Kalaburagi; ಕುಡಾ ಆಯುಕ್ತರ ವರ್ಗಾವಣೆಗೆ ತಡೆಯಾಜ್ಞೆ: ಸರ್ಕಾರಕ್ಕೆ ಮತ್ತೆ ಮುಖಭಂಗ
ನಿವೃತ್ತಿಗೆ ಐದೇ ತಿಂಗಳು ಕಾಲಾವಧಿವಿದ್ದರೂ ವರ್ಗಾವಣೆ ಗೊಳಿಸಿದ್ದ ಸರ್ಕಾರ
Team Udayavani, Feb 13, 2024, 3:01 PM IST
ಕಲಬುರಗಿ: ಇಲ್ಲಿನ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ (ಕುಡಾ) ಆಯುಕ್ತ ದಯಾನಂದ ಪಾಟೀಲ್ ವರ್ಗಾವಣೆಗೆ ಕೆಎಟಿ ಮತ್ತೆ ತಡೆಯಾಜ್ಞೆ ನೀಡಿದೆ.
ಕಳೆದ ಜುಲೈ ತಿಂಗಳಲ್ಲಿ ವರ್ಗಾವಣೆ ಹಾಗೂ ಅಕ್ಟೋಬರ್ ದಲ್ಲಿ ಅಮಾನತ್ತು ಮಾಡಿದ್ದಾಗಲೂ ಕೆಇಟಿಗೆ ಮೊರೆ ಹೋಗಿದ್ದಾಗ ತಡೆಯಾಜ್ಞೆ ನೀಡಲಾಗಿತ್ತು. ಎರಡು ಸಲ ವರ್ಗಾವಣೆ ಹಾಗೂ ಒಂದು ಸಲ ಅಮಾನತ್ತು ಸೇರಿ ಒಟ್ಟಾರೆ ಮೂರು ಸಲವೂ ಸರ್ಕಾರದ ಕ್ರಮದ ವಿರುದ್ದ ತಡೆಯಾಜ್ಞೆ ನೀಡಿದಂತಾಗಿದೆ. ಹೀಗೆ ಮೂರು ಸಲ ಕೆಎಟಿ ತಡೆಯಾಜ್ಞೆ ನೀಡಿದ್ದರಿಂದ ಈ ಪ್ರಕರಣ ರಾಜ್ಯದ ಗಮನ ಸೆಳೆಯುವಂತಾಗಿದೆ.
ಸರ್ಕಾರಿ ನೌಕರರ ನಿಯಾಮವಳಿ ಪ್ರಕಾರ ನಿವೃತ್ತಿಯ ಆರು ತಿಂಗಳು ಮುಂಚೆ ವರ್ಗಾವಣೆ ಮಾಡಬಾರದು ಎಂಬುದಿದ್ದರೂ ಇಲ್ಲಿ ವರ್ಗಾವಣೆ ಮಾಡಿರುವುದು ನಿಜಕ್ಕೂ ಆತ್ಮಾವಲೋಕನಕ್ಕೆ ಎಡೆ ಮಾಡಿ ಕೊಟ್ಟಿದೆ.
ಪ್ರಮುಖವಾಗಿ ಮೊದಲ ಸಲ ವರ್ಗಾವಣೆಗೆ ತಡೆಯಾಜ್ಞೆ ನೀಡಲಾಗಿದ್ದರೂ ಮತ್ತೆ ಅಕ್ಟೋಬರ್ ತಿಂಗಳಲ್ಲಿ ವಿನಾಕಾರಣ ಹಿಂದಿನ ಪ್ರಕರಣ ಉಲ್ಲೇಖಿಸಿ ಅಮಾನತ್ತುಗೊಳಿಸಲಾಗಿತ್ತು. ಆಗಲೂ ಸಹ ಕೆಎಟಿ ಮೊರೆ ಹೋಗಿ ತಡೆಯಾಜ್ಞೆ ತರಲಾಗಿತ್ತು. ತದನಂತರ ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವೀರಶೈವ- ಲಿಂಗಾಯತ ಅಧಿಕಾರಿಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಸೂಕ್ತ ಸ್ಥಳ ಕೊಡುತ್ತಿಲ್ಲ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಇದಾದ ನಂತರ ಕಲಬುರಗಿ ಆಯುಕ್ತ ದಯಾನಂದ ಪಾಟೀಲ್ ವರ್ಗಾವಣೆ ಪ್ರಹಸನ ಕೆಲ ಕಾಲ ತೆರೆ ಹಿಂದೆ ಸರಿದಿತ್ತು.
