Govt; 30 ತಾಲೂಕಿಗೆ ಇನ್ನೂ ಇಲ್ಲ ಮಿನಿ ವಿಧಾನಸೌಧ ಭಾಗ್ಯ

63 ತಾಲೂಕುಗಳ ಪೈಕಿ ನಿರ್ಮಾಣ ಪೂರ್ಣಗೊಂಡಿದ್ದು 4 ಕಡೆ ಮಾತ್ರ

Team Udayavani, Feb 19, 2024, 7:15 AM IST

Govt; 30 ತಾಲೂಕಿಗೆ ಇನ್ನೂ ಇಲ್ಲ ಮಿನಿ ವಿಧಾನಸೌಧ ಭಾಗ್ಯ

ಬೆಂಗಳೂರು:”ನಮ್ಮ ತಾಲೂಕುಗಳಿಗೆ ಶಾಶ್ವತ ಸ್ವಂತ ಆಡಳಿತ ಕಚೇರಿ ಮಿನಿ ವಿಧಾನಸೌಧ ಸಿಗೋದು ಯಾವಾಗ? ಬಾಡಿಗೆ ಕಟ್ಟಡ, ಇನ್ಯಾವುದೋ ಇಲಾಖೆ ಕಚೇರಿಯ ದಾಕ್ಷಿಣ್ಯ ಇನ್ನೆಷ್ಟು ದಿನ?’ ಇದು ಹೊಸ ತಾಲೂಕುಗಳ ಜನರ ಕೊರಗು! ಜನರ ಹೋರಾಟಗಳು, ಜನಪ್ರತಿನಿಧಿಗಳ ಬೇಡಿಕೆ ಇವುಗಳ ಜೊತೆಗೆ ಆಡಳಿತಾತ್ಮಕ ದೃಷ್ಟಿಯಿಂದ ಸರ್ಕಾರಗಳು ಹೊಸ ತಾಲೂಕುಗಳನ್ನು ಘೋಷಣೆ ಮಾಡಿವೆ. ಆದರೆ, ಘೋಷಣೆ ಮಾಡಿದ ವೇಗಕ್ಕೆ ತಕ್ಕಂತೆ ಅವುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯರೂಪಕ್ಕೆ ಇನ್ನೂ ಬಂದಿಲ್ಲ.

ಪ್ರಮುಖವಾಗಿ ಹೊಸ ತಾಲೂಕುಗಳಿಗೆ ಮುಕುಟಪ್ರಾಯವಾದ ಸ್ಥಳೀಯ ಆಡಳಿತ ಕೇಂದ್ರ ಮಿನಿ ವಿಧಾನಸೌಧ ಅನೇಕ ಕಡೆ ಇನ್ನೂ ತಲೆಎತ್ತಿಲ್ಲ. ಬಹಳಷ್ಟು ಕಡೆ ಯಾವುದೋ ಹಳೆಯ ಕಟ್ಟಡಗಳಲ್ಲಿ, ಇನ್ಯಾವುದೋ ಇಲಾಖೆಯ ಕಚೇರಿಗಳಲ್ಲಿ ಒಂದಿಷ್ಟು ಜಾಗ ಪಡೆದು, ಇನ್ನೂ ಕೆಲವೆಡೆ ಬಾಡಿಗೆ ಕಟ್ಟಡಗಳಲ್ಲಿ ತಾಲೂಕು ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ತಾಲೂಕು ಆಗಿದೆ, ಆದರೆ ಅದಕ್ಕೆ ಆಡಳಿತದ ಗತ್ತು ಇನ್ನೂ ಸಿಕ್ಕಿಲ್ಲ.

ರಾಜ್ಯ ಸರ್ಕಾರದ ಮಾಹಿತಿ ಪ್ರಕಾರ, 2017ರಿಂದ ಇಲ್ಲಿವರೆಗೆ ರಾಜ್ಯದಲ್ಲಿ ಒಟ್ಟು 64 ಹೊಸ ತಾಲೂಕುಗಳ ಘೋಷಣೆ ಆಗಿದ್ದು, ಅವುಗಳ ಪೈಕಿ 63 ತಾಲೂಕುಗಳು ಅಸ್ತಿತ್ವಕ್ಕೆ ಬಂದಿವೆ. ಇದರಲ್ಲಿ ಮಿನಿ ವಿಧಾನಸೌಧ (ತಾಲೂಕು ಆಡಳಿತಸೌಧ) ಪೂರ್ಣ ಆಗಿದ್ದು ನಾಲ್ಕು ಕಡೆ ಮಾತ್ರ. 10 ತಾಲೂಕುಗಳಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ತಾಲೂಕು ಆಡಳಿತ ಸೌಧ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. 11 ಹೊಸ ತಾಲೂಕುಗಳಲ್ಲಿ ಹೊಸ ಮಿನಿ ವಿಧಾನಸೌಧ ಕಟ್ಟಡ ನಿರ್ಮಿಸಲು ಸ್ಥಳ ಗುರುತಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು ಅದಕ್ಕೆ ಆಡಳಿತಾತ್ಮಕ ಅನುಮೋದನೆ ನೀಡುವ ಪ್ರಕ್ರಿಯೆ ಇನ್ನೂ ಪರಿಶೀಲನೆಯಲ್ಲಿದೆ. ಇನ್ನುಳಿದ 38 ಹೊಸ ತಾಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಜಾಗ ಗುರುತಿಸಿ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸರ್ಕಾರದಿಂದ ನಿರ್ದೇಶನ ಹೋಗಿದೆ. ಅಲ್ಲಿಂದ ಪ್ರಸ್ತಾವನೆ ಬಂದ ಮೇಲೆ ಪರಿಶೀಲಿಸಲಾಗುವುದು ಎಂದು ಸರ್ಕಾರ ಹೇಳುತ್ತಿದೆ.

