Karnataka Budget 2024-25; ಉಡುಪಿ: ಈಡೇರದ ನಿರೀಕ್ಷೆ


Team Udayavani, Feb 16, 2024, 11:44 PM IST

ಉಡುಪಿ: ಜಿಲ್ಲೆಯ ಕೃಷಿ, ಪ್ರವಾಸೋದ್ಯಮ, ಮೀನುಗಾರಿಕೆ ಹಾಗೂ ತೋಟಗಾರಿಕೆ ಸಹಿತ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್‌/ ಅನುದಾನ ನಿರೀಕ್ಷಿಸಲಾಗಿತ್ತು. ಸ್ವರ್ಣಾ ಏತ ನೀರಾವರಿ ಹೊರತುಪಡಿಸಿ ಹೊಸ ಯೋಜನೆ ಘೋಷಣೆಯಾಗಿಲ್ಲ.

ಸ್ವರ್ಣಾ ನದಿಗೆ ಉಪ್ಪು ನೀರು ಬರುವುದನ್ನು ತಡೆಯಲು ಡ್ಯಾಮ್‌ ಕಮ್‌ ಬ್ಯಾರೇಜ್‌ ನಿರ್ಮಾಣ ಮಾಡುವ ಮೂಲಕ ಸಂಗ್ರಹವಾದ ಸಿಹಿ ನೀರನ್ನು ನಾಲೆಗಳ ಮೂಲಕ ಕೃಷಿ ಚಟುವಟಿಕೆಗೆ ಬಳಸಲು ಪೂರಕವಾಗುವ ಸ್ವರ್ಣ ಏತ ಯೋಜನೆ ಘೋಷಿಸಲಾಗಿದೆ. ಸಿದ್ದಾಪುರ ಏತ ನೀರಾವರಿ ಯೋಜನೆಯ ಪುನಶ್ಚೇತನ ಪ್ರಸ್ತಾವಿಸಲಾಗಿದೆ.

ಮೀನುಗಾರಿಕೆಗೆ ಉತ್ತಮ ಅನುದಾನ ಹಂಚಿಕೆಯಾಗಿದ್ದರೂ ಉಡುಪಿ ಜಿಲ್ಲೆಗೆ ವಿಶೇಷವೇನೂ ಸಿಕಿಲ್ಲ. 7 ಕೋ.ರೂ. ವೆಚ್ಚದಲ್ಲಿ ಸೀ ಆ್ಯಂಬುಲೆನ್ಸ್‌ ಖರೀದಿಗೆ ಒಪ್ಪಿಗೆ ನೀಡಿದ್ದರಿಂದ ಮಲ್ಪೆಗೆ ಇದು ಬಂದರೆ ದ.ಕ. ಮತ್ತು ಉ.ಕ. ಜಿಲ್ಲೆಯ ಕೇಂದ್ರ ಸ್ಥಾನವಾಗಿ ಉಡುಪಿಯಿಂದಲೇ ಕಾರ್ಯಾಚರಿಸಲು ಅನುಕೂಲವಾಗಲಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಮಲ್ಪೆ ಬಂದರಿನ ನಾಲ್ಕನೇ ಹಂತದ ಅಭಿವೃದ್ಧಿ ಘೋಷಿಸಲಾಗಿದೆ. ಆದರೆ ಜಿಲ್ಲೆಯ ಬಹುದೊಡ್ಡ ಸಮಸ್ಯೆಯಾದ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಅಥವಾ ಈಗಾಗಲೇ ಪ್ರಸ್ತಾವನೆ ಹಂತದಲ್ಲಿರುವ ಯೋಜನೆಗೆ ಅನುದಾನದ ಹಂಚಿಕೆಯನ್ನು ಮಾಡಿಲ್ಲ.

ಉಡುಪಿ ಸಹಿತ ಐದು ಜಿಲ್ಲೆಗಳಲ್ಲಿ ಅಂದಾಜು 36 ಕೋ.ರೂ. ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನ ಪರೀಕ್ಷ ಪಥ ನಿರ್ಮಾಣಕ್ಕೆ ಸರಕಾರ ಮುಂದಾಗಿದೆ. ಅಲೆವೂರಿನಲ್ಲಿ ಇದಕ್ಕಾಗಿ ಈಗಾಗಲೇ 5 ಎಕ್ರೆಗೂ ಅಧಿಕ ಜಾಗ ಗುರುತಿಸಿದ್ದರೂ ಡೀಮ್ಡ್ ಫಾರೆಸ್ಟ್‌ ಸಮಸ್ಯೆಯಿಂದ ಚಾಲನ ಪಥ ನಿರ್ಮಾಣವಾಗಿಲ್ಲ.

