ಕಾಲಿವುಡ್ ಶಿವಕಾರ್ತಿಕೇಯನ್ ʼSK23ʼ ಸಿನಿಮಾಕ್ಕೆ ನಾಯಕಿಯಾದ ಕನ್ನಡದ ರುಕ್ಮಿಣಿ ವಸಂತ್
Team Udayavani, Feb 15, 2024, 3:16 PM IST
ಚೆನ್ನೈ: ಕಾಲಿವುಡ್ ನಟ ಶಿವ ಕಾರ್ತಿಕೇಯನ್ ಅವರ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ. ಎಆರ್ ಮುರಗದಾಸ್ ನಿರ್ದೇಶನದ ಈ ಸಿನಿಮಾಕ್ಕೆ ತಾತ್ಕಾಲಿಕವಾಗಿ ʼʼಎಸ್ ಕೆ 23” ಎನ್ನುವ ಟೈಟಲ್ ಇಡಲಾಗಿದೆ.
ನಟ ಶಿವ ಕಾರ್ತಿಕೇಯನ್ ಅವರು ʼ ಅಯಾಲನ್ʼ ಸಿನಿಮಾ ಹಿಟ್ ಆದ ಖುಷಿಯಲ್ಲಿದ್ದಾರೆ. ಈ ನಡುವೆ ಅವರ ಮುಂದಿನ ಸಿನಿಮಾದ ಮುಹೂರ್ತ ನೆರವೇರಿದೆ. ಈ ಕಾರ್ಯಕ್ರಮದಲ್ಲಿ ಸಿನಿಮಾದ ನಿರ್ದೇಶಕರು, ಸಂಗೀತ ನಿರ್ದೇಶಕರು, ಪ್ರಧಾನ ಪಾತ್ರ ವರ್ಗದವರು ಉಪಸ್ಥಿತಿಯಲ್ಲಿದ್ದರು.
ಎಆರ್ ಮುರಗದಾಸ್ – ಶಿವ ಕಾರ್ತಿಕೇಯನ್ ಅವರ ಸಿನಿಮಾದಲ್ಲಿ ನಾಯಕಿ ಯಾರಾಗಲಿದ್ದಾರೆ ಎನ್ನುವ ಬಗ್ಗೆ ಕುತೂಹಲವಿತ್ತು. ʼಸೀತಾ ರಾಮಂʼ ಬೆಡಗಿ ಮೃಣಾಲ್ ಠಾಕೂರು ಅವರು ಶಿವ ಕಾರ್ತಿಕೇಯನ್ ಜೊತೆ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗಿತ್ತು. ಇದೀಗ ಮುಹೂರ್ತ ಕಾರ್ಯಕ್ರಮದಲ್ಲಿ ನಾಯಕಿ ಯಾರೆನ್ನುವುದನ್ನು ರಿವೀಲ್ ಮಾಡಲಾಗಿದೆ.
ಈಗಾಗಲೇ ಕನ್ನಡದಲ್ಲಿ ʼಸಪ್ತಸಾಗರದಾಚೆ ಎಲ್ಲೋ” (ಸೈಡ್ -1,2) ಹಾಗೂ ʼಬಾನದಾರಿಯಲ್ಲಿʼ ಸಿನಿಮಾದಲ್ಲಿ ನಟಿಸಿ ಗಮನ ಸೆಳೆದಿರುವ ರುಕ್ಮಿಣಿ ವಸಂತ್ ಅವರು ಕಾರ್ತಿಕೇಯನ್ ಸಿನಿಮಾದಲ್ಲಿ ನಾಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
“ವಿಶೇಷ ಪಯಣ ಇಂದಿನಿಂದ ಆರಂಭಗೊಳ್ಳುತ್ತಿದೆ” ಎಂದು ನಟ ಕಾರ್ತಿಕೇಯನ್ ಬರೆದುಕೊಂಡಿದ್ದಾರೆ.
ಈ ಹಿಂದೆ ಕಾರ್ತಿಕೇಯನ್ ಅವ ʼಡಾನ್ʼ ಸಿನಿಮಾಕ್ಕೆ ಸಂಗೀತ ನೀಡಿದ್ದ ಅನಿರುದ್ಧ್ ರವಿಚಂದರ್ ಈ ಸಿನಿಮಾಕ್ಕೆ ಮ್ಯೂಸಿಕ್ ನೀಡಲಿದ್ದಾರೆ.
ಮಾಸ್ ಕಥೆಯನ್ನು ಸಿನಿಮಾ ಒಳಗೊಂಡಿದೆ ಎನ್ನಲಾಗಿದೆ. ಪ್ರಮುಖ ಪಾತ್ರದಲ್ಲಿ ಮೋಹನ್ ಲಾಲ್ ಮತ್ತು ವಿದ್ಯುತ್ ಜಮ್ವಾಲ್ ಅವರು ಕೂಡ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಆದರೆ ಇದುವರೆಗೆ ಇದು ಅಧಿಕೃತವಾಗಿಲ್ಲ.
Very happy to have these amazing and talented people on board. Together, something special on your way🎉@Siva_Kartikeyan @rukminitweets@anirudhofficial @dhilipaction @SudeepElamon @sreekar_prasad #ArunVenjaramoodu@teamaimpr pic.twitter.com/WFYhi2DPAx
— A.R.Murugadoss (@ARMurugadoss) February 15, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್ ಪತ್ನಿ ರಾದ್ಧಾಂತ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನ
Kanguva Movie: ಸೂರ್ಯ ಪ್ಯಾನ್ ಇಂಡಿಯಾ ʼಕಂಗುವʼ ಹೊಸ ರಿಲೀಸ್ ಡೇಟ್ ಔಟ್
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.