Election: ಮಾರ್ಚ್ 16 ರಂದು ಪ್ರತಿಷ್ಠಿತ ಎಚ್ ಕೆಇ ಸಂಸ್ಥೆ ಚುನಾವಣೆ


Team Udayavani, Feb 14, 2024, 2:37 PM IST

Election: ಮಾರ್ಚ್ 16 ರಂದು ಪ್ರತಿಷ್ಠಿತ ಎಚ್ ಕೆಇ ಸಂಸ್ಥೆ ಚುನಾವಣೆ

ಕಲಬುರಗಿ: ಪ್ರತಿಷ್ಠಿತ ಹೈದ್ರಾಬಾದ್ ಕರ್ನಾಟಕ ಶಿಕ್ಷಣ (ಎಚ್ಕೆಇ)  ಸಂಸ್ಥೆ 2024- 2027 ನೇ ಸಾಲಿನ ಆಡಳಿತ ಮಂಡಳಿ ಚುನಾವಣೆ ಮುಂದಿನ ತಿಂಗಳು ಮಾರ್ಚ್ 16 ರಂದು ನಡೆಸಲು ನಿರ್ಧರಿಸಲಾಗಿದೆ.‌

ಸಂಸ್ಥೆಯ ಇಲ್ಲಿನ‌ ಪಿಡಿಎ ಇಂಜಿನಿಯರಿಂಗ್ ಕಾಲೇಜ್ ನ ಆಡಳಿತ ಮಂಡಳಿ ಕಚೇರಿಯಲ್ಲಿ ಸಂಸ್ಥೆ ಅಧ್ಯಕ್ಷ ಡಾ. ಭೀಮಾಶಂಕರ ಬಿಲಗುಂದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಮಂಡಳಿ ಮಾಸಿಕ ಸಭೆಯಲ್ಲಿ ಚುನಾವಣಾ ದಿನಾಂಕ ನಿಗದಿಗೊಳಿಸಲಾಗಿದೆ.‌

ಸಂಸ್ಥೆಯ ಉಪಾಧ್ಯಕ್ಷ ಡಾ. ಶರಣಬಸಪ್ಪ ಹರವಾಳ, ಜಂಟಿ ಕಾರ್ಯದರ್ಶಿ ಡಾ.‌ಜಗನ್ನಾಥ ಬಿಜಾಪುರ, ಜಂಟಿ ಕಾರ್ಯದರ್ಶಿ ಡಾ.‌ಮಹಾದೇವಪ್ಪ ರಾಂಪೂರೆ,  ಆಡಳಿತ ಮಂಡಳಿ ಸದಸ್ಯರಾದ ಡಾ.ಶರಣಬಸಪ್ಪ ಕಾಮರೆಡ್ಡಿ, ಅರುಣಕುಮಾರ ಪಾಟೀಲ್, ಡಾ.‌ನಾಗೇಂದ್ರ ಮಂಠಾಳೆ, ಬಸವರಾಜ ಖಂಡೇರಾವ್, ಡಾ.‌ಕೈಲಾಸ ಪಾಟೀಲ್, ಸೋಮನಾಥ ನಿಗ್ಗುಡಗಿ, ಸಾಯಿನಾಥ ಪಾಟೀಲ್, ಡಾ. ರಜನೀಶ ವಾಲಿ, ವಿನಯ ಎಸ್. ಪಾಟೀಲ್, ಅನೀಲಕುಮಾರ ಬಿ. ಪಟ್ಟಣ, ಎನ್.‌ ಗಿರಿಜಾ ಶಂಕರ, ಡಾ. ವೀರೇಂದ್ರ ಪಾಟೀಲ್ ಪಾಲ್ಗೊಂಡ ಸಭೆಯಲ್ಲಿ ಎರಡ್ಮೂರು ಚುನಾವಣಾ ದಿನಾಂಕಗಳನ್ನು ತಾಳೆ ಹಾಕಿ ಕೊನೆಗೆ ಮಾರ್ಚ 16 ಎಂಬುದಾಗಿ ಅಂತಿಮಗೊಳಿಸಲಾಗಿದೆ.

ಪ್ರಸ್ತುತ ಆಡಳಿತ ಮಂಡಳಿ ಉಪಾಧ್ಯಕ್ಷ ರಿಂದ ಹಿಡಿದು ಸರ್ವ ಪದಾಧಿಕಾರಿಗಳು ಹಾಗೂ ಆಡಳಿತ ಮಂಡಳಿ ಸದಸ್ಯರು ಪಾಲ್ಗೊಂಡ  ಈ ಸಭೆಯಲ್ಲಿ ಕಳೆದ ಮೂರು ವರ್ಷದಲ್ಲಿನ ಸಾಧನೆ ಮತ್ತು ಆರ್ಥಿಕತೆ ಕುರಿತಾಗಿ ವಿವರವಾಗಿ ಚರ್ಚಿಸಿ ಎಲ್ಲವೂ ಅಂತೀಮಗೊಂಡ ನಂತರ  ಮಾಚ್೯ 16 ರಂದು ಚುನಾವಣೆ ನಡೆಸುವ ಹಾಗೂ ಮರುದಿನ‌ ಮತ ಏಣಿಕೆ ನಡೆಸುವ ಕುರಿತಾಗಿ ಚರ್ಚಿಸಲಾಯಿತು.

ಮೂರು ವರ್ಷದ ಹಿಂದೆ ಅಂದರೆ 2021 ರಲ್ಲಿ ಫೆ. 27 ರಂದು ಚುನಾವಣೆ ನಡೆಸಲಾಗಿತ್ತು.‌ ಆದರೆ ಈ ಸಲ ಮಾರ್ಚ 16 ರಂದು ನಡೆಸಲು ನಿರ್ಧರಿಸಲಾಗಿದೆ.

