Shakhahaari Movie Review; ನಿಗೂಢ ಹಾದಿಯಲ್ಲಿ ಆಗಂತುಕ ನಡೆ


Team Udayavani, Feb 18, 2024, 8:54 AM IST

Shakhahaari Movie Review

ಆತ ಮಲೆನಾಡಿನ ಸಣ್ಣ ಊರಿನಲ್ಲಿ ತನ್ನದೇ ಆದ ಖಾನಾವಳಿಯನ್ನು ನಡೆಸಿಕೊಂಡು ಬದುಕು ಕಟ್ಟಿಕೊಂಡಿರುವ ವ್ಯಕ್ತಿ. ತಾನಾಯಿತು ತನ್ನ ಕೆಲಸವಾಯಿತು ಎಂದುಕೊಂಡು ಆರಾಮಾಗಿದ್ದ ಸುಬ್ಬಣ್ಣನ ಹೋಟೆಲ್‌ಗೆ ಅದೊಂದು ದಿನ ಪೊಲೀಸರಿಂದ ಗುಂಡೇಟಿನಿಂದ ಗಾಯಗೊಂಡು ತಪ್ಪಿಸಿಕೊಂಡಿರುವ ಆಗಂತುಕನೊಬ್ಬನ ಆಗಮನವಾಗುತ್ತದೆ. ಮೇಲ್ನೋಟಕ್ಕೆ ಒಳ್ಳೆಯವನೆಂದು ಅನಿಸುವ ಅಪರಿಚಿತನಿಗೆ ತನ್ನ ಹೋಟೆಲ್‌ ನಲ್ಲಿಯೇ ಪೊಲೀಸರ ಕಣ್ತಪ್ಪಿಸಿ ಆಶ್ರಯ ನೀಡುವ ಸುಬ್ಬಣ್ಣ, ಆತನ ಹಿನ್ನೆಲೆಯನ್ನು ಕೆದಕುತ್ತಾ ಹೋಗುತ್ತಾನೆ. ಅಲ್ಲಿಂದ ಕ್ರೈಂ ಕಥಾನಕವೊಂದು ಬಿಚ್ಚಿಕೊಳ್ಳುತ್ತ ಹೋಗುತ್ತದೆ. ಇದು ಈ ವಾರ ತೆರೆಗೆ ಬಂದಿರುವ “ಶಾಖಾಹಾರಿ’ ಸಿನಿಮಾದ ಆರಂಭದಲ್ಲಿ ಕಾಣುವ ಒಂದಷ್ಟು ದೃಶ್ಯಗಳು.

ಕೆಲ ಆಕಸ್ಮಿಕ ಘಟನೆಗಳು ಹೇಗೆ ಮುಗ್ಧನೊಬ್ಬನನ್ನು ಅಪರಾಧಿಯನ್ನಾಗಿ ಮಾಡುತ್ತದೆ. ತನ್ನ ಅಸ್ತಿತ್ವಕ್ಕಾಗಿ ಆತ ಹೇಗೆ ಹೋರಾಡುತ್ತಾನೆ ಎಂಬ ಎಳೆಯನ್ನು ಇಟ್ಟುಕೊಂಡು ಸಾಗುವ “ಶಾಖಾಹಾರಿ’ ಅಂತಿಮವಾಗಿ ಎಲ್ಲದಕ್ಕೂ ಒಂದು ತಾರ್ಕಿಕ ಅಂತ್ಯ ಕೊಡುತ್ತಾ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ನಿಲ್ಲುತ್ತದೆ.

ಇವಿಷ್ಟು ಹೇಳಿದ ಮೇಲೆ ಇದೊಂದು ಸಸ್ಪೆನ್ಸ್‌ ಕಂ ಕ್ರೈಂ-ಥ್ರಿಲ್ಲರ್‌ ಸಿನಿಮಾ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಮಲೆನಾಡಿನ ಸುಂದರ ಪರಿಸರದಲ್ಲಿ ತೆರೆದುಕೊಳ್ಳುವ “ಶಾಖಾಹಾರಿ’ ನಿಧಾನವಾಗಿ ನೋಡುಗರನ್ನು ಆವರಿಸಿಕೊಳ್ಳುತ್ತ ಹೋಗುತ್ತದೆ. ಅದಕ್ಕೆ ಕಾರಣ ಸಿನಿಮಾದ ಕಥೆಯಲ್ಲಿರುವ ಸತ್ವ. ಅಚಾತುರ್ಯ ಘಟನೆ, ಅದರ ಹಿಂದಿನ ನಿಗೂಢ ಹುಡುಕಾಟದ ಸುತ್ತ ಸಾಗುವ “ಶಾಖಾಹಾರಿ’ ಅಲ್ಲಲ್ಲಿ ಅನಿರೀಕ್ಷಿತ ತಿರುವುಗಳನ್ನು ಪಡೆದುಕೊಂಡು ಕ್ಲೈಮ್ಯಾಕ್ಸ್‌ವರೆಗೂ ಕುತೂಹಲವನ್ನು ಉಳಿಸಿಕೊಳ್ಳುತ್ತದೆ. ಸಿನಿಮಾದ ಕಥೆಗೆ ತಕ್ಕಂತೆ ನಿರೂಪಣೆ, ಚಿತ್ರಕಥೆ ಕೊಂಚ ವೇಗ ಸಿಕ್ಕಿದ್ದರೆ, “ಶಾಖಾಹಾರಿ’ ಇನ್ನಷ್ಟು ಬೇಗ ಮತ್ತು ಪರಿಣಾಮಕಾರಿಯಾಗಿ ನೋಡುಗರ ಮನಮುಟ್ಟುವ ಸಾಧ್ಯತೆಗಳಿದ್ದವು. ಆದರೂ ಹೊಸತನದ ಕಥೆಯನ್ನು ಪ್ರೇಕ್ಷಕರ ಮುಂದಿಡಬೇಕೆಂಬ ಚಿತ್ರತಂಡದ ಪ್ರಯತ್ನ ಇಲ್ಲಿ ಸಫ‌ಲವಾಗಿದೆ ಎನ್ನಬಹುದು.

