ಕ್ರೀಡಾ ಪ್ರೇಮಿಗಳನ್ನು ರಂಜಿಸಿದ ಚಾಂಪಿಯನ್ಸ್‌ ಕ್ರಿಕೆಟ್‌ ಟ್ರೋಫಿಗೆ ವಿದ್ಯುಕ್ತ ತೆರೆ

ಬಹರೈನ್‌ ಕನ್ನಡ ಸಂಘದ ಆಯೋಜನೆಯಲ್ಲಿ ಮೂರು ವಾರ ನಡೆದ ಕ್ರಿಕೆಟ್‌ ಪಂದ್ಯ 

Team Udayavani, Feb 17, 2024, 1:20 PM IST

ಕ್ರೀಡಾ ಪ್ರೇಮಿಗಳನ್ನು ರಂಜಿಸಿದ ಚಾಂಪಿಯನ್ಸ್‌ ಕ್ರಿಕೆಟ್‌ ಟ್ರೋಫಿಗೆ ವಿದ್ಯುಕ್ತ ತೆರೆ

ಬಹರೈನ್‌: ಇಲ್ಲಿನ ರಾಜ್ಯ ಪ್ರಶಸ್ತಿ ವಿಜೇತ ಕನ್ನಡ ಸಂಘ ಬಹರೈನ್‌ ಆಯೋಜಿಸಿದ್ದ ಸುಮಾರು ಮೂರು ವಾರಗಳಿಂದ ದ್ವೀಪದ ಕ್ರೀಡಾಪ್ರೇಮಿಗಳನ್ನು ರಂಜಿಸುತಿದ್ದ ಕೆಎಸ್‌ಬಿ ಚಾಂಪಿಯನ್ಸ್‌ ಟ್ರೋಫಿ 2024ರ ಮೃದು ಚೆಂಡಿನ ಹೊನಲು ಬೆಳಕಿನ ಕ್ರಿಕೆಟ್‌ ಪಂದ್ಯವು ವರ್ಣರಂಚಿತ ಸಮಾರೋಪ ಸಮಾರಂಭದೊಂದಿಗೆ ಸಮಾಪನಗೊಂಡಿತು.

ಪುರುಷರ ಹಾಗೂ ವನಿತೆಯರ ತಂಡಗಳೂ ಸೇರಿದಂತೆ ದ್ವೀಪದ ಒಟ್ಟು 34 ತಂಡಗಳು ಈ ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು. ಪುರುಷರ ತಂಡಗಳ ನಡುವಿನ ಫೈನಲ್‌ ಪಂದ್ಯಾಟದಲ್ಲಿ ರಫಾ ಇಂಡಿಯನ್‌ ಸ್ಟಾರ್ಸ್‌ ತಂಡವು ನ್ಯೂ ವರ್ಲ್ಡ್ ತಂಡವನ್ನು ಮಣಿಸಿ ಪಂದ್ಯಾಟದ ಚಾಂಪಿಯನ್ಸ್‌ ಆಗಿ ಮೂಡಿಬಂದರೆ ವನಿತೆಯರ ಅಂತಿಮ ಹಂತದ ಪಂದ್ಯಾಟದಲ್ಲಿ ಕನ್ನಡ ಸಂಘ ಬಹ್ರೈನ್‌ ಎ ತಂಡವು ಎಚ್‌.ಪಿ.ಸಿ.ಎ. ಕ್ವೀನ್ಸ್‌ ತಂಡವನ್ನು ಸೋಲಿಸಿ ವನಿತೆಯರ ಚಾಂಪಿಯನ್ಸ್‌ ಪಟ್ಟವನ್ನು ತನ್ನ ಮಡಿಲಿಗೆ ಹಾಕಿಕೊಂಡಿತು. 16 ವರ್ಷದ ಒಳಗಿನ ಬಾಲಕರ ಪಂದ್ಯಾಟದಲ್ಲಿ ಎನ್‌.ಎಸ್‌.ಪಿ. ತಂಡವನ್ನು ಮಣಿಸಿದ ಎಚ್‌.ಪಿ.ಸಿ.ಎ. ತಂಡವು ಚಾಂಪಿಯನ್ಸ್‌ ಆಗಿ ಹೊರಹೊಮ್ಮಿತ್ತು.

ಪಂದ್ಯಾಟವನ್ನು ವೀಕ್ಷಿಸಿದ ಜಾವಗಲ್‌ ಶ್ರೀನಾಥ್‌ ಅವರು, ಕ್ರೀಡಾಪಟುಗಳ ಕ್ರೀಡಾ ಕ್ಷಮತೆ ಹಾಗೂ ಕ್ರೀಡಾ ಸ್ಪೂ³ರ್ತಿಯನ್ನು ಶ್ಲಾಘಿಸಿ ಬಹುಮಾನಗಳನ್ನು ವಿತರಿಸಿದರು.