ಆದರೆ ಕಳೆದೆರಡು ದಿನಗಳ ಹಿಂದೆ ಅಂದರೆ ಫೆ.9 ರಂದು ದಯಾನಂದ ಪಾಟೀಲ್ ಅವರನ್ನು ರಾಜ್ಯ ಸರ್ಕಾರ ಕುಡಾ ಆಯುಕ್ತರ ಹುದ್ದೆಯಿಂದ ವರ್ಗಾವಣೆಗೊಳಿಸಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ (ಕೆಕೆಆರ್ ಡಿಬಿ) ಮಂಡಳಿಯ ಅಧೀನ ಕಾರ್ಯದರ್ಶಿ ಹುದ್ದೆಗೆ ನಿಯೋಜಿಸಲಾಗಿತ್ತು. ಕುಡಾ ಆಯುಕ್ತರ ಹುದ್ದೆಗೆ ದಯಾನಂದ ಬದಲು ಗಂಗಾಧರ ಶಿವಾನಂದ ಮಾಳಗೆ ಅವರನ್ನು ವರ್ಗಾವಣೆಗೊಳಿಸಲಾಗಿದ್ದರಿಂದ ಮಂಗಳವಾರ ಫೆ.13 ರಂದು ಬೆಳಿಗ್ಗೆ 10 ಕ್ಕೆ ಕುಡಾ ಆಯುಕ್ತರಾಗಿ ಕಾರ್ಯಭಾರ ವಹಿಸಿಕೊಂಡಿದ್ದಾರೆ.
ಆದರೆ ಇದೀಗ ದಯಾನಂದ ಪಾಟೀಲ್ ಅವರ ವರ್ಗಾವಣೆಗೆ ಕೆಎಟಿ ತಡೆಯಾಜ್ಞೆ ನೀಡಿದ್ದರಿಂದ ಮತ್ತೆ ಕುಡಾ ಆಯುಕ್ತರಾಗಿ ಕಾರ್ಯಭಾರ ವಹಿಸಲು ಮುಂದಾಗಿರುವುದರಿಂದ ಸಂಘರ್ಷವೇ ಏರ್ಪಟ್ಟಿದಂತಾಗಿದೆ.
ವರ್ಷದಿಂದ ನಡೆಯದ ಕುಡಾ ಸಭೆ: ಆಯುಕ್ತರ ವರ್ಗಾವಣೆ ಸಂಘರ್ಷ ಹಿನ್ನೆಲೆಯಲ್ಲಿ ಕಳೆದೊಂದು ವರ್ಷದಿಂದ ಕುಡಾ ಸಭೆಯೇ ನಡೆದಿಲ್ಲ. ಸಭೆ ನಡೆಯದ ಹಿನ್ನೆಲೆಯಲ್ಲಿ ಮಹಾನಗರದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಕಳೆದೆರಡು ದಿನಗಳ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕುಡಾದಲ್ಲಿನ ಅಧಿಕಾರಿಗಳ ವರ್ಗಾವಣೆ ನಂತರವೇ ಕುಡಾ ಸಭೆ ನಡೆಯುವುದು ಎಂಬುದಾಗಿ ಹೇಳಿದ್ದರು. ಕುಡಾದಲ್ಲಿ ಕೆಲವು ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ಸಭೆ ನಡೆಯಲಿಲ್ಲ ಎಂಬುವುದಾಗಿ ಪ್ರತಿಕ್ರಿಯೆ ನೀಡಿದ್ದರು. ಒಟ್ಟಾರೆ ಈ ಪ್ರಹಸನವು ಸಮಾಜದಲ್ಲಿ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.