![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 13, 2024, 11:44 PM IST
ಬೆಂಗಳೂರು: ಪ್ರಾಥಮಿಕ ಶಾಲೆಯಿಂದ ಭಡ್ತಿ ಪಡೆದ ಶಿಕ್ಷಕರಿಗೆ ಆಗುತ್ತಿರುವ ವೇತನ ತಾರತಮ್ಯ ನಿವಾರಣೆಗೆ ವೇತನ ಏರಿಕೆ (ಹೆಚ್ಚಳ) ನಿಯಮಗಳು/ಆದೇಶಗಳಿಗೆ ಅಗತ್ಯ ತಿದ್ದುಪಡಿ ತರಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ವಿಧಾನಪರಿಷತ್ನಲ್ಲಿ ಮಂಗಳವಾರ ನಿಯಮ 330ರಡಿ ವಿಷಯ ಪ್ರಸ್ತಾವಿಸಿದ ಸದಸ್ಯರಾದ ಮರಿತಿಬ್ಬೇಗೌಡ, ಎಸ್.ಎಲ್.ಭೋಜೇಗೌಡ, ಎಸ್.ವಿ. ಸಂಕನೂರ, ಶಿಕ್ಷಕರಲ್ಲಿರುವ ಭಡ್ತಿ ತಾರತಮ್ಯ ಬಗೆಹರಿಸಬೇಕು. 6ನೇ ವೇತನ ಆಯೋಗದ ವರದಿ ಅನ್ವಯ ಭಡ್ತಿ ಪಡೆಯದೆ ಇರುವವರಿಗೆ 15-25 ವರ್ಷಗಳ ಕಾಲಮಿತಿ ಭಡ್ತಿ ನೀಡದಿರುವುದರ ಜತೆಗೆ 20-25 ವರ್ಷಗಳ ಸ್ವಯಂಚಾಲಿತ ವೇತನ ಭಡ್ತಿಗಳನ್ನು ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪ್ರಾಥಮಿಕ ಶಾಲೆಯಿಂದ ಪ್ರೌಢ ಶಾಲೆಗೆ ಮತ್ತು ಪ್ರೌಢ ಶಾಲೆಯಿಂದ ಪಪೂ ಕಾಲೇಜುಗಳಿಗೆ ಭಡ್ತಿ ಪಡೆದ ಶಿಕ್ಷಕರು, ಉಪನ್ಯಾಸಕರಿಗೆ ಇರುವ ವೇತನ ತಾರತಮ್ಯ ನನ್ನ ಗಮನಕ್ಕೂ ಬಂದಿದೆ. ಕಾಲಮಿತಿಯಲ್ಲಿ ಇದನ್ನು ಸರಿಪಡಿಸಲಾಗುವುದು. ಇದಕ್ಕಾಗಿ ವೇತನ ಏರಿಕೆ ನಿಯಮಗಳಿಗೆ ತಿದ್ದುಪಡಿ ತರುವ ಆವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು. ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.