ಕನ್ನಡ ಸಂಘದ ಅಧ್ಯಕ್ಷ ಅಮರನಾಥ್‌ ರೈ ಮಾತನಾಡಿ, ಪಂದ್ಯಾಟವು ಯಶಸ್ವಿಯಾಗಿ ಮೂಡಿ ಬಂದುದರ ಬಗ್ಗೆ ತಮ್ಮ ಮೆಚ್ಚುಗೆಯನ್ನು ಸೂಚಿಸಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಅಂತಿಮ ಹಂತದ ಪಂದ್ಯಾಟಕ್ಕೂ ಮುನ್ನ ಕನ್ನಡ ಭವನದಲ್ಲಿ ಜಾವಗಲ್‌ ಶ್ರೀನಾಥ್‌ ಅವರಿಗೆ ಅಭಿನಂದನ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಶ್ರೀಕಾಂತ್‌, ಕನ್ನಡ ಸಂಘದ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಹೊಗಳಿದರು. ತದನಂತರ ನೆರೆದವರೊಂದಿಗೆ ಕ್ರಿಕೆಟಿಗೆ ಸಂಭಂದಪಟ್ಟಂತೆ ನಡೆದ ಮುಕ್ತ ಸಂವಾದದಲ್ಲಿ ನೆರೆದವರ ಪ್ರಶ್ನೆಗಳಿಗೆ ಉತ್ತರಿಸಿದರು. ಇಲ್ಲಿನ ಭಾರತೀಯ ದೂತಾವಾಸದ ರಾಯಭಾರಿಗಳಾದ ವಿನೋದ್‌ ಕೆ. ಜಾಕೋಬ್‌ ಮುಖ್ಯ ಅತಿಥಿಗಳಾಗಿ ಆಗಮಿಸಿ ತಮ್ಮ ಭಾಷಣವನ್ನು ಕನ್ನಡದಲ್ಲಿಯೇ ಮಾಡಿ ಎಲ್ಲರನ್ನು ಅಚ್ಚರಿಗೊಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ವೇದಿಕೆಯಲ್ಲಿ ಸಂಘದ ಅಧ್ಯಕ್ಷ ಅಮರನಾಥ್‌ ರೈ, ಮಂಗಳೂರಿನ ವೈದ್ಯ ಹಾಗೂ ದಕ್ಷಿಣ ಕನ್ನಡ ಕ್ರಿಕೆಟ್‌ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್‌ ರೈ, ಬಹ್ರೈನ್‌ ಕ್ರಿಕೆಟ್‌ ಫೆಡರೇಶನ್‌ನ ಸಲಹಾ ಸಮಿತಿಯ ಅಧ್ಯಕ್ಷ ಮೊಹಮ್ಮದ್‌ ಮನ್ಸೂರ್‌,ಉಪಾಧ್ಯಕ್ಷ ಮಹೇಶ್‌ ಕುಮಾರ್‌ ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ಅಮರನಾಥ್‌ ರೈ ಪ್ರಾಸ್ತಾವಿಕ ಭಾಷಣ ಮಾಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಾಂಪ್ರಸಾದ್‌ ಅಮ್ಮೆನಡ್ಕ ನಿರೂಪಿದರು. ಕ್ರಿಕೆಟ್‌ ಪಂದ್ಯಾಟದ ಪ್ರಧಾನ ಸಂಯೋಜಕರಾಗಿ ಕ್ರೀಡಾ ಕಾರ್ಯದರ್ಶಿ ಜಾನ್‌ ದೀಪಕ್‌ ಪಿಂಟೋ, ಡಿ. ರಮೇಶ್‌, ರೆಮಿ ಪಿಂಟೋ ಹಾಗೂ ಅಶ್ವಿ‌ನ್‌ ದಯಾನಂದ್‌ ಸಹಕರಿಸಿದರು. ಈ ಪಂದ್ಯಾಟದ ಶೀರ್ಷಿಕ ಪ್ರಾಯೋಜಕರಾಗಿ ಬಿ.ಎಂ.ಎಂ.ಐ. ಸಂಸ್ಥೆ ಸಹಕರಿಸಿತ್ತು.

*ಕಮಲಾಕ್ಷ ಅಮೀನ್‌

ಟಾಪ್ ನ್ಯೂಸ್

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.