Maharashtraದಲ್ಲಿ ಕಾಂಗ್ರೆಸ್ ಗೆ ಭಾರೀ ಹಿನ್ನಡೆ: ಮಾಜಿ ಸಿಎಂ ಚೌಹಾಣ್ BJPಗೆ ಸೇರ್ಪಡೆ
ಆದರ್ಶ ಹೌಸಿಂಗ್ ಸೊಸೈಟಿ ಹಗಣರದ ಹಿನ್ನೆಲೆಯಲ್ಲಿ ಚೌಹಾಣ್ ರಾಜೀನಾಮೆ ನೀಡಿದ್ದರು
Team Udayavani, Feb 13, 2024, 3:34 PM IST
ಮುಂಬೈ: ಮಹಾರಾಷ್ಟ್ರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಎಂಬಂತೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಮಂಗಳವಾರ (ಫೆ.13) ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಮತ್ತು ಬಿಜೆಪಿಯ ಇತರ ಮುಖಂಡರು ಹಾಜರಿದ್ದರು.
ಇದನ್ನೂ ಓದಿ:Kalaburagi; ಕುಡಾ ಆಯುಕ್ತರ ವರ್ಗಾವಣೆಗೆ ತಡೆಯಾಜ್ಞೆ: ಸರ್ಕಾರಕ್ಕೆ ಮತ್ತೆ ಮುಖಭಂಗ
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದ ಅಶೋಕ್ ಚವಾಣ್ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಳ್ಳುವುದಾಗಿ ತಿಳಿಸಿದ್ದು, ತನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿದೆ ಎಂದು ತಿಳಿಸಿದ್ದರು.
ಇಂದು ನಾನು ಔಪಚಾರಿಕವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ. ಮಹಾರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿಗೆ ನಾವು ಕಾರ್ಯನಿರ್ವಹಿಸಲಿದ್ದೇವೆ ಎಂಬ ಭರವಸೆ ನೀಡುವುದಾಗಿ ಚೌಹಾಣ್ ಈ ಸಂದರ್ಭದಲ್ಲಿ ಹೇಳಿದರು.
1986ರಿಂದ 1995ರವರೆಗೆ ಅಶೋಕ್ ಚೌಹಾಣ್ ಮಹಾರಾಷ್ಟ್ರ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. 1999ರಿಂದ 2014ರವರೆಗೆ ಮಹಾರಾಷ್ಟ್ರ ಶಾಸಕರಾಗಿದ್ದರು.
2008ರ ಡಿಸೆಂಬರ್ 8ರಿಂದ 2010 ನವೆಂಬರ್ 9ರವರೆಗೆ ಚೌಹಾಣ್ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಆದರ್ಶ ಹೌಸಿಂಗ್ ಸೊಸೈಟಿ ಹಗಣರದ ಹಿನ್ನೆಲೆಯಲ್ಲಿ ಚೌಹಾಣ್ ಗೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಪಕ್ಷ ಸೂಚನೆ ನೀಡಿತ್ತು.
ಮಹಾರಾಷ್ಟ್ರ ರಾಜಕಾರಣದಲ್ಲಿ ಚೌಹಾಣ್ ಕಾಂಗ್ರೆಸ್ ಪಕ್ಷದ ಮೂರನೇ ಪ್ರಭಾವಿ ಮುಖಂಡರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಬಹುದೊಡ್ಡ ಹಿನ್ನಡೆ ಎಂಬಂತೆ ದಕ್ಷಿಣ ಮುಂಬೈ ಸಂಸದ ಮಿಲಿಂದ್ ದಿಯೋರಾ ಮೊದಲು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ನಂತರ ಬಾಬಾ ಸಿದ್ದಿಖಿ ರಾಜೀನಾಮೆ ನೀಡಿದ್ದು, ಇದೀಗ ಅಶೋಕ್ ಚೌಹಾಣ್ ಕೂಡಾ ಕಾಂಗ್ರೆಸ್ ತೊರೆದಿರುವುದು ಪಕ್ಷಕ್ಕೆ ದೊಡ್ಡ ಹಿನ್ನಡೆಯಾದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ
Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ
AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
AFC U20 Asian Cup Qualifiers: ಅಂಡರ್-20 ಏಷ್ಯಾ ಅರ್ಹತಾ ಫುಟ್ಬಾಲ್ಗೆ ಭಾರತ ತಂಡ
Duleep Trophy: ಇಂಡಿಯಾ ಎ, ಡಿ ತಂಡಗಳಿಗೆ 300 ಲೀಡ್
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.