ಭರತ್‌ ಶೆಟ್ಟಿ ಮೇಲೆ ಎಫ್ಐಆರ್‌ ಬಗ್ಗೆ ತನಿಖೆ: ಗೃಹ ಸಚಿವ ಪರಮೇಶ್ವರ್‌


Team Udayavani, Feb 16, 2024, 12:28 AM IST

Parameshwar

ಬೆಂಗಳೂರು: ಮಂಗ ಳೂರು ಉತ್ತರದ ಶಾಸಕ ಭರತ್‌ ಶೆಟ್ಟಿ ಅವರು ಜೆರೋಸಾ ಶಾಲೆಯ ವಠಾರದಲ್ಲಿ ಇಲ್ಲದಿದ್ದರೂ ಅವರ ಮೇಲೆ ಎಫ್ಐಆರ್‌ ಹಾಕಿರುವುದರ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

ಆದರೆ ಇಷ್ಟಕ್ಕೇ ಸಮಾಧಾನಗೊಳ್ಳದ ಬಿಜೆಪಿ ಸದಸ್ಯರು, ಎಫ್ಐಆರ್‌ ದಾಖಲಿಸಿದ ಎಸ್‌ಐ ಅನ್ನು ತತ್‌ಕ್ಷಣವೇ ಅಮಾನತು ಮಾಡಬೇಕು ಮತ್ತು ಶಾಲೆಯ ವಿರುದ್ದ ಪೋಷಕರು ನೀಡಿರುವ ದೂರಿನ ಆಧಾರದಲ್ಲಿ ಎಫ್ಐಆರ್‌ ದಾಖಲಿಸಬೇಕು ಎಂದು ಆಗ್ರಹಿಸಿದರು. ಇದು ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ವಾಗ್ವಾದಕ್ಕೆ ಎಡೆ ಮಾಡಿಕೊಟ್ಟ ಕಾರಣ ಸದನವನ್ನು ಮುಂದೂಡಲಾಯಿತು.

ತಾನು ಸ್ಥಳದಲ್ಲಿಲ್ಲದಿದ್ದರೂ ಅನಿಲ್‌ ಲೋಬೋ ನೀಡಿದ ದೂರಿನ ಆಧಾರ ದಲ್ಲಿ ನನ್ನ ಮೇಲೆ ದೂರು ದಾಖಲಾಗಿದೆ ಎಂದು ಭರತ್‌ ಶೆಟ್ಟಿ ಅವರು ಶೂನ್ಯವೇಳೆಯಲ್ಲಿ ಪ್ರಸ್ತಾವಿಸಿದರು. ಇದಕ್ಕೆ ಸಂಬಂಧಿಸಿ ಹೇಳಿಕೆ ನೀಡಿದ ಗೃಹ ಸಚಿವರು, ಭರತ್‌ ಶೆಟ್ಟಿ ಶಾಲೆಯ ಬಳಿಗೆ ಹೋಗಿಲ್ಲ. ನಾನು ಇದರ ಬಗ್ಗೆ ಪರಿಶೀಲಿಸಿಕೊಂಡಿದ್ದೇನೆ. ಡಿಡಿಪಿಐ ಕಚೇರಿಗೆ ಹೋಗಿ ಹಿಂದೂ ಮಕ್ಕಳನ್ನು ಕ್ರಿಶ್ಚಿಯನ್‌ ಶಾಲೆಗೆ ಸೇರಿಸಬೇಡಿ ಅಂತ ಹೇಳಿಕೆ ಕೊಟ್ಟಿ¨ªಾರೆ. ಇದು ಪ್ರಚೋದನಕಾರಿ ಹೇಳಿಕೆ ಅಂತ ದೂರಿನಲ್ಲಿ ಸೇರಿಸಿದ್ದಾರೆ ಎಂದರು.