ಉಡುಪಿಯಲ್ಲೂ ಕ್ರಿಟಿಕಲ್‌ ಬ್ಲಾಕ್‌ ಸ್ಥಾಪನೆಯಾಗಲಿದೆ. ಉಡುಪಿ ಸಮೀಪದ ಅಲೆವೂರಿನಲ್ಲಿ ವಿಜ್ಞಾನ ಕೇಂದ್ರದ ಕಾಮಗಾರಿ ನಡೆಯುತ್ತಿದೆ. ತುಳು, ಬ್ಯಾರಿ, ಕೊಂಕಣಿ ಕರ್ನಾಟಕದ ಪ್ರಾದೇಶಿಕ ಭಾಷೆಗಳಾಗಿದ್ದು ಅವುಗಳ ಅಭಿವೃದ್ಧಿಗೆ ಅಕಾಡೆಮಿಗಳ ಮೂಲಕ ಭಾಷೆ, ಸಂಸ್ಕೃತಿ, ಸಾಹಿತ್ಯವನ್ನು ಪ್ರೋತ್ಸಾಹಿಸುವ ಘೋಷಣೆ ಮಾಡಿದ್ದರಿಂದ ಜಿಲ್ಲೆಯ ಸಾಹಿತ್ಯ ವಲಯಕ್ಕೂ ಇದು ಸಹಕಾರಿ ಯಾಗಲಿದೆ.

ಜಿಲ್ಲೆಯ ಕೃಷಿ, ಮೀನುಗಾರಿಕೆ ಹಾಗೂ ಪ್ರವಾಸೋದ್ಯಮ, ಕೈಗಾರಿಕೆಗಳ ಅಭಿವೃದ್ಧಿ ದೃಷ್ಟಿಯಿಂದ ಹಲವು ನಿರೀಕ್ಷೆಗಳಿದ್ದು, ಅವುಗಳು ಈಡೇರಿಲ್ಲ. ಧಾರ್ಮಿಕ ಕ್ಷೇತ್ರ, ಬೀಚ್‌, ಜಲಪಾತ ಸಹಿತ ಪ್ರವಾಸೋದ್ಯಮ ಸ್ಥಳಗಳನ್ನು ಸಂಪರ್ಕಿಸುವ ಟೂರಿಸಂ ಸರ್ಕ್ಯೂಟ್ ಬಲವರ್ಧನೆಗೆ ಆದ್ಯತೆ ಸಿಕ್ಕಿಲ್ಲ.

ಕೈಗಾರಿಕೆ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಅನುದಾನ ಬಂದಿಲ್ಲ. ಬ್ರಹ್ಮಾವರ ಕೃಷಿ ಕಾಲೇಜು, ಸರಕಾರಿ ವೈದ್ಯಕೀಯ ಕಾಲೇಜು, ಸರಕಾರಿ ಎಂಜಿನಿಯರಿಂಗ್‌ ಕಾಲೇಜು ಬೇಡಿಕೆಯಾಗಿಯೇ ಉಳಿದಿದೆ. ವಾರಾಹಿ ಯೋಜನೆಯನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಲು ಅನುಕೂಲವಾಗುವಂತೆ ಡೀಮ್ಡ್ ಫಾರೆಸ್ಟ್‌ ಸಮಸ್ಯೆಗೆ ಮುಕ್ತಿ ನೀಡುವ ಯಾವುದೇ ಭರವಸೆಯೂ ಸಿಕ್ಕಿಲ್ಲ.

ಉಡುಪಿ ನಗರಕ್ಕೆ ಪೂರಕವಾದ 330 ಕೋ.ರೂ. ಯುಜಿಡಿ ಕಾಮಗಾರಿಯ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿಲ್ಲ. ಮಣಿಪಾಲಕ್ಕೆ ಅಗ್ನಿಶಾಮ ದಳ ಬರಲಿಲ್ಲ.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.