Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

ಸ್ಟಾರ್ಟ್‌ ಅಪ್‌ ವಲಯದ ಪ್ರಗತಿಗೆ ಮೂರು ಹೊಸ ಯೋಜನೆ ; ವಿದ್ಯಾರ್ಥಿಗಳು, ಉದ್ಯಮಿಗಳ ಸ್ಟಾರ್ಟ್‌ ಅಪ್‌ಗ್ಳಿಗೆ ಬೆಂಬಲ

Team Udayavani, Feb 16, 2024, 11:33 PM IST

Start-up Sector; ನವ‌ ಕರ್ನಾಟಕ ನಿರ್ಮಾಣಕ್ಕೆ ಸಿದ್ದು ಸ್ಟಾರ್ಟ್‌ ಅಪ್‌

ರಾಜ್ಯ ಈಗಾಗಲೇ ಸ್ಟಾರ್ಟ್‌ ಅಪ್‌ ವಲಯದಲ್ಲಿ ದೇಶದಲ್ಲೇ ಮುಂಚೂಣಿ ರಾಜ್ಯವಾಗಿದ್ದು, ಬೆಂಗಳೂರಂತೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಟಾರ್ಟ್‌ ಅಪ್‌ ರಾಜಧಾನಿ ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ಆದರೆ ಇದನ್ನು ಕಾಪಿಟ್ಟುಕೊಳ್ಳುವುದು ಈಗ ರಾಜ್ಯ ಸರ್ಕಾರದ ಅತಿ ದೊಡ್ಡ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ಹೊಸ ಕಾರ್ಯಕ್ರಮಗಳನ್ನು ಘೋಷಿಸಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ನೀತಿ ನಿರೂಪಣೆ, ಉತ್ಕೃಷ್ಟತಾ ಕೇಂದ್ರ ಮತ್ತು ನವೀನ ಪ್ರಯತ್ನಗಳನ್ನು ಹುರಿದುಂಬಿಸುವ ಕಾರ್ಯಕ್ರಮ ಗಳಿಗೆ ಬಜೆಟ್‌ನಲ್ಲಿ ಮನ್ನಣೆ ನೀಡಲಾಗಿದೆ. ನೀತಿ ಗಳನ್ನು ಜಾರಿಗೊಳಿಸುವ ಮೂಲಕ ಬಂಡವಾಳ ಆಕರ್ಷಿಸುವ ಇಂಗಿತ ಬಜೆಟ್‌ನಲ್ಲಿ ವ್ಯಕ್ತವಾಗಿದೆ.

ವಿದ್ಯಾರ್ಥಿಗಳು ಮತ್ತು ಉದ್ಯಮಿಗಳ ಸ್ಟಾರ್ಟ್‌ ಅಪ್‌ಗಳಿಗೆ ಉತ್ತೇಜನ ನೀಡಲು ರಾಜೀವ್‌ ಗಾಂಧಿ ವಾಣಿಜ್ಯೋದ್ಯಮ ಕಾರ್ಯಕ್ರಮಗಳು, ಮಹಿಳಾ ಉದ್ಯಮಿಗಳನ್ನು ಬೆಂಬಲಿಸಲು ಮಹಿಳಾ ಉತ್ಕೃಷ್ಟತೆ ಮತ್ತು ಉದ್ಯಮಶೀಲತೆಯ ಬೆಂಬಲ ಕಾರ್ಯಕ್ರಮ, ಕೃಷಿ ನಾವೀನ್ಯ ನವೋದ್ಯಮ ಸ್ಥಾಪನೆಗೆ ಸಿ-ಕ್ಯಾಂಪ್‌ನ ಅಗ್ರಿ ಇನ್ನೋವೇಶನ್‌ ಪಾರ್ಕ್‌ಗೆ 5 ಎಕರೆ ಭೂಮಿಯನ್ನು ಮೀಸಲಿಡುವುದಾಗಿ ಪ್ರಕಟಿಸಲಾಗಿದೆ.

