಳು ನಮ್ಮ ಒತ್ತಡ ಹೆಚ್ಚಿಸದಂತೆ ನೋಡಿ ಕೊಳ್ಳಬೇಕು. ಎಲ್ಲ ಕಾಯಿಲೆಗಳನ್ನು ಬಗೆಹರಿಸಲು ವೈದ್ಯರು ಸಿಗುತ್ತಾರೆ. ಆದರೆ, ನಮ್ಮೊಳಗೆ ಭಾವನಾತ್ಮಕವಾಗಿ ಸುದೃಢ ಆರೋಗ್ಯ ಕಾಪಾಡಿಕೊಳ್ಳಲು ನಾವೇ ವೈದ್ಯರಾಗಬೇಕು. ನಮ್ಮ ಗುರಿಯ ಬಗ್ಗೆ ಸ್ಪಷ್ಟತೆ ಇರಬೇಕು. ಸಾಗುತ್ತಿರುವ ಮಾರ್ಗ ಸರಿಯಿಲ್ಲ ಎಂದಾಗ ತತ್ಕ್ಷಣವೇ ಯು-ಟರ್ನ್ ತೆಗೆದುಕೊಂಡು ಸರಿಯಾದ ಮಾರ್ಗದಲ್ಲಿ ಸಾಗಬೇಕು ಎಂದರು.
ಮಕ್ಕಳಲ್ಲಿ ಸಕಾರಾತ್ಮಕತೆ ಬೆಳೆಸಿ
ಪರೀಕ್ಷೆಯಲ್ಲಿ ಗಳಿಸುವ ಅಂಕದ ಕಾರಣಕ್ಕೆ ಎಲ್ಲವೂ ಸಾಧ್ಯವಾಗುತ್ತದೆ ಎಂದೇನೂ ಇಲ್ಲ. ಹೀಗಾಗಿ ಅಂಕಗಳ ಮೇಲೆ ಗಮನ ಮಾಡದೇ ಅವರಲ್ಲಿ ಪರೀಕ್ಷೆ ಭಯ ದೂರ ಮಾಡಬೇಕು. ವೃತ್ತಿಪರ ಏಳ್ಗೆಯ ಜತೆಗೆ ವೈಯಕ್ತಿಕ ಏಳ್ಗೆಯೂ ಅತಿ ಮುಖ್ಯ. ವೈಯಕ್ತಿಕವಾಗಿ ನಾವು ಬೆಳೆಯಬೇಕಾದರೆ ಬೌದ್ಧಿಕವಾಗಿ ಬೆಳೆಯಬೇಕು. ಮಕ್ಕಳಲ್ಲಿ ಸಕಾರಾತ್ಮಕ ಬೌದ್ಧಿಕತೆ/ಚಿಂತನೆ ತುಂಬಬೇಕು ಎಂದು ಸಲಹೆ ನೀಡಿದರು.
ಶಾಸಕ ಯಶ್ಪಾಲ್ ಎ. ಸುವರ್ಣ, ಐಎಂಎ ಉಡುಪಿ ಶಾಖೆ ಅಧ್ಯಕ್ಷೆ ಡಾ| ರಾಜಲಕ್ಷ್ಮೀ, ಮನೋವೈದ್ಯ ವಿರೂಪಾಕ್ಷ ದೇವರಮನೆ, ತರಂಗ ವಾರ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್. ಪೈ, ಎಂಎಂಎನ್ಎಲ್ನ ವನಿತಾ ಜಿ. ಪೈ, ಆಭರಣ ಸಮೂಹ ಸಂಸ್ಥೆಯ ಸಂಧ್ಯಾ ಕಾಮತ್, ಉದ್ಯಮಿಗಳಾದ ಅಜಯ್ ಪಿ. ಶೆಟ್ಟಿ, ರಮೇಶ್ ಬಂಗೇರ, ಬ್ರಹ್ಮಕುಮಾರೀಸ್ ಮಣಿಪಾಲ ಶಾಖೆಯ ಸಂಚಾಲಕಿ ಬಿ.ಕೆ.ಸೌರಭಾ, ಬಿ.ಕೆ. ಸುಜಾತಾ ಉಪಸ್ಥಿತರಿದ್ದರು. ಶ್ರೀನಿಧಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ
Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ
Punjab; ಆಮ್ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.