ಹಣದ ಸುತ್ತ ಸುತ್ತುತ್ತಿದೆ ಶೈಕ್ಷಣಿಕ ‌ವ್ಯವಸ್ಥೆ-ನಿರಂಜನಾನಂದಶ್ರೀ


Team Udayavani, Feb 13, 2024, 5:44 PM IST

ಹಣದ ಸುತ್ತ ಸುತ್ತುತ್ತಿದೆ ಶೈಕ್ಷಣಿಕ ‌ವ್ಯವಸ್ಥೆ-ನಿರಂಜನಾನಂದಶ್ರೀ

ಉದಯವಾಣಿ ಸಮಾಚಾರ 
ಬ್ಯಾಡಗಿ: ಶೈಕ್ಷಣಿಕ ವ್ಯವಸ್ಥೆ ಹಣದ ಸುತ್ತಲೂ ಸುತ್ತುತ್ತಿದೆ. ಇಂತಹ ಶೈಕ್ಷಣಿಕ ವ್ಯವಸ್ಥೆಗಳಿಂದ ಸಮಾಜ ಮತ್ತು ದೇಶ ಏನನ್ನು ನಿರೀಕ್ಷಿಸಲು ಸಾಧ್ಯ. ಬದುಕುವುದಕ್ಕೂ ಒಂದು ರೀತಿ, ನೀತಿಯಿದೆ. ಅದು ಹುಟ್ಟಿದ ಮನೆಯಲ್ಲಿ ಸಿಗದಿದ್ದರೇ ಕನಿಷ್ಟ ಶಾಲೆಗಳಲ್ಲಾದರೂ ಸಿಗಲೇಬೇಕು. ಇಲ್ಲದಿದ್ದರೇ ಮುಂದೊಂದು  ದಿನ ಕಲಿತವರು ಅಬ್ಬೇಪಾರಿಗಳು, ಕಲಿಸಿದವರು ಆನಾ ಥಶ್ರಮದ ಸದಸ್ಯರಾಗಬೇಕಾಗುತ್ತದೆ ಎಂದು ಕನಕಗುರುಪೀಠದ ನಿರಂಜನಾನಂದ ಶ್ರೀಗಳು ಖೇದ ವ್ಯಕ್ತಪಡಿಸಿದರು.

ತಾಲೂಕಿನ ಕಾಗಿನೆಲೆಯಲ್ಲಿ ಕನಕ ಗುರುಪೀಠದ ಆವರಣದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳು ಉದ್ದಿಮೆಗಳಾಗುತ್ತಿವೆ. ವೇತನಕ್ಕೆ ತಕ್ಕಂತೆ ಪಾಠ  ಹೇಳದಿರುವ ಶಿಕ್ಷಕ, ಹಣಗಳಿಸುವುದಕ್ಕಾಗಿ ಶಿಕ್ಷಣ ಕೊಡಿಸುತ್ತಿರುವ ಪಾಲಕರ ಮನಸ್ಥಿತಿಯಿಂದ
ಶೈಕ್ಷಣಿಕ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಬಂಡವಾಳ ಹೂಡಿ ಸರ್ಟಿಫಿಕೇಟ್‌ ಪಡೆಯುವ ಪದವೀಧರ ಇನ್ಯಾವ ಅನ್ವೇಷಣೆ ಕುರಿತು ಚಿಂತಿಸಲು ಸಾಧ್ಯ? ಎಂದು ಪ್ರಶ್ನಿಸಿದರು.

ಶಿಕ್ಷಣದ ಉದ್ದೇಶ ಬದಲಾಗಬೇಕು:
ಭೂತಕಾಲದಲ್ಲಿನ ಸಂಗತಿಗಳು, ವರ್ತಮಾನದಲ್ಲಿ ಚಿಂತನೆಗೊಳಪಡಬೇಕು. ಅಂದಾಗ ಮಾತ್ರ ಭವಿಷ್ಯದ ಬದುಕಿಗೆ ಪರಿಹಾರ ಕಂಡುಹಿಡಿಯಲು ಸಾಧ್ಯ. ಇದನ್ನೇ ನಾವು ಸಹ ಶಿಕ್ಷಣವೆಂದು ಪ್ರತಿಪಾದಿಸುತ್ತಿದ್ದೇವೆ. ಆದರೆ ವಾಸ್ತವ ಬದುಕಿಗೆ ಮತ್ತು ವೈಜ್ಞಾನಿಕ ಚಿಂತನೆಗಳಿಗೆ ಪ್ರಸ್ತುತ ಶೈಕ್ಷಣಿಕ ವ್ಯವಸ್ಥೆಯಲ್ಲಿ ಅವಕಾಶ ನೀಡುತ್ತಿಲ್ಲ. ಶಿಕ್ಷಣದ ಉದ್ದೇಶ ಇಂದಿನಿಂದಲೇ ಬದಲಾವಣೆ ಆಗಬೇಕಾಗಿದೆ. ಇಲ್ಲದಿದ್ದರೇ ಮುಂದೆಯೂ ಸಾಧ್ಯವಿಲ್ಲ ಎಂದರು.