ಉದಯೋನ್ಮುಖ ತಂತ್ರಜ್ಞಾನಗಳಿಗೆ ಉತ್ತೇಜನ ನೀಡಲು ಫಿನ್‌ಟೆಕ್‌, ಸ್ಪೇಸ್‌ಟೆಕ್‌ ಮತ್ತು ಆಟೋಮೋಟಿವ್‌ ಟೆಕ್‌ನಲ್ಲಿ ಉತ್ಕೃಷ್ಟತಾ ಕೇಂದ್ರವನ್ನು ಮುಂದಿನ ಐದು ವರ್ಷದಲ್ಲಿ ಉದ್ಯಮಿ ಮತ್ತು ಶೈಕ್ಷಣಿಕ ಸಂಸ್ಥೆಗಳ ಸಹಯೋಗದಲ್ಲಿ ಹತ್ತು ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸುವುದನ್ನು ಘೋಷಿಸಲಾಗಿದೆ. ಉದ ಯೋನ್ಮುಖ ತಂತ್ರಜ್ಞಾನಗಳಲ್ಲಿ ಯುವಕರ ಕೌಶಲ್ಯಾಭಿವೃ ದ್ಧಿಗಾಗಿ ಕಲಬುರಗಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತು ತುಮಕೂರಿನಲ್ಲಿ ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ ಮತ್ತು ಕಿಯೋನಿಕ್ಸ್‌ ಸಹ ಯೋಗದೊಂದಿಗೆ ಒಟ್ಟಾರೆ 12 ಕೋಟಿ ರೂ. ವೆಚ್ಚದಲ್ಲಿ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಕೌಶಲ್ಯ ಮತ್ತು ನಾವೀನ್ಯತಾ ಕೇಂದ್ರಗಳನ್ನು ಸ್ಥಾಪಿಸಲಿದೆ.

ಆರೋಗ್ಯ, ಕೃಷಿ ಮತ್ತು ಜೀವ ವಿಜ್ಞಾನದ ಇತರ ಕ್ಷೇತ್ರಗಳಲ್ಲಿ ಅತ್ಯಾಧುನಿಕ ಸಂಶೋಧನೆಗಾಗಿ ಜಿನೋಮ್‌ ಎಡಿಟಿಂಗ್‌, ಜೀನ್‌ ಥೆರಪಿ ಕೇಂದ್ರ ಸ್ಥಾಪಿಸುವುದಾಗಿ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ.

ವಿಜ್ಞಾನ ಕೇಂದ್ರ ಮತ್ತು ತಾರಾಲಯಗಳಿಗೆ 170 ಕೋಟಿ ರೂ: ಚಾಮರಾಜನಗರ, ಹಾಸನ, ಮಡಿಕೇರಿ, ಶಿರಸಿ, ಬೆಳಗಾವಿ, ವಿಜಯಪುರ, ಬಾಗ ಲಕೋಟೆ, ಗದಗ, ಧಾರವಾಡದಲ್ಲಿ ವಿಜ್ಞಾನ ಕೇಂದ್ರ /ತಾರಾಲಯಗಳನ್ನು ಕಾರ್ಯಾರಂಭ ಗೊಳಿಸಲಾಗುವುದು. ಉಡುಪಿ, ಹಾವೇರಿ, ಚಿತ್ತಾಪುರ, ಆದಿಚುಂಚನಗಿರಿ, ತುಮಕೂರಿನಲ್ಲಿ ವಿಜ್ಞಾನ ಕೇಂದ್ರಗಳ ಕಾಮಗಾರಿ ಪೂರ್ಣಗೊಳಿಸಲಾಗುವುದು. ಶಿವ ಮೊಗ್ಗ, ರಾಯಚೂರು, ಚಿಕ್ಕಮಗಳೂರು, ಯಾದಗಿರಿ ಮತ್ತು ಮೈಸೂರಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ ತಾರಾಲಯಗಳನ್ನು ಹೊಸದಾಗಿ ಸ್ಥಾಪಿಸಲಾಗುವುದು. ಇದಕ್ಕೆ ಪ್ರಸಕ್ತ ಸಾಲಿನಲ್ಲಿ 170 ಕೋಟಿ ರೂ. ಮೀಸಲಿಡಲಾಗಿದೆ.

