Arrested: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಚಾಲಕನ ಸೆರೆ
Team Udayavani, Feb 12, 2024, 11:40 AM IST
ಬೆಂಗಳೂರು: ಮುಖ್ಯಮಂತ್ರಿಗಳ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಆರೋಪದಡಿ ಮುನೇಗೌಡ (50) ಎಂಬವರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿಧಾನಸೌಧ ಮುಂಭಾಗ ಫೆ.8ರಂದು ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ನಡೆದಿದ್ದ ಘಟನೆ ಬಗ್ಗೆ ಸಾರಿಗೆ ಇಲಾಖೆ ಅಧಿಕಾರಿಗಳು ದೂರು ನೀಡಿದ್ದರು. ಅದರ ಅನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾಅನೆ ಎಂದು ಪೊಲೀಸರು ಹೇಳಿದರು.
ದೊಡ್ಡಬಳ್ಳಾಪುರ ಮೂಲದ ಮುನೇಗೌಡ, ವಾಹನ ಚಾಲಕ. ತನ್ನ ಚಾಲನಾ ಪರವಾನಗಿ (ಡಿಎಲ್) ನವೀಕರಣಕ್ಕಾಗಿ ಆರ್ಟಿಒ ಕಚೇರಿಗೆ ಅರ್ಜಿ ಸಲ್ಲಿಸಿದ್ದ. ನಿಗದಿತ ಪ್ರಕ್ರಿಯೆಗಳನ್ನೂ ಪೂರ್ಣ ಗೊಳಿಸಿದ್ದ. ಆದರೆ, ಹಲವು ದಿನವಾದರೂ ಡಿ.ಎಲ್ ಕೈಗೆ ಸಿಕ್ಕಿರಲಿಲ್ಲ. ಡಿಎಲ್ ನೀಡುವಂತೆ ಹಲವು ಬಾರಿ ಆರ್ಟಿಒ ಕಚೇರಿ ಅಧಿಕಾರಿಗಳನ್ನು ಕೋರಿದ್ದ. ಆದರೆ, ಸ್ಪಂದನೆ ಸಿಕ್ಕಿರಲಿಲ್ಲ. ಅಧಿಕಾರಿಗಳು ಕಾಲಹರಣ ಮಾಡುತ್ತಿದ್ದರು. ಅದರಿಂದ ನೊಂದ ಮುನೇಗೌಡ, ಜನಸ್ಪಂದನಾ ಕಾರ್ಯ ಕ್ರಮದಲ್ಲಿ ಅಹವಾಲು ಸಲ್ಲಿಸಲು ಬಂದಿದ್ದ. ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಅಹವಾಲು ಆಲಿಸಿರಲಿಲ್ಲ. ಮತ್ತಷ್ಟು ಸಿಟ್ಟಾದ ಮುನೇಗೌಡ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ.
ಹೀಗಾಗಿ ಸಚಿವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆತನ ವಿರುದ್ಧ ಸಾರಿಗೆ ಅಧಿಕಾರಿಗಳು ದೂರು ನೀಡಿದ್ದರು. ಹೀಗಾಗಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ
Tungabhadra ಡ್ಯಾಂನ ಎಲ್ಲ 33 ಗೇಟ್ ಬದಲಿಸಲು ತಜ್ಞರ ಸಲಹೆ
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.