![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-415x240.jpg)
ಭಾರತದಲ್ಲಿ ಯಾವುದೇ ಮನೆ ಇಲ್ಲ, ಇಟಲಿಯಲ್ಲಿದೆ ಮನೆ: ಸೋನಿಯಾ ಅಫಿಡವಿಟ್ ನಲ್ಲಿ ಬಯಲು!
Team Udayavani, Feb 17, 2024, 3:30 PM IST
![ಭಾರತದಲ್ಲಿ ಯಾವುದೇ ಮನೆ ಇಲ್ಲ, ಇಟಲಿಯಲ್ಲಿದೆ ಮನೆ: ಸೋನಿಯಾ ಅಫಿಡವಿಟ್ ನಲ್ಲಿ ಬಯಲು!](https://www.udayavani.com/wp-content/uploads/2024/02/Italy-620x348.jpg)
ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತಾವು ಭಾರತದಲ್ಲಿ ಯಾವುದೇ ಸ್ವಂತ ಮನೆಯಾಗಲಿ, ವಾಹನವಾಗಲಿ ಹೊಂದಿಲ್ಲ. ಆದರೆ ಇಟಲಿಯಲ್ಲಿ ಪೂರ್ವಜರಿಂದ ಬಂದ 27 ಲಕ್ಷ ರೂಪಾಯಿ ಮೌಲ್ಯದ ಮನೆ ಇದೆ ಎಂದು ಅಫಿಡವಿಟ್ ನಲ್ಲಿ ಘೋಷಿಸಿದ್ದಾರೆ.
ಇದನ್ನೂ ಓದಿ:Tamil Nadu: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ… 9 ಮಂದಿ ಮೃತ್ಯು, ಹಲವರಿಗೆ ಗಾಯ
ರಾಜಸ್ಥಾನದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಈ ಅಂಶ ನಮೂದಿಸಲಾಗಿದೆ. ಅಲ್ಲದೇ ಸೋನಿಯಾ ಗಾಂಧಿ ಒಟ್ಟು 12.53 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ.
ಅಫಿಡವಿಟ್ ಪ್ರಕಾರ, ಸೋನಿಯಾ ಗಾಂಧಿ, ಚಿನ್ನಾಭರಣ, ಆಕ್ಸ್ ಫರ್ಡ್ ಯೂನಿರ್ವಸಿಟಿಯಿಂದ ಬಂದ ರಾಯಲ್ಟಿ, ಹೂಡಿಕೆ, ಬಾಂಡ್ಸ್, ಬ್ಯಾಂಕ್ ಠೇವಣಿ ಸೇರಿದಂತೆ ಒಟ್ಟು 6.38 ಕೋಟಿ ರೂಪಾಯಿ ಚರಾಸ್ತಿ ಹೊಂದಿದ್ದು, 90,000 ನಗದು ಇದ್ದಿರುವುದಾಗಿ ಉಲ್ಲೇಖಿಸಿದ್ದಾರೆ.
ಇಟಲಿಯಲ್ಲಿ ನನ್ನ ತಂದೆಯಿಂದ ಬಂದ ಮನೆ ಇದ್ದು, ಪ್ರಸ್ತುತ ಮಾರುಕಟ್ಟೆ ಬೆಲೆ ಪ್ರಕಾರ ಆ ಮನೆ 26.83 ಲಕ್ಷ ರೂಪಾಯಿ ಮೌಲ್ಯ ಹೊಂದಿರುವುದಾಗಿ ಸೋನಿಯಾ ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ. ಸೋನಿಯಾ ಬಳಿ 1.07 ಕೋಟಿ ರೂ. ಮೌಲ್ಯದ ಚಿನ್ನಾಭರಣ, 88 ಕೆಜಿ ಬೆಳ್ಳಿ (57.2 ಲಕ್ಷ) ಹೊಂದಿರುವುದಾಗಿ ಅಫಿಡವಿಟ್ ನಲ್ಲಿ ನಮೂದಿಸಿರುವುದಾಗಿ ವರದಿ ತಿಳಿಸಿದೆ.
ನವದೆಹಲಿಯ ಡೇರಾ ಮಂಡಿ ಗ್ರಾಮದಲ್ಲಿ ಸೋನಿಯಾ ಗಾಂಧಿ 2,529.28 ಚದರ ಅಡಿಯಷ್ಟು ಕೃಷಿ ಭೂಮಿ ಹೊಂದಿದ್ದು, ಪ್ರಸಕ್ತ ಮಾರುಕಟ್ಟೆ ಪ್ರಕಾರ 5.88 ಕೋಟಿ ರೂಪಾಯಿ ಮೌಲ್ಯದ್ದಾಗಿದೆ. ಸಂಸದೆ ಸ್ಥಾನದ ಸಂಬಳ, ರಾಯಲ್ಟಿ ಧನ, ಬ್ಯಾಂಕ್ ಠೇವಣಿಯ ಬಡ್ಡಿ, ಮ್ಯೂಚುವಲ್ ಫಂಡ್ಸ್ ಇತರೆ ಆದಾಯ ಮೂಲವಾಗಿದೆ.
5 ವರ್ಷಗಳಲ್ಲಿ 72 ಲಕ್ಷ ಆದಾಯ ಹೆಚ್ಚಳ:
ಸೋನಿಯಾ ಗಾಂಧಿ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಕಳೆದ 5 ವರ್ಷಗಳಲ್ಲಿ 72 ಲಕ್ಷ ರೂಪಾಯಿ ಆದಾಯ ಹೆಚ್ಚಳವಾಗಿದೆ. 2014ರ ಲೋಕಸಭಾ ಚುನಾವಣೆ ವೇಳೆ 9.28 ಕೋಟಿ ರೂ. ಮೊತ್ತದ ಆಸ್ತಿ ಇದ್ದಿರುವುದಾಗಿ ಘೋಷಿಸಿದ್ದರು. 2019ರ ಚುನಾವಣೆ ವೇಳೆ 11.82 ಕೋಟಿ ರೂ. ಮೊತ್ತದ ಆಸ್ತಿ ಇದ್ದಿರುವುದಾಗಿ ಘೋಷಿಸಿದ್ದು, ಇದೀಗ 2024ರಲ್ಲಿ 12.53 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-415x240.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-150x87.jpg)
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-150x84.jpg)
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
![Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!](https://www.udayavani.com/wp-content/uploads/2024/12/bomb-2-150x100.jpg)
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
![Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ](https://www.udayavani.com/wp-content/uploads/2024/12/sc-19-150x90.jpg)
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
![Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್ಕೌಂಟರ್… 5 ಭಯೋತ್ಪಾದಕರು ಹತ](https://www.udayavani.com/wp-content/uploads/2024/12/kashmir-1-150x84.jpg)
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
MUST WATCH
ಹೊಸ ಸೇರ್ಪಡೆ
![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-150x87.jpg)
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
![Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ](https://www.udayavani.com/wp-content/uploads/2024/12/6-35-150x90.jpg)
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
![5](https://www.udayavani.com/wp-content/uploads/2024/12/5-36-150x90.jpg)
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
![Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ](https://www.udayavani.com/wp-content/uploads/2024/12/4-36-150x90.jpg)
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
![Krantiveer Brigade launched by worshipping the feet of 1008 saints: KS Eshwarappa](https://www.udayavani.com/wp-content/uploads/2024/12/kse-150x87.jpg)
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.