Bangalore: ಚಿನ್ನ, ಬೆಳ್ಳಿ ಗಿಫ್ಟ್ ನೀಡಿ ಹುಕ್ಕಾ ಉತ್ಪನ್ನ ಮಾರುತ್ತಿದ್ದ ಗ್ಯಾಂಗ್‌!


Team Udayavani, Feb 14, 2024, 12:30 PM IST

Bangalore: ಚಿನ್ನ, ಬೆಳ್ಳಿ ಗಿಫ್ಟ್ ನೀಡಿ ಹುಕ್ಕಾ ಉತ್ಪನ್ನ ಮಾರುತ್ತಿದ್ದ ಗ್ಯಾಂಗ್‌!

ಬೆಂಗಳೂರು: ಇತ್ತೀಚೆಗೆ ಹುಕ್ಕಾ ಉತ್ಪನ್ನಗಳ ಮಾರಾಟ, ಸಂಗ್ರಹ ಹಾಗೂ ಜಾಹೀರಾತಿಗೆ ರಾಜ್ಯ ಸರ್ಕಾರ ನಿಷೇಧ ಹೇರಿದ ಬೆನ್ನಲ್ಲೇ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ನಗರದಲ್ಲಿ ಅಕ್ರಮ ಹುಕ್ಕಾ ಉತ್ಪನ್ನಗಳ ಮಾರಾಟಗಾರರು ಹಾಗೂ ವಿತರಕರ ಮೇಲೆ ದಾಳಿ ನಡೆಸಿ 1.5 ಕೋಟಿ ರೂ. ಮೌಲ್ಯದ ತಂಬಾಕು/ನಿಕೋಟಿನ್‌ ಉತ್ಪನ್ನಗಳನ್ನು ಜಪ್ತಿ ಮಾಡಿದೆ. ಹಾಗೆಯೇ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಈ ಕುರಿತು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ಮೈಸೂರು ಮೂಲದ ಮುರಳೀಧರ್‌(59),  ಇ. ಆಂಥೋಣಿ(59),ಬೆಂಗಳೂರಿನ ಎಸ್‌.ಆರ್‌.ನಗರ ನಿವಾಸಿ ವಿಶ್ವನಾಥ್‌ ಪ್ರತಾಪ್‌ ಸಿಂಗ್‌ (26), ಭರತ್‌(29), ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕಂಡಿಬೇಡಳ ಮಧು (36), ಹರಿಕೃಷ್ಣ(35), ಚಿರಕೂರಿ ರಮೇಶ್‌(30), ದಿವಾಕರ್‌ ಚೌಧರಿ(30), ಮಹದೇವಪುರ ಮಧು (38) ಬಂಧಿತರು. ಆರೋಪಿಗಳಿಂದ 1.45 ಕೋಟಿ ರೂ. ಮೌಲ್ಯದ ತಂಬಾಕು/ನಿಕೋಟಿನ್‌ ಉತ್ಪನನಗಳು, 11 ಮೊಬೈಲ್‌ಗ‌ಳು, 1,10 ಲಕ್ಷ ರೂ. ನಗದು, ಒಂದು ಟಾಟಾ ಏಸ್‌ ಗೂಡ್ಸ್‌ ವಾಹನ, ಚಿನ್ನ ಮತ್ತು ಬೆಳ್ಳಿಯ ನಾಣ್ಯಗಳನ್ನು ವಶಕ್ಕೆ ಪಡೆಯಲಾಗಿದೆ. ಮೊದಲ ನಾಲ್ವರು ಆರೋಪಿಗಳ ವಿರುದ್ಧ ಚಾಮರಾಜಪೇಟೆ ಠಾಣೆ, ಇತರೆ ನಾಲ್ವರ ವಿರುದ್ಧ ರಾಮಮೂರ್ತಿನಗರ ಠಾಣೆ ಮತ್ತು ಒಬ್ಬನ ವಿರುದ್ಧ ಮಹದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಆಯುಕ್ತರು ಹೇಳಿದರು.

