![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 16, 2024, 4:58 PM IST
ಮಿಲನಾ ನಾಗರಾಜ್ ಹಾಗೂ ಪೃಥ್ವಿ ಅಂಬರ್ ಮುಖ್ಯಭೂಮಿಕೆಯಲ್ಲಿರುವ “ಫಾರ್ ರಿಜಿಸ್ಟ್ರೇಶನ್’ ಚಿತ್ರ ಫೆ.23ರಂದು ತೆರೆಕಾಣುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಿರ್ದೇಶಕರಾದ ಶಶಾಂಕ್ ಹಾಗೂ ಚೇತನ್ ಕುಮಾರ್ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಟ್ರೇಲರ್ ಬಿಡುಗಡೆ ಬಳಿಕ ಮಾತನಾಡಿದ ನಟ ಪೃಥ್ವಿ ಅಂಬರ್,”ಫಾರ್ ರಿಜಿಸ್ಟ್ರೇಶನ್ ಎರಡು ಸಹಪಾಠಿಗಳ ಪ್ರಯತ್ನ ಇದು. ಇಬ್ಬರು ನವೀನ್ ಅವರ ಕನಸಿನ ಕೂಸು ಇದು. ತುಂಬಾ ಹಾರ್ಡ್ ವರ್ಕ್ ಮಾಡಿದ್ದಾರೆ. ಮನಸ್ಸಿನಲ್ಲಿ ಸಂಬಂಧಗಳು ರಿಜಿಸ್ಟ್ರೇಶನ್ ಆಗಬೇಕು. ಅನ್ನೋದು ನಮ್ಮ ಆಸೆ. ಈ ಸಿನಿಮಾ ಎಲ್ಲರಿಗೂ ಹತ್ತಿರವಾಗುತ್ತದೆ. ಎಲ್ಲಾ ಪಾತ್ರ ವರ್ಗವದವರು ಅದ್ಭುತವಾಗಿ ನಟಿಸಿದ್ದಾರೆ’ ಎಂದರು.
“ನಿರ್ದೇಶಕ ನವೀನ್ ತುಂಬಾ ತಯಾರಿಯಿಂದ ಬಂದು ಕಥೆ ಹೇಳಿದ್ದರು. ಫಸ್ಟ್ ಹಾಫ್ ಕಥೆ ಹೇಳಿ ನಿಲ್ಲಿಸಿಬಿಟ್ಟರು. ಕಂಟಿನ್ಯೂ ಮಾಡಿ ಎಂದಾಗ ನೀವು ಸಿನಿಮಾ ಒಪ್ಪಿಕೊಂಡರೇ ಕಥೆ ಹೇಳುವುದು ಎಂದರು. ಸರಿ, ಯೋಚನೆ ಮಾಡಿ ಹೇಳುತ್ತೇನೆ ಎಂದೆ. ಆಮೇಲೆ ಸಿನಿಮಾ ಮಾಡುತ್ತೇನೆ ಬಂದು ಕಥೆ ಹೇಳಿ ಅಂದಾಗ ಕಥೆ ಹೇಳಿದರು. ಒಂದು ರೀತಿ ಬ್ಲಾಕ್ ಮೇಲೆ ಮಾಡಿ ಹೋಗಿದ್ದರು. ನಿರ್ಮಾಪಕರಾದ ನವೀನ್ ಕೂಡಾ ಸಿನಿಮಾ ಪ್ರೇಮಿ. ಸಿನಿಮಾದ ಪ್ರತಿಯೊಂದು ವಿಭಾಗದಲ್ಲೂ ತೊಡಗಿಸಿಕೊಂಡಿದ್ದಾರೆ’ ಎನ್ನುವುದು ನಾಯಕಿ ಮಿಲನಾ ಅವರ ಮಾತು.
ನಿರ್ಮಾಪಕರಾದ ನವೀನ್ ರಾವ್ ಮಾತನಾಡಿ, “ಬಹಳ ಪ್ರೀತಿಯಿಂದ ಮಾಡಿರುವ ಸಿನಿಮಾವಿದು. ಎರಡು ತಿಂಗಳು ಚರ್ಚೆ ಬಳಿಕ ಕಥೆ ರೆಡಿ ಮಾಡಿಕೊಂಡೆವು. ಕಥೆ ಡಿಮ್ಯಾಂಡ್ ಮಾಡಿದಾಗ ನಾವು ಮೊದಲ ಭೇಟಿಯಾಗಿದ್ದು ಮಿಲನಾ ಅವರನ್ನು. ಅವರಿಗೆ ಕಥೆ ಹೇಳಿದೆವು. ಆ ನಂತರ ಪೃಥ್ವಿ ಅವರನ್ನು ಭೇಟಿ ಮಾಡಿ ಕಥೆ ಹೇಳಿದೆವು. ಎಲ್ಲಾ ಕಲಾವಿದರು ಸಹಕಾರದಿಂದ ಈ ಚಿತ್ರವಾಗಿದೆ. ಎಲ್ಲರೂ ಶ್ರಮಪಟ್ಟು ಸಿನಿಮಾ ಮಾಡಿದ್ದೇವೆ. ಇದೇ 23ಕ್ಕೆ ಸಿನಿಮಾ ರಿಲೀಸ್ ಮಾಡುತ್ತಿದ್ದೇವೆ’ ಎಂದರು.
ನಿರ್ದೇಶಕ ನವೀನ್ ಕೂಡಾ ಸಿನಿಮಾ ಮೂಡಿಬಂದ ರೀತಿ, ಕಲಾವಿದರ ಸಹಕಾರದ ಬಗ್ಗೆ ಮಾತನಾಡಿದರು. ಚಿತ್ರದಲ್ಲಿ ರವಿಶಂಕರ್, ತಬಲಾ ನಾಣಿ, ಸುಧಾ ಬೆಳವಾಡಿ, ಬಾಬು ಹಿರಣಯ್ಯ, ಸ್ವಾತಿ, ರಮೇಶ್ ಭಟ್, ಉಮೇಶ್ ಸೇರಿದಂತೆ ಹಲವರು ನಟಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.