ಆದರೆ ಸುನಿಲ್‌ ಕುಮಾರ್‌ ಮತ್ತು ಆರ್‌. ಅಶೋಕ್‌ ಅವರು, ಪ್ರಕರಣಕ್ಕೆ ಸಂಬಂಧಿಸಿ ಎರಡು ದೂರುಗಳು ಸಲ್ಲಿಕೆಯಾಗಿದ್ದರೂ ಒಂದು ಮಾತ್ರ ಎಫ್‌ಐಆರ್‌ ಆಗಿದೆ. ಒಬ್ಬರಿಗೆ ಒಂದು ನ್ಯಾಯ, ಇನ್ನೊಬ್ಬರಿಗೆ ಇನ್ನೊಂದು ನ್ಯಾಯ ಮಾಡಲಾಗಿದೆ. ಸ್ಥಳದಲ್ಲಿಲ್ಲದ ಶಾಸಕರ ಹೆಸರನ್ನು ಎಫ್‌ಐಆರ್‌ನಲ್ಲಿ ಸೇರಿಸಿ ಕರ್ತವ್ಯಲೋಪ ಎಸಗಿದ ಪೊಲೀಸ್‌ ಅಧಿಕಾರಿಯನ್ನು ಅಮಾ ನತು ಮಾಡಬೇಕು ಎಂದರು.

ಬಸವರಾಜ ಬೊಮ್ಮಾಯಿ, ಶಾಲೆ ಯವರು ಶಿಕ್ಷಕಿಯನ್ನು ಅಮಾನತು ಮಾಡಿ ನ್ಯಾಯಬದ್ಧ ಕ್ರಮ ಕೈಗೊಂಡಿ ದ್ದಾರೆ. ಆದರೆ ಸರಕಾರವೇ ಕ್ಲೀನ್‌ಚಿಟ್‌ ಕೊಡುತ್ತಿದೆ ಎಂದು ಟೀಕಿಸಿದರು.

ಪ್ರಾಥಮಿಕ ತನಿಖೆ ವೇಳೆ ಶಿಕ್ಷಕಿಯ ತಪ್ಪಿಲ್ಲ ಎಂಬುದು ಗೊತ್ತಾಗಿದೆ ಅದನ್ನು ಸದನಕ್ಕೆ ತಿಳಿಸಿದ್ದೇನೆ. ಪ್ರಕರಣದ ಸತ್ಯಾಸತ್ಯತೆ ಗೊತ್ತಾಗಬೇಕು. ಒಂದು ವೇಳೆ ಅಧಿಕಾರಿ ತಪ್ಪು ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ತಿಳಿಸಿದರು. ಜತೆಗೆ, ಶಾಸಕ ಭರತ್‌ ಶೆಟ್ಟಿ ಸಾಮಾ ಜಿಕ ಜಾಲತಾಣದಲ್ಲಿ ಕ್ರಿಶ್ಚಿಯನ್‌ ಶಾಲೆಗಳಿಗೆ ಮಕ್ಕಳನ್ನು ಸೇರಿಸಬಾರದು ಎಂಬಂತೆ ಪೋಸ್ಟ್‌ ಮಾಡಿದ್ದನ್ನು ಓದಿ, ಹೀಗಿದ್ದಾಗ್ಯೂ ಎಫ್‌ಐಆರ್‌ ಮಾಡುವುದು ತಪ್ಪೇ ಎಂದು ಪ್ರಶ್ನಿಸಿದರು. ಅದರಲ್ಲಿ ಏನು ತಪ್ಪಿದೆ ಎಂದು ಭರತ್‌ ಶೆಟ್ಟಿ ಪ್ರಶ್ನಿಸಿದರು.

ಯಾಕೆ ಕೂಗಾಡುತ್ತೀರಿ, ಕೋಪ ನಿಮಗೆ ಮಾತ್ರ ಬರುತ್ತಾ? ಯಾರನ್ನು ಹೆದರಿಸುತ್ತೀರಿ, ಇದು ವಿಧಾನಸಭೆ; ಹೌದು, ಇದೇ ಸತ್ಯ. ನಾನು ನನ್ನ ಹೇಳಿಕೆಗೆ ಬದ್ಧನಿದ್ದೇನೆ ಎಂದು ಗೃಹಸಚಿವರು ಏರುಧ್ವನಿಯಲ್ಲಿ ಹೇಳಿದರು. ಆಡಳಿತ ಪಕ್ಷದ ಸದಸ್ಯರು ಗೃಹಸಚಿವರ ಬೆಂಬಲಕ್ಕೆ ನಿಂತರು. ಕೆಲಕಾಲ ಸದನದಲ್ಲಿ ಏನಾಗುತ್ತಿದೆ ಎಂಬುದೇ ಗೊತ್ತಾಗಲಿಲ್ಲ. ಕೊನೆಗೆ ವಿಧಾನಸಭಾಧ್ಯಕ್ಷರು ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.