ನಿಸಾರ್ಥ ಸೇವಾ ಮನೋಭಾವದ ಸಮಿತಿ ಅಭಿವೃದ್ಧಿ ಹೊಂದಲಿ: ಜಯ ಎಂ. ಶೆಟ್ಟಿ


Team Udayavani, Feb 13, 2024, 5:14 PM IST

Udayavani Kannada Newspaper

ವಸಾಯಿ: ದೂರಗಾಮಿ ಚಿಂತನೆಯ, ಪ್ರಗತಿಪರ ಯೋಚನೆಯ ಬೆರಳೆಣಿಕೆಯ ಮಂದಿ ಸ್ಥಾಪಿಸಿದ ವಸಾಯಿ ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿಗೆ ಅಧ್ಯಾತ್ಮವೇ ಭದ್ರ ಬುನಾದಿ. ಬದಲಾವಣೆಯ ಕಾಲ ಘಟ್ಟದಲ್ಲಿ ಇಂದು ಧರ್ಮ, ಸಂಸ್ಕೃತಿಗಳ ಕುರಿತು ಜಾಗೃತಿ ಮೂಡಿಸುವ ಕೆಲಸ ನಮ್ಮಿಂದ ಆಗಬೇಕಾಗಿದೆ. ಪರಸ್ಪರ ಸಹನೆ, ಸಹಕಾರ, ಸಂಪ್ರದಾಯದೊಂದಿಗೆ ಮುಂದಿನ ಪೀಳಿಗೆಗೆ ಮಾರ್ಗದ ರ್ಶಕರಾಗೋಣ ಎಂದು ವಸಾಯಿ ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿಯ ಸ್ಥಾಪಕ ಅಧ್ಯಕ್ಷ ಜಯ ಎಂ. ಶೆಟ್ಟಿ ತಿಳಿಸಿದರು.

ಫೆ. 10ರಂದು ವಸಾಯಿ ಪಶ್ವಿ‌ಮದ ನವಯುಗ್‌ ನಗರ, ದಿವಾನ್‌ ಮನ್‌ ತಲಾವ್‌ ಸಮೀಪದ ವಸಾಯಿ ಸಾರ್ವ ಜನಿಕ ಶ್ರೀ ಶನೀಶ್ವರ ಸೇವಾ ಸಮಿತಿಯ 25ನೇ ವಾರ್ಷಿಕ ಸಮಾರಂಭದಲ್ಲಿ ಅವರು ಮಾತನಾಡಿ, ಕಿತ್ತು ತಿನ್ನುವ ಬಡ ತನದಲ್ಲೂ ತುಳು – ಕನ್ನಡಿಗರು ದೇಣಿಗೆ ನೀಡಿ ಈ ಸಂಸ್ಥೆಯನ್ನು ಬೆಳೆಸಿದರು. ನಿಷ್ಕಳಂಕ ಪ್ರೇಮ, ನಿಸ್ವಾರ್ಥ ಭಾವನೆ ಯಿಂದ ಬೆಳೆದು ನಿಂತ ಸಮಿತಿ ಉತ್ತರೋತ್ತರ ಅಭಿವೃದ್ಧಿ ಕಾಣಲಿ ಎಂದು ಹೇಳಿ 25 ವರ್ಷಗಳ ಕಾಲ ನಿರಂತ ರವಾಗಿ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.

ಶ್ರೀಕಾಂತ್‌ ಭಟ್‌ ಥಾಣೆ ಪೌರೋಹಿತ್ಯದಲ್ಲಿ ಬೆಳಗ್ಗೆ ಗಣಪತಿ ಹೋಮ, ನಾಗಾಭಿಷೇಕ, ಶ್ರೀ ಹನುಮಾನ್‌ ಪೂಜೆ, ಶ್ರೀ ಸತ್ಯನಾರಾಯಣ ಮಹಾಪೂಜೆ, ಅಪರಾಹ್ನ ಹರೀಶ್‌ ಶಾಂತಿ ಅವರಿಂದ ಕಲಶ ಪ್ರತಿಷ್ಠೆ ನಡೆಯಿತು. ಗಣಪತಿ ಹೋಮದಲ್ಲಿ ದಿನೇಶ್‌ ಕರ್ಕೇರ ಮತ್ತು ಪುಷ್ಪಾ ಕರ್ಕೇರ ದಂಪತಿ, ಶ್ರೀ ಸತ್ಯನಾರಾಯಣ ಪೂಜೆಯಲ್ಲಿ ನಿತಿನ್‌ ಪೂಜಾರಿ ಮತ್ತು ದೀಪಿಕಾ ಪೂಜಾರಿ ದಂಪತಿ, ಶ್ರೀ ಶನಿ ಮಹಾಪೂಜೆಯಲ್ಲಿ ಸ್ಥಾಪಕ ಅಧ್ಯಕ್ಷ ಜಯ ಎಂ. ಶೆಟ್ಟಿ ಮತ್ತು ಸರೋಜಿನಿ ಶೆಟ್ಟಿ ದಂಪತಿ ಪೂಜೆಯ
ವ್ರತ ಕೈಗೊಂಡರು.

ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮ ಸೇವಾ ಸಮಿತಿ ಪೋರ್ಟ್‌ ಮುಂಬಯಿ ಸದಸ್ಯರಿಂದ ಶ್ರೀ ಶನಿ ಗ್ರಂಥ ಪಾರಾಯಣವು ಯಕ್ಷಗಾನ ತಾಳಮದ್ದಳೆ ರೀತಿಯಲ್ಲಿ ನಡೆಯಿತು. ರಾತ್ರಿ ಭಜನೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಮತ್ತು ಸಾರ್ವ ಜನಿಕ ಅನ್ನಸಂತರ್ಪಣೆ ಜರಗಿತು. ಸಮಾರಂಭದಲ್ಲಿ ನಿರಂತರ 25 ವರ್ಷ ಸೇವೆಗೈದ ಸ್ಥಾಪಕಾಧ್ಯಕ್ಷ ಜಯ ಎಂ. ಶೆಟ್ಟಿ ದಂಪತಿಯನ್ನು ಶಾಲು ಹೊದೆಸಿ, ಮೈಸೂರು ಪೇಟ ತೊಡಿಸಿ, ಪುಷ್ಪಗುತ್ಛ, ಸ್ಮರಣಿಕೆ, ಸಮ್ಮಾನಪತ್ರ ವನ್ನಿತ್ತು ಕಾರ್ಯಕಾರಿ ಸಮಿತಿ ಸದಸ್ಯರು ಸಮ್ಮಾನಿಸಿದರು.

ದಾನಿಗಳು, ಸ್ಥಳೀಯ ಸಂಘ -ಸಂಸ್ಥೆಗಳ ಪ್ರತಿನಿಧಿಗಳನ್ನು ಸನ್ನಿಧಿಯ ಪ್ರಸಾದ ನೀಡಿ ಗೌರವಿಸಲಾಯಿತು. ಗೌರವಾಧ್ಯಕ್ಷ ಪಾಂಡು ಎಲ್‌. ಶೆಟ್ಟಿ, ಅಧ್ಯಕ್ಷ ಉಮೇಶ್‌ ಎಚ್‌. ಕರ್ಕೇರ, ಉಪಾಧ್ಯಕ್ಷ ಜಯ ಜಿ. ಅಮೀನ್‌, ಗೌರವ ಕೋಶಾಧಿಕಾರಿ ಉಮೇಶ್‌ ಎಂ. ಕರ್ಕೇರ, ಜತೆ ಕಾರ್ಯದರ್ಶಿ ಕೆ. ಪಿ. ಶ್ಯಾಮ್, ಜತೆ ಕೋಶಾಧಿಕಾರಿ ಶಂಕರ ಬಿಲ್ಲವ, ಪ್ರಧಾನ ಅರ್ಚಕ ಶಶಿ‌ ಕರ್ಕೇರ ಉಪಸ್ಥಿತರಿದ್ದರು.

ಕಾರ್ಯಕಾರಿ ಸಮಿತಿ ಸದಸ್ಯರಾದ ಸುಧಾಕರ ಎನ್‌. ಬಂಗೇರ, ದಿನೇಶ್‌ ಎ. ಭಂಡಾರಿ, ಲಕ್ಷ್ಮಣ್‌ ಜಿ. ಅಂಚನ್‌, ಕೆ. ಟಿ. ಬಂಗೇರ, ಬಿ. ವಿಟಲ್‌ ರೈ, ಸುಧಾಕರ ಸುವರ್ಣ, ಸಂಜೀವ ಪೂಜಾರಿ, ಸಮಿತಿ ಸದಸ್ಯರಾದ ಸದಾ ಎಂ. ಪೂಜಾರಿ, ಆನಂದ ಕುಂದರ್‌, ದೇವೆಂದ್ರ ಸುರತ್ಕಲ್‌ , ಸಂಜೀವ ಶೆಟ್ಟಿ, ಶೇಖರ ಮೈಂದನ್‌, ಹರೀಶ್‌ ಶೆಟ್ಟಿ, ದಿನೇಶ್‌ ಕರ್ಕೇರ, ಚಂದ್ರಶೇಖರ ಎಂ. ಕರ್ಕೇರ, ತೇಜ್‌ಪಾಲ್‌ ಕಿದಿಯೂರು ಮೊದಲಾದವರು ಪಾಲ್ಗೊಂಡಿದ್ದರು.

ಸ್ಥಳೀಯ ನಗರ ಸೇವಕರು, ರಾಜಕೀಯ ಮುಖಂಡರು, ವಿವಿಧ ಸಂಘ -ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಬಿಲ್ಲವರ ಅಸೋಸಿಯೇನ್‌ ಸೇವಾ ದಳದ ಸದಸ್ಯರು, ಮಹಿಳಾ ವಿಭಾಗ ದವರು ಸಹಕರಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಎನ್‌. ಬಂಗೇರ ನಿರೂಪಿಸಿ, ವಂದಿಸಿದರು.

ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.