![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 19, 2024, 10:23 AM IST
ಲಾಹೋರ್(ಇಸ್ಲಾಮಾಬಾದ್): ಲಾಹೋರ್ ನ ಭೂಗತ ಪಾತಕಿ, ಗೂಡ್ಸ್ ಟ್ರಾನ್ಸ್ ಪೋರ್ಟ್ ನೆಟ್ ವರ್ಕ್ ನ ಮಾಲೀಕ ಅಮೀರ್ ಬಾಲಾಜ್ ಟಿಪು ಎಂಬಾತನನ್ನು ಮದುವೆ ಸಮಾರಂಭದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಚುಂಗ್ ಪ್ರದೇಶದಲ್ಲಿ ನಡೆದಿರುವುದಾಗಿ ಖಾಸಗಿ ಟಿವಿ ಚಾನೆಲ್ ವೊಂದು ವರದಿ ಮಾಡಿದೆ.
ಇದನ್ನೂ ಓದಿ:Papua New Guinea: ಬುಡಕಟ್ಟು ಜನಾಂಗದ ನಡುವಿನ ಘರ್ಷಣೆಯಲ್ಲಿ 53 ಮಂದಿ ಹತ್ಯೆ…
2010ರಲ್ಲಿ ಅಲ್ಲಾಮ ಇಕ್ಬಾಲ್ ವಿಮಾನ ನಿಲ್ದಾಣದಲ್ಲಿ ನಡೆದ ಮಾರಣಾಂತಿಕ ದಾಳಿಯಲ್ಲಿ ಸಾವಿಗೀಡಾಗಿದ್ದ ಆರೀಫ್ ಅಮೀರ್ ಅಲಿಯಾಸ್ ಟಿಪು ಟ್ರಂಕನ್ ವಾಲಾನ ಪುತ್ರ ಅಮೀರ್ ಬಾಲಾಜ್ ಟಿಪು ಕೂಡಾ ಗುಂಡಿನ ದಾಳಿಯಲ್ಲಿ ಕೊನೆಯುಸಿರೆಳೆದಿರುವುದಾಗಿ ವರದಿ ವಿವರಿಸಿದೆ.
ಬಾಲಾಜ್ ಅಜ್ಜ ಕೂಡಾ ಹಳೆಯ ವೈಷಮ್ಯದಲ್ಲಿ ಸಿಲುಕಿಕೊಂಡಿದ್ದು, ಅವರ ಇಡೀ ಕುಟುಂಬವೇ ಹಿಂಸಾಚಾರದಲ್ಲಿ ಶಾಮೀಲಾಗಿತ್ತು ಎಂದು ಡಾನ್ ಪತ್ರಿಕೆ ವರದಿ ಮಾಡಿದೆ. ಮದುವೆ ಸಮಾರಂಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಬಾಲಾಜ್ ಹಾಗೂ ಇಬ್ಬರು ಗಾಯಗೊಂಡಿದ್ದರು. ಕೂಡಲೇ ಬಾಲಾಜ್ ನ ಸಹಚರರು ಪ್ರತಿದಾಳಿ ನಡೆಸಿದ ಪರಿಣಾಮ ದಾಳಿಕೋರರು ಹತ್ಯೆಗೀಡಾಗಿರುವುದಾಗಿ ವರದಿ ತಿಳಿಸಿದೆ.
ಬಾಲಾಜ್ ನನ್ನು ಜಿನ್ನಾ ಆಸ್ಪತ್ರೆಗೆ ದಾಖಲಿಸಿದ್ದರು ಕೂಡಾ, ಅಷ್ಟರಲ್ಲೇ ಸಾವಿಗೀಡಾಗಿರುವುದಾಗಿ ವೈದ್ಯರು ತಿಳಿಸಿದ್ದರು. ಘಟನೆ ಬಗ್ಗೆ ವಿಷಯ ತಿಳಿದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಇಡೀ ಪ್ರದೇಶವನ್ನು ಬಂದ್ ಮಾಡಿದ್ದು, ತನಿಖೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.