2013ರಲ್ಲಿ ಮೊದಲ ಬಾರಿ ಘೋಷಣೆ:
ದೊಡ್ಡ ಸಂಖ್ಯೆಯಲ್ಲಿ ಹೊಸ ತಾಲೂಕುಗಳ ಘೋಷಣೆ ಆಗಿದ್ದು, 2013ರಲ್ಲಿ. ಅಂದು ಮುಖ್ಯಮಂತ್ರಿಯಾಗಿದ್ದ ಜಗದೀಶ ಶೆಟ್ಟರ್‌ ಅವರು ಬಜೆಟ್‌ನಲ್ಲಿ 43 ಹೊಸ ತಾಲೂಕುಗಳನ್ನು ಘೋಷಿಸಿದ್ದರು. ಅನುದಾನದ ಕೊರತೆ ಕಾರಣಕ್ಕೆ ಅವುಗಳು ಕಾರ್ಯರೂಪಕ್ಕೆ ಬರಲಿಲ್ಲ. 2017-18ರ ಬಜೆಟ್‌ನಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ 10 ತಾಲೂಕುಗಳನ್ನು ಸೇರಿಸಿ ಒಟ್ಟು 53 ತಾಲೂಕುಗಳನ್ನು ಹೊಸ ತಾಲೂಕು ಕೇಂದ್ರಗಳನ್ನಾಗಿ ಘೋಷಿಸಿದ್ದರು. 2019ರಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿದ್ದ ಎಚ್‌.ಡಿ. ಕುಮಾರಸ್ವಾಮಿ ತಮ್ಮ ಬಜೆಟ್‌ನಲ್ಲಿ ಮತ್ತೆ ಕೆಲವು ಹೆಸರುಗಳನ್ನು ಸೇರಿಸಿದರು. ಅದರಂತೆ, 2017ರಿಂದ 2023ರವರೆಗೆ ರಾಜ್ಯದಲ್ಲಿ ಒಟ್ಟು 64 ಹೊಸ ತಾಲೂಕುಗಳ ಘೋಷಣೆ ಆಗಿದೆ.

ಮಿನಿ ವಿಧಾನಸೌಧದ ಕಥೆ
– ಯಲಹಂಕ, ಕೆಜಿಎಫ್, ಮೂಡುಬಿದಿರೆ, ಕಡಬ ತಾಲೂಕುಗಳಲ್ಲಿ ಮಿನಿ ವಿಧಾನಸೌಧ ಕಾಮಗಾರಿ ಪೂರ್ಣ
– ಮೂಲ್ಕಿ, ಹೆಬ್ರಿ, ಕಾಪು, ಬೈಂದೂರು, ಕುರಗೋಡು, ದಾಂಡೇಲಿ, ಬ್ರಹ್ಮಾವರ, ಕಂಪ್ಲಿ, ಬಬಲೇಶ್ವರ, ತಿಕೋಟಗಳಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ
– ನ್ಯಾಮತಿ, ಹನೂರು, ಪೊನ್ನಂಪೇಟೆ, ಕುಶಾಲನಗರ, ಮೂಡಲಗಿ, ಲಕ್ಷ್ಮೇಶ್ವರ, ಗಜೇಂದ್ರಗಡ, ನಿಡಗುಂದಿ, ಕೊಲ್ಹಾರ, ಹುಣಸಗಿ, ವಡಗೇರ ತಾಲೂಕುಗಳಲ್ಲಿ ನಿರ್ಮಾಣಕ್ಕೆ ಜಾಗದ ಪ್ರಸ್ತಾವನೆ ಜಿಲ್ಲಾಧಿಕಾರಿಗಳಿಂದ ಇನ್ನಷ್ಟೇ ಬರಬೇಕಿದೆ

80 ಕೋಟಿ ರೂ. ಅನುದಾನ
42 ತಾಲೂಕು ಆಡಳಿತ ಸೌಧದ ಕಾಮಗಾರಿಗಳಿಗೆ ಪ್ರಸಕ್ತ ಸಾಲಿನಲ್ಲಿ 80 ಕೋಟಿ ರೂ. ಅನುದಾನವನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ. ರಾಜ್ಯದಲ್ಲಿ ಹೊಸದಾಗಿ ತಾಲೂಕು ಆಡಳಿತ ಸೌಧ ನಿರ್ಮಾಣಕ್ಕೆ ಬೇಕಾದ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ವಿದ್ಯುತ್‌ ಸಂಪರ್ಕ, ಶೌಚಾಲಯ, ಲಿಫ್ಟ್ ಅಳವಡಿಕೆ ಇನ್ನಿತರ ಎಲ್ಲಾ ಪೂರಕ ಸೌಲಭ್ಯಗಳನ್ನು ಒಳಗೊಂಡಂತೆ 10 ಕೋಟಿ ರೂ.ಗಳ ಮಿತಿಯೊಳಗೆ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣ ಮಾಡಲು ಅವಕಾಶವಿದೆ. ಆದರೆ, ಈ ಹಣ ಸಾಕಾಗಲ್ಲ ಅನ್ನುವ ಮಾತುಗಳೂ ಇದ್ದಾವೆ.

-ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.