ಇನ್ನು ಇಡೀ ಸಿನಿಮಾವನ್ನು ತಮ್ಮ ಪಾತ್ರಗಳ ಮೇಲೆ ಕೊನೆವರೆಗೂ ಸಾಗಿಸಿದ ಕೀರ್ತಿ ನಟರಾದ ರಂಗಾಯಣ ರಘು ಮತ್ತು ಗೋಪಾಲಕೃಷ್ಣ ದೇಶಪಾಂಡೆ ಅವರಿಗೆ ಸೇರುತ್ತದೆ. ಅಡುಗೆ ಭಟ್ಟನಾಗಿ ರಂಗಾಯಣ ರಘು, ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿ ಗೋಪಾಲಕೃಷ್ಣ ದೇಶಪಾಂಡೆ ಅವರದ್ದು ಮನಮುಟ್ಟುವ ಅಭಿನಯ. ನವ ಪ್ರತಿಭೆಗಳಾದ ವಿನಯ್‌, ನಿಧಿ ಹೆಗ್ಡೆ ಮೊದಲ ಪ್ರಯತ್ನದಲ್ಲೇ ಗಮನ ಸೆಳೆದರೆ, ಸುಜಯ್‌ ಶಾಸ್ತ್ರೀ ಅಲ್ಲಲ್ಲಿ ಪ್ರೇಕ್ಷಕರಿಗೆ ನಗು ತರಿಸುತ್ತಾರೆ. ಉಳಿದಂತೆ ಇತರ ಕಲಾವಿದರದ್ದು ಪಾತ್ರಕ್ಕೆ ತಕ್ಕದಾದ ಅಚ್ಚುಕಟ್ಟು ಅಭಿನಯ.

ತಾಂತ್ರಿಕವಾಗಿ ಸಿನಿಮಾದ ಛಾಯಾಗ್ರಹಣ, ಹಿನ್ನೆಲೆ ಸಂಗೀತ ಗಮನ ಸೆಳೆಯುತ್ತದೆ. ಮಾಮೂಲಿ ಸಿನಿಮಾಗಳಿಗಿಂತ ಹೊರತಾಗಿರುವ ಸಿನಿಮಾಗಳನ್ನು ಮತ್ತು ಹೊಸಬರ ಪ್ರಯತ್ನವನ್ನು ಬೆಂಬಲಿಸಬೇಕೆನ್ನುವವರು ಒಮ್ಮೆ “ಶಾಖಾಹಾರಿ’ ನೋಡಿಬರಬಹುದು.

 ಜಿ.ಎಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

rain 3

RED alert; ಜು.6 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sambhavami Yuge Yuge Review

Sambhavami Yuge Yuge Review; ಊರು ಗೆದ್ದ ಹಳ್ಳಿಹೈದ

love li movie review

Love Li movie review: ಪ್ರೀತಿ, ದ್ವೇಷ ಮತ್ತು ಅವನು!

Shivamma movie review;

Shivamma movie review; ಗಟ್ಟಿಗಿತ್ತಿಯ ಬದುಕಿನ ಕನಸು

Kotee movie review: ಕೋಟಿ ಲೆಕ್ಕ ಹುಲಿಬೇಟೆ ಪಕ್ಕಾ

Kotee movie review: ಕೋಟಿ ಲೆಕ್ಕ ಹುಲಿಬೇಟೆ ಪಕ್ಕಾ

Anartha Movie Review

Anartha Movie Review; ‘ಅನರ್ಥ’ದಿಂದ ಅರ್ಥದೆಡೆಗೆ ಸಸ್ಪೆನ್ಸ್‌ ಯಾನ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Ajekar: ರಿಕ್ಷಾ-ಬೊಲೆರೊ ಢಿಕ್ಕಿ: ಐವರಿಗೆ ಗಾಯ

Ajekar: ರಿಕ್ಷಾ-ಬೊಲೆರೊ ಢಿಕ್ಕಿ: ಐವರಿಗೆ ಗಾಯ

rain 3

RED alert; ಜು.6 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

Mang-Airport

Mangaluru ವಿಮಾನ ನಿಲ್ದಾಣ:ಅಂತಾರಾಷ್ಟ್ರೀಯ ಕಾರ್ಗೋ ಸೇವೆ ಪ್ರಾರಂಭ

suicide

Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.