Vijayapura; ಪತ್ನಿ ಹತ್ಯೆಗೆ ಯತ್ನಿಸಿದ ಪತಿಗೆ ಮೂರುವರೆ ವರ್ಷ ಜೈಲು

ತನ್ನ ಜಮೀನಿಗೆ ಪತ್ನಿ ಎಮ್ಮೆ ಪ್ರವೇಶಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪತಿ

Team Udayavani, Feb 12, 2024, 6:30 PM IST

Vijayapura; ಪತ್ನಿ ಹತ್ಯೆಗೆ ಯತ್ನಿಸಿದ ಪತಿಗೆ ಮೂರುವರೆ ವರ್ಷ ಜೈಲು

ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಹತ್ಯೆಗೆ ಯತ್ನಿಸಿದ ಪತಿಗೆ ಮೂರುವರೆ ವರ್ಷ ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ನ್ಯಾಯಾಲಯ ಸೋಮವಾರ ಆದೇಶಿಸಿದೆ. ದಂಡದ ಹಣದಲ್ಲಿ ಪತ್ನಿಗೆ 22,500 ರೂ. ಪರಿಹಾರ ನೀಡುವಂತೆಯೂ ಅದೇಶಿಸಿದೆ.

ಇಂಡಿ ತಾಲೂಕು ಬಬಲಾದಿ ಗ್ರಾಮದ ಚನ್ನಪ್ಪ ಸಿದರಾಯ ಧೂಳಖೇಡ ಎಂಬಾತನೇ ಪತ್ನಿಯ ಹತ್ಯೆ ಯತ್ನದ ಆರೋಪದಲ್ಲಿ ಶಿಕ್ಷೆಗೆ ಗುರಿಯಾದವ. ಚನ್ನಪ್ಪ ಹಾಗೂ ಆತನ ಪತ್ನಿ ಸರುಬಾಯಿ ಮಧ್ಯೆ ಕೌಟುಂಬಿಕ ಕಲಹವಿದ್ದು, ಇಬ್ಬರೂ ಪ್ರತ್ಯೇಕವಾಗಿ ವಾಸವಿದ್ದರು. ಸರುಬಾಯಿ ತನ್ನ ಮಕ್ಕಳೊಂದಿಗೆ ತನ್ನ ಪಾಲಿಗೆ ಬಂದಿರುವ ಜಮೀನಿನಲ್ಲಿ ಶೆಡ್ ಹಾಕಿಕೊಂಡು ವಾಸವಿದ್ದು, ಆರೋಪಿ ಚನ್ನಪ್ಪನ ಜಮೀನಿಗೆ ಸೇರಿದ ಜಮೀನಿಗೆ ಸರುಬಾಯಿ ಎಮ್ಮೆ ಮೇಯಲು ಹೋಗಿತ್ತು. ಇದನ್ನೇ ನೆಪ ಮಾಡಿಕೊಂಡ ಆರೋಪಿ ಚನ್ನಪ್ಪ 2019 ಅಕ್ಟೋಬರ್ 26 ರಂದು ತನ್ನ ಜಮೀನಿನಲ್ಲಿ ನಿಮ್ಮ ಎಮ್ಮೆ ಮೇಯ್ದು ಹಾಳು ಮಾಡಿದೆ ಎಂದು ಕಲ್ಲಿನಿಂದ ತಲೆ ಹಾಗೂ ಕೈಗೆ ಭಾರಿ ಗಾಯ ಮಾಡಿದ್ದ.

ಈ ಕುರಿತು ಗಾಯಾಳು ತಾಯಿ ಸರುಬಾಯಿ ಪರವಾಗಿ ಆಕೆಯ ಮಗ ಸುಭಾಶ ಧೂಳಖೇಡ ಹೋರ್ತಿ ಪೊಲೀಸರಿಗೆ ಕೊಲೆ ಯತ್ನದ ದೂರು ನೀಡಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಪಿ.ಎಸ್.ಐ. ಎಸ್.ಎನ್.ಅಂಬಿಗೇರ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶಿವಾಜಿ ನಾಲವಾಡೆ ಸರ್ಕಾರಿ ಅಭಿಯೋಜಕರು ಆರೋಪ ರುಜುವಾತು ಪಡಿಸಲು ಅಗತ್ಯವಾದ ಸಾಕ್ಷಿ, ಪುರಾವೆಗಳನ್ನು ಸಲ್ಲಿಸಿದ್ದನ್ನು ಪರಿಗಣಿಸಿ ಶಿಕ್ಷೆ ವಿಧಿಸಿದ್ದಾರೆ.

ಪತ್ನಿ ಸರುಬಾಯಿ ಕೊಲೆ ಯತ್ನದ ಆರೋಪದಲ್ಲಿ ಚನ್ನಪ್ಪ ಧೂಳಖೇಡ ಇವನಿಗೆ ಕೊಲೆ ಯತ್ನ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ, ಇದೇ ಪ್ರಕರಣದಲ್ಲಿ ದಾಖಲಾಗಿರುವ ಐಪಿಸಿ 506 ಕಲಂಗೆ ಆರು ತಿಂಗಳು ಜೈಲು ಶಿಕ್ಷೆ, 2500 ರೂ. ದಂಡ, ಕಲಂ 504ಕ್ಕೆ ಸಂಬಂಧಿಸಿದಂತೆ 2500 ರೂ. ದಂಡ ಸೇರಿದಂತೆ 30 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ.

ಅಲ್ಲದೇ ದಂಡದ ಹಣದಲ್ಲಿ ಬಾಧಿತ ಸರುಬಾಯಿಗೆ 22,500 ರೂ. ಹಣವನ್ನು ಪರಿಹಾರವಾಗಿ ನೀಡಬೇಕು ಎಂದು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ಎಸ್.ಎಚ್.ಹಕೀಮ ವಾದ ಮಂಡಿಸಿದ್ದರು

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.