Minister ರಾಮಲಿಂಗಾರೆಡ್ಡಿ ವಿರುದ್ಧ ನಿಂದನೆ; ಆರೋಪಿ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ


Team Udayavani, Feb 15, 2024, 4:17 PM IST

1-aaa

ಯಾದಗಿರಿ: ಸಾರಿಗೆ ಹಾಗೂ ಮುಜುರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರ ಕುರಿತು ಅವಹೇಳನ ಕಾರಿಯಾಗಿ ನಿಂದಿಸಿದ್ದ ವ್ಯಕ್ತಿ ವಿರುದ್ಧ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ರಾಜ್ಯ ರೆಡ್ಡಿ ಜನಸಂಘ ಯುವ ಬ್ರಿಗೇಡ್ ನ ರಾಜ್ಯಾಧ್ಯಕ್ಷ ಸಿದ್ದುಪ್ರಕಾಶರೆಡ್ಡಿ ಅವರ ನೇತೃತ್ವದಲ್ಲಿ ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಸಚಿವ ರಾಮಲಿಂಗಾರೆಡ್ಡಿ ಅವರ ವಿರುದ್ಧ ಮನುಗೌಡ ದೊಡ್ಡಬಳ್ಳಾಪುರ ಎಂಬ ವ್ಯಕ್ತಿಯು ಇತ್ತಿಚೆಗೆ ಅವಹೇಳನಕಾರಿಯಾಗಿ ನಿಂದನೆ ಮಾಡಿದ್ದು ಈಗಾಗಲೇ ಆರೋಪಿಗೆ ಪೊಲೀಸರು ಬಂಧಿಸಿದ್ದಾರೆ‌.ಕೂಡಲೇ ನಿಂದಿಸಿರುವ ಆರೋಪಿಗೆ ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಪ್ರತಿಭಟನೆ ನಿರತರು ಒತ್ತಾಯಿಸಿದರು.

ಈ ವೇಳೆ ಯುವ ಬ್ರಿಗೇಡ್ ರಾಜ್ಯಾಧ್ಯಕ್ಷ ಸಿದ್ದುಪ್ರಕಾಶರೆಡ್ಡಿ ಅವರು ಮಾತನಾಡಿ, ಸಚಿವ ರಾಮಲಿಂಗಾರೆಡ್ಡಿ ಅವರು ರಾಜ್ಯದ ಸರ್ವ ಜನಾಂಗದ ಎಳ್ಗೆ ಬಯಸುವ ಮುತ್ಸದ್ದಿ ರಾಜಕೀಯ ನಾಯಕರಾಗಿದ್ದಾರೆ.ಬಡವರು ,ನಿರ್ಗತರಿಗೆ ಸಹಾಯ ಮಾಡುತ್ತಾ ಅನೇಕ ಸೇವೆಗೈಯ್ಯುತ್ತಿದ್ದಾರೆ. ಶಾಂತ ಸ್ವಭಾವದ ವ್ಯಕ್ತಿಯಾಗಿದ್ದಾರೆ.ರಾಜಕೀಯದಲ್ಲಿ 40 ವರ್ಷಗಳ ಕಾಲ ಜನ ಸೇವೆ ಮಾಡುತ್ತಿದ್ದಾರೆ.ರಾಜ್ಯದ ಅಭಿವೃದ್ಧಿಗಾಗಿ ತಮ್ಮದೆ ಕೊಡುಗೆ ನೀಡುತ್ತಿದ್ದಾರೆ.ಸಾರಿಗೆ ಕ್ಷೇತ್ರದಲ್ಲಿ ಅನೇಕ ಬದಲಾವಣೆ ತಂದಿದ್ದಾರೆ. ಇಂತಹ ನಾಯಕರ ವಿರುದ್ದ ಅವಹೇಳನ ಕಾರಿಯಾಗಿ ಹೇಳಿಕೆ ನೀಡಿರುವ ಮನೆಗೌಡ ಅವರ ಮನಸ್ಥಿತಿ ಸರಿಯಲ್ಲ.ಇಂತಹ ಹೇಳಿಕೆ ನೀಡಿರುವ ವ್ಯಕ್ತಿಗೆ ಯಾರು ಪ್ರಚೋದನೆ ನೀಡಿದ್ದಾರೆಂದು ಪೊಲೀಸರು ತನೀಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದರು.

ನಂತರ ಕಾಂಗ್ರೆಸ್ ಮುಖಂಡ ಮಾಣೀಕರೆಡ್ಡಿ ಕುರಕುಂದಿ ಮಾತನಾಡಿ, ಸಚಿವ ರಾಮಲಿಂಗಾರೆಡ್ಡಿ ಅವರಿಗೆ ನಿಂದನೆ ಮಾಡಿರುವ ಕ್ರಮ ಸರಿಯಲ್ಲ.ಇಂತಹ ಹೇಳಿಕೆ ನೀಡಿರುವ ವ್ಯಕ್ತಿಗೆ ಪೊಲೀಸರು ಕಠಿಣ ಶಿಕ್ಷೆ ನೀಡಬೇಕು. ಸಾರ್ವಜನಿಕವಾಗಿ ಕ್ಷಮೆ ಕೋರಬೇಕೆಂದರು.ರಾಜ್ಯದಿಂದ ಗಡಿಪಾರು ಮಾಡುವಂತೆ ಒತ್ತಾಯಿಸಿದರು.ನಂತರ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಡಿವೈಎಸ್ಪಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸಿದ್ದುಗೌಡ ಕಾಮರೆಡ್ಡಿ,ಸಿದ್ದುರೆಡ್ಡಿ ತಂಗಡಗಿ,ಚಂದ್ರಶೇಖರ ಪಾಟೀಲ ಕಂದಳ್ಳಿ,ಬಾಬುಗೌಡ ಮಾಚನೂರು,ಮಂಜು ಹೂಗಾರ,ಹಣಮಂತರಾಯ ಮಾಲಿಪಾಟೀಲ ತೆಕರಾಳ,ವೆಂಕಟರೆಡ್ಡಿ ಅಬ್ಬೆತುಮಕೂರು,ಸಂಜೀವ್ ಕವಲಿ,ಬಸ್ಸು ನಾಟೇಕರ್ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಸಿಡಿಲು ಬಡಿದು ರೈತ ಸಾವು

Yadagiri: ಸಿಡಿಲು ಬಡಿದು ರೈತ ಸಾವು

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

Yadagiri: Lalitha Anapura assumed office as the new Chairperson of Municipal Council

Yadagiri: ನಗರಸಭೆ ನೂತನ ಅಧ್ಯಕ್ಷೆಯಾಗಿ ಅನಪೂರ ಅಧಿಕಾರ ಸ್ವೀಕಾರ

chalavadi

Mysuru Dasara ವೇದಿಕೆ ರಾಜಕೀಯಕ್ಕೆ ಸಲ್ಲ: ಛಲವಾದಿ ನಾರಾಯಣ ಸ್ವಾಮಿ ಕಿಡಿ

7-yadagiri

Yadgiri ನಗರಸಭೆ ಅಧ್ಯಕ್ಷರಾಗಿ ಕು.ಲಲಿತಾ ಆಯ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.