Karnataka Assembly Joint Session ಸದನದಲ್ಲಿ ಜೈ ಶ್ರೀರಾಮ್‌ ವರ್ಸಸ್‌ ಜೈ ಭೀಮ್‌ ಘೋಷಣೆ

ಕೇಸರಿ ಶಾಲು ಧರಿಸಿ ಬಂದಿದ್ದ ಬಿಜೆಪಿ ಶಾಸಕರು "ಜೈ ಶ್ರೀರಾಮ್‌' ಎಂದಾಗ "ಜೈ ಭೀಮ್‌' ಘೋಷಣೆ ಕೂಗಿದ ಸಚಿವ ಸಂತೋಷ್‌ ಲಾಡ್‌

Team Udayavani, Feb 13, 2024, 12:34 AM IST

Karnataka Assembly Joint Session ಸದನದಲ್ಲಿ ಜೈ ಶ್ರೀರಾಮ್‌ ವರ್ಸಸ್‌ ಜೈ ಭೀಮ್‌ ಘೋಷಣೆ

ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಭಾಷಣ ಮುಗಿಸಿ ತೆರಳುತ್ತಿದ್ದಂತೆ ವಿಧಾನಸಭೆಯಲ್ಲಿ “ಜೈ ಶ್ರೀರಾಮ್‌’ ಹಾಗೂ “ಜೈ ಭೀಮ್‌’ ಘೋಷಣೆ ಮೊಳಗಿದೆ.

ಅಯೋಧ್ಯೆಯಲ್ಲಿ ನಡೆದ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಬಿಜೆಪಿಯ ಎಲ್ಲ ಶಾಸಕರು ಸದನಕ್ಕೆ ಕೇಸರಿ ಶಾಲು ಧರಿಸಿ ಆಗಮಿಸಿದ್ದರು. ರಾಜ್ಯಪಾಲರು ಸದನದಿಂದ ತೆರಳುತ್ತಿದ್ದಂತೆ ಶಾಸಕ ವಿ.ಸುನಿಲ್‌ ಕುಮಾರ್‌ “ಜೈ ಶ್ರೀರಾಮ್‌’ ಎಂದು ಕೂಗುತ್ತಿದ್ದಂತೆ ವಿಪಕ್ಷದ ಪಾಳಯದಿಂದ “ಜೈ ಶ್ರೀರಾಮ್‌, ಜೈ ಜೈ ಶ್ರೀರಾಮ್‌’ ಎಂಬ ಘೋಷಣೆ ಮೊಳಗಲಾರಂಭಿಸಿತು.

ಬಿಜೆಪಿಯವರ ಈ ನಡೆಯಿಂದ ಆಡಳಿತ ಪಕ್ಷದ ಶಾಸಕರು, ಅದರಲ್ಲೂ ವಿಶೇಷವಾಗಿ ಮುಂದಿನ ಸಾಲಿನಲ್ಲಿ ಕುಳಿತ ಸಚಿವರು ಕಕ್ಕಾಬಿಕ್ಕಿಯಾದರು. ಆದರೆ ಎರಡನೇ ಸಾಲಿನಲ್ಲಿ ಕುಳಿತಿದ್ದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ “ಜೈ ಭೀಮ್‌’ ಘೋಷಣೆ ಮೊಳಗಿಸಿದರು. ಕಾಂಗ್ರೆಸ್‌ನ ಇತರ ಶಾಸಕರು ಈ ಘೋಷಣೆ ಕೂಗುವುದಕ್ಕೆ ಮೊದಲೇ ರಾಷ್ಟ್ರಗೀತೆ ಪ್ರಾರಂಭವಾಯಿತು. ಹೀಗಾಗಿ ಆಡಳಿತ-ವಿಪಕ್ಷದ ಸ್ಲೋಗನ್‌ ವಾರ್‌ ಇಷ್ಟಕ್ಕೇ ಕೊನೆಯಾಯಿತು.