ಚುನಾವಣೆ ದಿನಾಂಕ ಘೋಷಣೆ ಹಿನ್ನೆಲೆಯಲ್ಲಿ ಕಳೆದ ಹತ್ತು ದಿನಗಳಿಂದ ದಿನಾಲು ಒಂದಿಲ್ಲ ಒಂದು ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಈಗ ಚುನಾವಣೆ ಘೋಷಣೆಯಾಗಿದ್ದರಿಂದ ಎಲ್ಲವುದಕ್ಕೂ ಬ್ರೇಕ್ ಹಾಕಿದಂತಾಗಿದೆ.‌

ಸಂಸ್ಥೆಯ ಪ್ರಸ್ತುತ ಅಧ್ಯಕ್ಷರಾಗಿರುವ ಡಾ.ಭೀಮಾಶಂಕರ ಬಿಲಗುಂದಿ 2018 ಹಾಗೂ 2021 ರಲ್ಲಿ ಸತತ ಎರಡು ಅಧ್ಯಕ್ಷರಾಗಿದ್ದು, ಈಗ ಮೂರನೇ ಸಲ ಅಧ್ಯಕ್ಷ ಸ್ಥಾನಕ್ಕೆ  ಸ್ಪರ್ಧಿಸಲು ಅವಕಾಶ ಇರದ ಹಿನ್ನೆಲೆಯಲ್ಲಿ ಈಗ ಡಾ.ಭೀಮಾಶಂಕರ ಪುತ್ರ ಸಂತೋಷ ಬಿಲಗುಂದಿ ಪೆನಾಲ್ ರಚಿಸಿಕೊಂಡು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ.

ಇನ್ನುಳಿದಂತೆ ವಿಧಾನ ಪರಿಷತ್  ಸದಸ್ಯ ಶಶೀಲ್ ಜಿ. ನಮೋಶಿ ತಮ್ಮದೇಯಾದ ಪೆನಾಲ್ ರಚಿಸಿಕೊಂಡು ಈಗಾಗಲೇ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಖ್ಯಾತ ವೈದ್ಯರಾದ ಡಾ. ಶರಣಬಸಪ್ಪ ಕಾಮರೆಡ್ಡಿ ಸಹ ಪೆನಾಲ್ ರಚಿಸಿಕೊಂಡು ಅಧ್ಯಕ್ಷ ಸ್ಪರ್ಧಿಸಲು ಮುಂದಾಗಿ ಪ್ರತಿಷ್ಠೆ ಕಣಕ್ಕಿಟ್ಟಿದ್ದಾರೆ.

ಈ ಹಿಂದಿನ ಬಹುತೇಕ ಚುನಾವಣೆಗಳಲ್ಲಿ ಎರಡೇ ಪೆನಾಲ್ ಗಳು ಚುನಾವಣೆ ಇಳಿದಿದ್ದನ್ನು ನೋಡಿದ್ದೇವೆ. ಆದರೆ ಈವ ಮೂರು ಪೆನಾಲ್ ಗಳು ರಚನೆಯಾಗಿ ಚುನಾವಣೆ ರಂಗಕ್ಕೆ ಇಳಿದಿದ್ದರಿಂದ ಚುನಾವಣೆಗೆ ಏಲ್ಲಿಲ್ಲದ ರಂಗು ಬಂದಿದೆ.‌

ಸಾರ್ವತ್ರಿಕ ಚುನಾವಣೆಗೆ ಸೆಡ್ಡು: ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಎಚ್ಕೆಇ ಚುನಾವಣೆ ರಾಜಕೀಯ ಕ್ಷೇತ್ರದ ಸಾರ್ವತ್ರಿಕ ಚುನಾವಣೆ ಮೀರಿಸುವ ಮಟ್ಟಿಗೆ ನಡೆಯುವುದೇ ಇದರ ಹೈಲೆಟ್.  ಇದರ ಚುನಾವಣೆ ಯಲ್ಲಿ ಎಲ್ಲ ತಂತ್ರ- ಪ್ರತಿತಂತ್ರ ನಡೆಯುತ್ತಿರುತ್ತವೆ. ಪ್ರಸ್ತುತ ಚುನಾವಣೆ ಈ ಹಿಂದಿನ‌ ಎಲ್ಲ ದಾಖಲೆ ಮೀರಿಸುವ ಮಟ್ಟಿಗೆ ವಿದ್ಯಮಾನಗಳು ನಡೆಯುವ ಸಾಧ್ಯತೆ ಯನ್ನು ಮನಗಂಡೇ ಸಂಸ್ಥೆಯ ಹಿರಿಯ ಸದಸ್ಯರಾಗಿರುವ ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹಾಗು ಹೆಬ್ಬಾಳ ಅವರು ಯುವಕರು ಯಾವುದೇ ಕಾರಣಕ್ಕೂ ಮತದ ಮೌಲ್ಯ ಕಡಿಮೆ ಮಾಡಿಕೊಳ್ಳಬೇಡಿ ಎಂದು ವಿನಂತಿಸಿರುವುದು ತೀವ್ರ ಸಂಚಲನ ಮೂಡಿಸಿದೆ.  ಒಟ್ಟಾರೆ ಚುನಾವಣೆಗೆ ಈಗ ದಿನಾಂಕ ನಿಗದಿಯಾಗಿದ್ದರಿಂದ ಇನ್ಮುಂದೆ ಆಟಗಳು ಶುರುವಾಗಲಿವೆ.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

3-chincholi

Chincholi: ಯುವಕ‌ನ ಕೊಲೆ ‌; ಕಾರಣ ನಿಗೂಢ

8-chittapur

Chittapur: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.