ಕನಕಗುರುಪೀಠದ ಕಿರಿಯ ಶ್ರೀಗಳಾದ ಅಮೋಘ ಸಿದ್ದೇಶ್ವರ ಶ್ರೀಗಳು ಮಾತನಾಡಿ, ಶಿಕ್ಷಣವನ್ನು ನಾವು ಸಹ ಗೌರವಿಸುತ್ತೇವೆ.
ಸಮಾಜದ ಪ್ರತಿಯೊಂದು ವರ್ಗದ ಮಕ್ಕಳಿಗೆ ಶಿಕ್ಷಣದಲ್ಲಿ ಸಮಾನ ಅವಕಾಶ ಸಿಗುವಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡದಿದ್ದರೂ ಪರವಾಗಿಲ್ಲ, ಆದರೆ ಭಾರತದಂತಹ ಸಾಂಸ್ಕೃತಿಕ ದೇಶದಲ್ಲಿ ಧರ್ಮ ಮತ್ತು ಶಿಕ್ಷಣ ಎರಡನ್ನೂ ಸಮನಾಗಿ ತೆಗೆದುಕೊಂಡು ಹೋಗುವ ಶೈಕ್ಷಣಿಕ ವ್ಯವಸ್ಥೆ ಅವಶ್ಯವಿದೆ. ಇದರಲ್ಲಿ ನಾವು ಎಡವುತ್ತಿರುವುದರಿಂದ ಪಾಶ್ವಾತ್ಯ ಸಂಸ್ಕೃತಿ ಸದ್ದಿಲ್ಲದೇ ನುಸುಳುತ್ತಿದ್ದು, ಕ್ರಮೇಣವಾಗಿ ಅಧಿಪತ್ಯ ಸಾಧಿಸುತ್ತಿದೆ ಎಂದರು.

ಉಪನ್ಯಾಸ ನೀಡಿದ ಡಾ| ಓಂಕಾರ್‌ ನಾಯ್ಕ ಮಾತನಾಡಿ, ವಿದ್ಯಾವಂತರು ದೇಶದ ಅಮೂಲ್ಯ ಆಸ್ತಿ. ಗುಣಮಟ್ಟದ ಶಿಕ್ಷಣ ಪಡೆದವರಿಂದ ದೇಶ ಮುನ್ನಡೆಸಲು ಸಹಾಯ ಮಾಡುತ್ತದೆ. ಸುಶಿಕ್ಷಿತರು ಉದ್ಯೋಗಗಳನ್ನು ತೆಗೆದುಕೊಂಡು ಜೀವನದಲ್ಲಿ ಯಶಸ್ವಿಯಾಗಬಹುದು. ಆದರೆ ಶೈಕ್ಷಣಿಕ ಅಸಮರ್ಥ ವಿದ್ಯಾರ್ಥಿಗಳಿಗೆ ಗೌರವಯುತವಾಗಿ ಬದುಕುವ, ಶೋಷಣೆಗೊಳಗಾಗದಂತೆ ರಕ್ಷಿಸಿಕೊಳ್ಳುವ ಅವಕಾಶವನ್ನಾದರೂ ಶಿಕ್ಷಣದಲ್ಲಿ ಕಲ್ಪಿಸಬೇಕಾಗಿದೆ ಎಂದರು. ವೇದಿಕೆಯಲ್ಲಿ ಎಸ್‌ಎಫ್‌ಎನ್‌ ಗಾಜೀಗೌಡ್ರ, ರಾಜೇಂದ್ರ ಹಾವೇರಣ್ಣವರ, ಮಾಲತೇಶ ಬಣಕಾರ, ಎಸ್‌.ಎನ್‌. ಮಾತನವರ, ಮಾರುತಿ ಹರಿಹರ, ಸದಾನಂದಗೌಡ ಪಾಟೀಲ, ಹಳದಪ್ಪ ಕಂಬಳಿ, ಪಿಎಸ್‌ಐ ಭಾರತಿ ಹಾಗೂ ಶಿಕ್ಷಕ ಸಿಬ್ಬಂದಿ ಉಪಸ್ಥಿತರಿದ್ದರು. ಪ್ರಾಚಾರ್ಯ ಬೀರಪ್ಪ ಸ್ವಾಗತಿಸಿದರು. ಮುಖ್ಯಶಿಕ್ಷಕ ರವಿ ಆನ್ವೇರಿ ವಂದಿಸಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

CM-Siddu

Revenge of BJP-JDS: ನನ್ನ ವಿರುದ್ಧದ ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ: ಸಿಎಂ

Malatesha Temple: ಸಿದ್ದರಾಮಯ್ಯ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ನಿರ್ಬಂಧ; ಭಕ್ತರ ಆಕ್ರೋಶ

Malatesha Temple: ಸಿಎಂ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ಭಕ್ತರ ನಿರ್ಬಂಧ; ಆಕ್ರೋಶ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ-ಶಾಸಕ ರುದ್ರಪ್ಪ ಲಮಾಣಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.