Vijayapura: ಅಕ್ರಮ ಗೋವುಗಳ ಸಾಕಾಣಿಕೆ; 11 ಕರುಗಳ ಸಾವು, 110 ಗೋವುಗಳ ರಕ್ಷಣೆ

3 ವಾಹನಗಳಲ್ಲಿ 120ಕ್ಕೂ ಹೆಚ್ಚು ಗೋವುಗಳ ಅಕ್ರಮ ಸಾಗಾಟ ; ಮೃತ ಕರುಗಳ ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಕ್ರಿಯೆ

Team Udayavani, Feb 14, 2024, 2:32 PM IST

4-vijayapura

ವಿಜಯಪುರ: ಗೋವುಗಳ ಬಾಯಿಗೆ ಪ್ಲಾಸ್ಟರ್ ಸುತ್ತಿ ಮೂರು ಬುಲೆರೋ ಪಿಕಪ್ ಸರಕು ಸಾಗಾಟ ವಾಹನಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ 1 ಆಕಳು ಸೇರಿ 10 ಕರುಗಳು ಸಾವಿಗೀಡಾಗಿವೆ. ಗೋವುಗಳ ಆರ್ತನಾದ ಕೇಳಿ ರೈತರು ವಾಹನ ತಡೆದು ಗೋವುಗಳನ್ನು ರಕ್ಷಿಸಿರುವ ಘಟನೆ ಇಂಡಿ ತಾಲೂಕಿನಿಂದ ವರದಿಯಾಗಿದೆ.

ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇಬೇವನೂರು ಗ್ರಾಮದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದಿಂದ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣಕ್ಕೆ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿತ್ತು.

ಮಂಗಳವಾರ ಮಧ್ಯರಾತ್ರಿ ಹಿರೇಬೇವನೂರು ಗ್ರಾಮದ ಮಾರ್ಗವಾಗಿ ಮೂರು ಬುಲೆರೋ ಪಿಕಪ್ ಸರಕು ಸಾಗಟ ವಾಹನಗಳಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳಲ್ಲಿ ಬಹುತೇಕ ಕರುಗಳೇ ಇದ್ದು, ಎಲ್ಲ ಆಕಳು-ಕರುಗಳ ಬಾಯಿಗೆ ಬ್ಲಾಸ್ಟರ್ ಸುತ್ತಿ, ಕಾಲುಗಳನ್ನು ಕಟ್ಟಿ ಹಾಕಿ ಸಾಗಿಸಲಾಗುತ್ತಿತ್ತು.

ತಮ್ಮ ಗ್ರಾಮದ ಮಾರ್ಗವಾಗಿ ಮಧ್ಯರಾತ್ರಿ ಅಕ್ರಮವಾಗಿ ಗೋವುಗಳ ಸಾಗಾಟ ನಡೆಸಿರುವ ಕುರಿತು ಖಚಿತ ಮಾಹಿತಿ ಅರಿತ ಹಿರೇವನೂರು ಗ್ರಾಮದ ರೈತರು ಪಿಕಪ್ ವಾಹನಗಳು ಗ್ರಾಮಕ್ಕೆ ಬರುತ್ತಲೇ ಅಡ್ಡಗಟ್ಟಿ ತಡೆದಿದ್ದಾರೆ. ಆಗ ಎರಡು ವಾಹನಗಳ ಚಾಲಕರು ಪರಾರಿಯಾಗಿದ್ದು, ಓರ್ವ ಗ್ರಾಮಸ್ಥರಿಗೆ ಸೆರೆ ಸಿಕ್ಕಿದ್ದಾನೆ.

ಕೂಡಲೇ ವಾಹನಗಳನ್ನು ಪರಿಶೀಲನೆಗೆ ಮುಂದಾದ ಗ್ರಾಮಸ್ಥರಿಗೆ ಆಘಾತವಾಗಿದೆ. ಏಕೆಂದರೆ ಗೋವುಗಳು ಸಾಗಾಟದ ಸಂದಭದಲ್ಲಿ ಕೂಗದಂತೆ ಎಲ್ಲ ಗೋವುಗಳು ಹಾಗೂ ಕರುಗಳ ಬಾಯಿಗೆ ಪ್ಲಾಸ್ಟರ್ ಸುತ್ತಿದ್ದಾರೆ. ಸಣ್ಣ ವಾಹದನಲ್ಲಿ ಹೆಚ್ಚು ಆಕಳುಗಳ ಕಾಲಿಗೆ ಹಗ್ಗ ಕಟ್ಟಿ, ಆಹಾರ ಧಾನ್ಯಗಳ ಚೀಲಗಳಂತೆ ಒಂದರ ಮೇಲೆ ಒಂದರಂತೆ ಗೋವುಗಳನ್ನು ಹಾಕಿರುವುದನ್ನು ಕಂಡು ರೈತರು ದಂಗಾಗಿದ್ದಾರೆ.

ಈ ವಿಕೃತ ವರ್ತನೆಯಿಂದ ಉಸಿರಾಟದ ಸಮಸ್ಯೆಯಾಗಿ 1 ಆಕಳು ಹಾಗೂ 10 ಕರುಗಳು ವಾಹನದಲ್ಲೇ ಜೀವ ಕಳೆದುಕೊಂಡಿದ್ದನ್ನು ಕಂಡು ಕಂಡಿದ್ದಾರೆ. ಕೂಡಲೇ ಎಲ್ಲ ಗೋವುಗಳ ಬಾಯಿಗೆ ಸುತ್ತಿದ್ದ ಪ್ಲಾಸ್ಟರ್ ಹಾಗೂ ಕಾಲುಗಳಿಗೆ ಕಟ್ಟಿದ್ದ ಹಗ್ಗ ಬಿಚ್ಚಿ ಗೋವುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗೋವುಗಳ ರಕ್ಷಣೆ ಬಳಿಕ ಗ್ರಾಮಸ್ಥರು ಇಂಡಿ ಗ್ರಾಮೀಣ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಗ್ರಾಮಸ್ಥರಿಂದ ರಕ್ಷಿಸಲ್ಪಟ್ಟಿರುವ 110ಕ್ಕೂ ಹೆಚ್ಚು ಗೋವುಗಳನ್ನು ಪೊಲೀಸರು ವಿಜಯಪುರ ಗೋಶಾಲೆಗಳಿಗೆ ಸಾಗಿಸಿದ್ದಾರೆ. ಮೃತ 11 ಗೋವುಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಕ್ರಿಯೆ ನಡೆಸಿದ್ದಾರೆ.

ಘಟನೆಯ ಕುರಿತು ಗ್ರಾಮಸ್ಥರಿಗೆ ಸೆರೆ ಸಿಕ್ಕಿರುವ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, ವಿಚಾರಣೆ ನಡೆಸಿದ್ದಾರೆ.

ಇಷ್ಟೊಂದು ಪ್ರಮಾಣದ ಗೋವುಗಳನ್ನು ಅಕ್ರಮವಾಗಿ ಸಾಗಿಸಲು ಮುಂದಾಗಿರುವ ಕೃತ್ಯದ ಹಿಂದಿರುವ ಮೂಲ ವ್ಯಕ್ತಿಯಾರು, ಯಾರಿಗೆ ಈ ಗೋವುಗಳನ್ನು ತಲುಪಿಸಲಾಗುತ್ತಿತ್ತು. ಎಲ್ಲಿಂದ, ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬ ಪ್ರಶ್ನೆಗಳಿಗೆ ಪೊಲೀಸ್ ತನಿಖೆಯ ಬಳಿಕ ಉತ್ತರ ಸಿಗಲಿದೆ.

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.