Yenepoya Hospital; 9ರ ಬಾಲಕಿಯ 40 ಕ್ಯಾನ್ಸರ್ ಗಡ್ಡೆಗಳಿಗೆ ಶಸ್ತ್ರಚಿಕಿತ್ಸೆ
ದೇರಳಕಟ್ಟೆಯ ಯೇನಪೊಯ ಆಸ್ಪತ್ರೆಯ ಸಾಧನೆ
Team Udayavani, Feb 14, 2024, 7:00 AM IST
ಉಳ್ಳಾಲ: ಕ್ಯಾನ್ಸರ್ನಿಂದ ಬಳಲುತ್ತಿದ್ದ ಕೇರಳ ಕೊಚ್ಚಿ ಮೂಲದ ಬಾಲಕಿಯೊಬ್ಬಳ ಶ್ವಾಸಕೋಶದಲ್ಲಿದ್ದ 40ಕ್ಕೂ ಹೆಚ್ಚು ಕ್ಯಾನ್ಸರ್ ಗಡ್ಡೆಗಳನ್ನು 10 ಗಂಟೆಗಳ ಸುದೀರ್ಘ ಶಸ್ತ್ರಚಿಕಿತ್ಸೆಯ ಮೂಲಕ ದೇರಳಕಟ್ಟೆಯ ಯೇನಪೊಯ ವೈದ್ಯಕೀಯ ಕಾಲೇಜಿನ ಜುಲೇಖಾ ಯೇನಪೊಯ ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿಯ ವೈದ್ಯರ ತಂಡ ಯಶಸ್ವಿಯಾಗಿ ಹೊರತೆಗೆದಿದೆ.
ಭಾರತದಲ್ಲೇ ಮೊದಲ ಬಾರಿಗೆ ಕ್ಯಾನ್ಸರ್ನ ಈ ಅಪರೂಪದ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, 9 ದಿನಗಳಲ್ಲೇ ಮಗು ಚೇತರಿಕೆ ಕಂಡಿದೆ ಎಂದು ಶಸ್ತ್ರ ಚಿಕಿತ್ಸೆಯ ನೇತೃತ್ವ ವಹಿಸಿದ್ದ ತಜ್ಞ ವೈದ್ಯ ಡಾ| ಜಲಾಲುದ್ದೀನ್ ಅಕºರ್ ತಿಳಿಸಿದರು.
ಶಸ್ತ್ರಚಿಕಿತ್ಸೆಯ ಮಾಹಿತಿ ನೀಡಿದ ಅವರು, 9 ವರ್ಷದ ಹೆಣ್ಣುಮಗು ಕಣ್ಣು, ತೊಡೆಯ ಮೂಳೆ, ಕರುಳು ಮತ್ತು ಶ್ವಾಸಕೋಶ ಕ್ಯಾನ್ಸರ್ನಿಂದ ಬಳಲುತ್ತಿತ್ತು. ತನ್ನ 9ನೇ ತಿಂಗಳಿನಲ್ಲಿ ಮಧುರೈ ಅರವಿಂದ್ ಆಸ್ಪತ್ರೆ ಮತ್ತು ಹೈದರಾಬಾದ್ ದೃಷ್ಟಿ ಕೇಂದ್ರದಲ್ಲಿ ಕಣ್ಣಿನ ಅಬುìದಕ್ಕೆ ಚಿಕಿತ್ಸೆ ಪಡೆದಿದ್ದಳು. 2021ರಲ್ಲಿ ತೊಡೆ ಮೂಳೆಯ ಅಬುìದಕ್ಕೆ ಕೊಚ್ಚಿಯ ಲೇಕ್ ಶೋರ್ ಆಸ್ಪತ್ರೆ ಮತ್ತು ಎಸ್ವಿಟಿ ಆಸ್ಪತ್ರೆ ತಿರುವನಂತಪುರದಲ್ಲಿ ಚಿಕಿತ್ಸೆ ಪಡೆದಿದ್ದರು. 2022ರಲ್ಲಿ ಕೊಚ್ಚಿಯಲ್ಲಿ ಶ್ವಾಸಕೋಶ ಚಿಕಿತ್ಸೆ ಹಾಗೂ 2023ರಲ್ಲಿ ತಿರುವನಂತಪುರದ ಸರಕಾರಿ ಕಾಲೇಜಿನಲ್ಲಿ ಕರುಳಿನ ಕ್ಯಾನ್ಸರ್ಗೆ ಚಿಕಿತ್ಸೆ ಪಡೆದು, ಕೋಯಿಕ್ಕೋಡ್ನ ಮಿತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿದರು. ಈ ಸಮಯದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಉಲ್ಬಣಗೊಂಡಿದ್ದು, ದೇಶದ 250ಕ್ಕೂ ಹೆಚ್ಚು ಆಸ್ಪತ್ರೆಗಳನ್ನು ಒಳಗೊಂಡಿರುವ ರಾಷ್ಟ್ರೀಯ ಕ್ಯಾನ್ಸರ್ ಗ್ರಿಡ್ನಲ್ಲಿ ಮುಂದಿನ ನಿರ್ವಹಣೆಯ ಕುರಿತು ಚರ್ಚಿಸಿ ಬಳಿಕ ದೇರಳಕಟ್ಟೆಯ ಯೇನಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ರೋಗಿಯ ಕುಟುಂಬದವರು ಒಪ್ಪಿದ್ದು, ಅದರಂತೆ ಚಿಕಿತ್ಸೆ ನೀಡಿ ಯಶಸ್ವಿಯಾಗಿದ್ದೇವೆ ಎಂದರು.
ಅಪರೂಪದ ಯಶಸ್ವಿ ಶಸ್ತ್ರಚಿಕಿತ್ಸೆಯ ಮಾರ್ಗದರ್ಶನವನ್ನು ಯೇನಪೊಯ ಪರಿಗಣಿತ ವಿ.ವಿ.ಯ ಕುಲಪತಿ ಡಾ| ವಿಜಯಕುಮಾರ್ ಎಂ., ಮಾರ್ಗದರ್ಶನದಲ್ಲಿ ಡಾ| ಜಲಾಲುದ್ದೀನ್ ಅಕºರ್ ನೇತೃತ್ವದಲ್ಲಿ ಡಾ| ರೋಹನ್ ಶೆಟ್ಟಿ, ಡಾ| ಎಚ್.ಟಿ. ಅಮರ್ ರಾವ್, ಡಾ| ನೂರ್ ಮೊಹಮ್ಮದ್ ಅವರನ್ನೊಳಗೊಂಡ ಶಸ್ತ್ರಚಿಕಿತ್ಸಾ ತಂಡ ಹಾಗೂ ಅರಿವಳಿಕೆ ತಜ್ಞರಾದ ಡಾ| ತಿಪ್ಪೇಸ್ವಾಮಿ ನೇತೃತ್ವದಲ್ಲಿ ಡಾ| ಸಂದೇಶ್ (ಪೀಡಿಯಾಟ್ರಿಕ್ ವಿಭಾಗ) ಡಾ| ಆದರ್ಶ್ (ಪಲ್ಮನಲಜಿ ವಿಭಾಗ), ಡಾ| ವಿನೀತ್ (ಇಂಟೆನ್ಸಿವಿಸ್ಟ್) ಭಾಗವಹಿಸಿದ್ದರು.
ಯೇನಪೊಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಹಬೀಬ್ ರೆಹಮಾನ್ ಎ.ಎ. ಪತ್ರಿಕಾಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
Kinnigoli ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.