ವಿದ್ಯಾರ್ಥಿಗಳಿಗೆ ರಾತ್ರಿ ಆಕಾಶ ವೀಕ್ಷಣೆ ಮತ್ತು ಆಕಾಶ ಕಾಯಗಳ ಕುರಿತು ಆಸಕ್ತಿ ಮೂಡಿಸಲು ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 833 ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗ ಳಿಗೆ ಒಟ್ಟಾರೆ 3 ಕೋಟಿ ರೂ. ವೆಚ್ಚದಲ್ಲಿ ತಲಾ ಒಂದು ದೂರದರ್ಶಕ ಒದಗಿಸಲಾಗುವುದು.

ವಿಜ್ಞಾನ ನಗರಿಯ ಸ್ಥಾಪನೆ
ಬೆಂಗಳೂರಿನಲ್ಲಿ ಕೇಂದ್ರದ ಸಹಭಾಗಿ ತ್ವ ದಲ್ಲಿ ಒಟ್ಟು 233 ಕೋಟಿ ರೂ. ವೆಚ್ಚದಲ್ಲಿ ವಿಜ್ಞಾನ ನಗರಿಯ ಸ್ಥಾಪನೆ.

ಬೆಂಗಳೂರು ಇಂಡಿಯಾ ನ್ಯಾನೋ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜನೆ.

12 ಕೋಟಿ ರೂ. ವೆಚ್ಚದಲ್ಲಿ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಕೌಶಲ್ಯ, ನಾವೀನ್ಯತಾ ಕೇಂದ್ರಗಳ ಸ್ಥಾಪನೆ

ಗೇಮಿಂಗ್‌ ಸಂಬಂಧಿಸಿದ ಉತðಷ್ಟತಾ ಕೇಂದ್ರ ಸ್ಥಾಪನೆ

ಹೂಡಿಕೆ ಆಕರ್ಷಣೆಗೆ ಒತ್ತು
ಬೆಂಗಳೂರು ನಗರದಲ್ಲಿ 400ಕ್ಕೂ ಹೆಚ್ಚು ಜಾಗತಿಕ ಸಾಮರ್ಥ್ಯ ಕೇಂದ್ರಗಳಿರುವ ಹಿನ್ನೆಲೆಯಲ್ಲಿ ಹೊಸ ಜಾಗತಿಕ ಸಾಮರ್ಥ್ಯ ಕೇಂದ್ರಗಳ ನೀತಿಯನ್ನು ಜಾರಿಗೊಳಿಸಿ ಹೂಡಿಕೆ ಆಕರ್ಷಿಸಲು ಒತ್ತು ನೀಡಲಾಗುವುದು. ಅನಿ ಮೇಷನ್‌, ವಿಷುವಲ್‌ ಎಫೆಕ್ಟ್$Õ, ಗ್ರಾಫಿಕ್ಸ್‌, ಕಾಮಿಕ್ಸ್‌ ಕ್ಷೇತ್ರದ ಉದ್ದಿಮೆಗಳನ್ನು ಸೆಳೆ ಯಲು ಎವಿಜಿಸಿ-ಎಕ್ಸ್‌ಆರ್‌ 3.0 ನೀತಿ ಯನ್ನು ಪ್ರಕಟಿಸಿರುವ ಸರ್ಕಾರ 2024-29ರ ಅವಧಿಯಲ್ಲಿ ಈ ನೀತಿಯನ್ನು 150 ಕೋಟಿ ರೂ. ಬದ್ಧತಾ ವೆಚ್ಚದೊಂದಿಗೆ ಜಾರಿಗೆ ತರುವ ಪ್ರಸ್ತಾಪ ಮಾಡಿದೆ. ಗೇಮಿಂಗ್‌ ಸಂಬಂಧಿಸಿದ ಉತðಷ್ಟತಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.