ಕೇಸರಿ ಅವರ ಮನೆ ಆಸ್ತಿಯೇ? ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಅವರು ಧರ್ಮದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಅವರು (ಬಿಜೆಪಿ) ಏನಾದರೂ ಹಾಕಿಕೊಂಡು ಬರಲಿ. ಕೇಸರಿಯಾದರೂ ಧರಿಸಲಿ, ಕಪ್ಪಾದರೂ ಧರಿಸಲಿ. ನಮ್ಮ ರಾಜ್ಯದ ಹಿತಕ್ಕೆ ಬೇಕಾದ ಕೆಲಸ ನಾವು ಮಾಡುತ್ತೇವೆ.
-ಡಿ.ಕೆ.ಶಿವಕುಮಾರ್‌, ಡಿಸಿಎಂ

ಕಾಂಗ್ರೆಸ್‌ ಶಾಸಕ ರವಿಗೆ ಕೇಸರಿ ಶಾಲು
ಬೆಂಗಳೂರು: ಅಧಿವೇಶನದ ಮೊದಲ ದಿನವಾದ ಸೋಮವಾರ ಕೇಸರಿ ಶಾಲು ಧರಿಸಿ ಬಂದಿದ್ದ ಬಿಜೆಪಿ ಸದಸ್ಯರು, ಕಾಂಗ್ರೆಸ್‌ ಶಾಸಕ ರವಿ ಗಣಿಗ ಕೊರಳಿಗೂ ಕೇಸರಿ ಶಾಲು ಹಾಕಿ ಕಿಚಾಯಿಸಿದ ಪ್ರಸಂಗ ನಡೆಯಿತು.

ಇತ್ತೀಚೆಗೆ ಮಂಡ್ಯದ ಕೆರಗೋಡಿ ನಲ್ಲಿ ಹನುಮಧ್ವಜವನ್ನು ಕೆಳಗಿಳಿಸಿದ ಪ್ರಸಂಗದಿಂದ ಇಡೀ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತಲ್ಲದೆ, ಶಾಸಕರ ವಿರುದ್ಧವೇ ಗ್ರಾಮಸ್ಥರು ತಿರುಗಿ ಬಿದ್ದಿದ್ದರು. ಬಿಜೆಪಿ ಸದಸ್ಯರೂ ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಸೋಮವಾರ ಜಂಟಿ ಅಧಿವೇಶನದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಮುಖಾಮುಖಿಯಾದ ಶಾಸಕರು, ಪರಸ್ಪರ ಕೈ ಕುಲುಕಿ ಕುಶಲೋಪರಿ ವಿಚಾರಿಸುತ್ತಿದ್ದರು.

ವಿಧಾನಸಭೆಯ ಆವರಣದಲ್ಲಿ ಮುನಿರತ್ನ, ವಿ.ಸುನಿಲ್‌ ಕುಮಾರ್‌ ಮಾತನಾಡುತ್ತಾ ನಿಂತಿದ್ದರು. ಅಲ್ಲಿಗೆ ಬಂದ ಕಾಂಗ್ರೆಸ್‌ ಶಾಸಕ ರವಿ, ಮುನಿರತ್ನರನ್ನು ಮಾತನಾಡಿಸಿದರು. “ಏನಣ್ಣಾ ವಿಶೇಷ’ ಎಂದುಕೊಂಡು ಬಂದ ರವಿಯನ್ನು ಕಂಡು ಕೈ ಕುಲುಕಿದ ಮುನಿರತ್ನ, ತಮ್ಮ ಹೆಗಲ ಮೇಲಿದ್ದ ಕೇಸರಿ ಶಾಲನ್ನು ರವಿ ಕೊರಳಿಗೆ ಹಾಕಲು ಮುಂದಾದರು. ಅಲ್ಲದೆ, ಕೇಸರಿ ಶಾಲು ಹಾಕಬಹುದಾ ಎಂದು ಮುನಿರತ್ನ ಮುಂದೆ ಬರುತ್ತಿದ್ದಂತೆ, ಯಾಕೆ ಹಾಕಲ್ಲ? ನಾವೂ ಹಿಂದೂಗಳೇ ಎನ್ನುತ್ತಾ ಕೇಸರಿ ಶಾಲು ಹಾಕಿಸಿಕೊಂಡು ಕೆಮರಾಗಳಿಗೆ ಪೋಸು ಕೊಟ್ಟರು.

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.