ಬೆಳ್ಳಿ, ಚಿನ್ನದ ನಾಣ್ಯ ಉಡುಗೊರೆ: ಆರೋಪಿ ಮುರಳೀಧರ್‌ ಅಥವಾ ಇತರೆ ಆರೋಪಿಗಳಿಂದ ಹತ್ತಾರು ಹುಕ್ಕಾ ಉತ್ಪನ್ನಗಳನ್ನು ಖರೀದಿಸಿದರೆ, ಉಡುಗೊರೆಯಾಗಿ ಚಿನ್ನ ಮತ್ತು ಬೆಳ್ಳಿಯ ನಾಣ್ಯ ಗಳನ್ನು ಉಡುಗೊರೆಯಾಗಿ ಕೊಡಲಾಗುತ್ತಿತ್ತು. ಜತೆಗೆ ಕೂಪನ್‌ ಕೂಡ ಕೊಟ್ಟು, ಅದನ್ನು ಸಾðಚ್‌ ಮಾಡಿದಾಗ ಅದರಲ್ಲಿರುವ ಗಿಫ್ಟ್ಗಳನ್ನು ವ್ಯಾಪಾರಸ್ಥರಿಗೆ ಕೊಡಲಾಗುತ್ತಿತ್ತು. ಈ ಮೂಲಕ ಹುಕ್ಕಾ ಉತ್ಪನ್ನಗಳ ಮಾರ್ಕೆಟಿಂಗ್‌ ಮಾಡುತ್ತಿದ್ದರು. ಪ್ರಕರಣದಲ್ಲಿ ಇತರೆ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದರು.

ದುಬೈ ಮೂಲದ ಉತ್ಪನ್ನ, ಮಾಸಿಕ  25 ಕೋಟಿ ರೂ. ವಹಿವಾಟು! :

ಆರೋಪಿಗಳ ಪೈಕಿ ಮೈಸೂರು ಮೂಲದ ಮುರಳೀಧರ್‌ ಚಾಮರಾಜಪೇಟೆಯಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ ಮಳಿಗೆ ಹೊಂದಿದ್ದು, ಬೆಂಗಳೂರಿಗೆ ಪ್ರಮುಖ ವಿತರಕನಾಗಿದ್ದಾನೆ. ಇತರೆ ಆರೋಪಿಗಳು ಉಪ ವಿತರಕರಾಗಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ನಿಷೇಧ ಇರುವ ಹುಕ್ಕಾ ಉತ್ಪನ್ನಗಳನ್ನು ಆರೋಪಿ ಮುರಳೀಧರ್‌, ದುಬೈನಿಂದ ತರಿಸುತ್ತಿದ್ದ. ಪ್ರಮುಖವಾಗಿ ಅಫ‌jಲ್‌ ಎಂಬ ಹೆಸರಿನ ಮೊಲಾಸಿನ್‌ ಮತ್ತು ತಂಬಾಕು ಉತ್ಪನ್ನ ಇರುವ ದಿಲ್‌ಬಾಗ್‌, ಜೆಡ್‌ ಎಲ್‌-01, ಆಕ್ಷನ್‌-7, ಬಾದ್‌ ಷಾ, ಮಹಾರಾಯಲ್‌ 717ಹಾಗೂ ಇತರೆ ಉತ್ಪನ್ನಗಳ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರಿಗೆ ಮಾರಾಟ ಮಾಡುತ್ತಿದ್ದ. ಈ ವ್ಯವಹಾರದಲ್ಲೇ ಪ್ರತಿ ತಿಂಗಳು 25 ಕೋಟಿ ರೂ. ವಹಿವಾಟು ನಡೆಸುತ್ತಿದ್ದ. ಈ ಮಾಹಿತಿ ಮೇರೆಗೆ ಫೆ.9ರಂದು ಆರೋಪಿಗಳ ಗೋಡೌನ್‌ಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.