Hunsur: ಅಸ್ಸಾಂ ಕೂಲಿ ಕಾರ್ಮಿಕರ ಶಾಲೆ ತೊರೆದಿದ್ದ 32 ಮಕ್ಕಳು ಪತ್ತೆ
ಶಾಲೆ-ಅಂಗನವಾಡಿಗೆ ದಾಖಲಿಸಿದ ಅಧಿಕಾರಿಗಳ ತಂಡ
Team Udayavani, Feb 19, 2024, 9:40 PM IST
ಹುಣಸೂರು: ದೂರದ ಅಸ್ಸಾಂನ ನೋಯಾನಗರದಿಂದ ಕೂಲಿ ಕೆಲಸಕ್ಕಾಗಿ ಬಂದಿದ್ದ ಕಾರ್ಮಿಕರ 32 ಮಕ್ಕಳನ್ನು ಪತ್ತೆ ಹಚ್ಚಿದ ಕಾರ್ಮಿಕ ಇಲಾಖೆ ಅಧಿಕಾರಿಗಳು ಮಕ್ಕಳನ್ನು ಸರಕಾರಿ ಶಾಲೆ ಹಾಗೂ ಅಂಗನವಾಡಿಗೆ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹುಣಸೂರು ನಗರಕ್ಕೆ ಸಮೀಪದ ಹಾಲಗೆರೆ ಬಳಿಯ ಕೆ.ಎ.ಅಂಡ್ ಸನ್ಸ್ ಕೋಕೋನೆಟ್ ಇಂಡಸ್ಟ್ರೀಸ್ ಕಾರ್ಖಾನೆಯಲ್ಲಿ ಅಸ್ಸಾಂ ರಾಜ್ಯದ ನೋಯಾ ನಗರದಿಂದ ಬಂದಿರುವ 25 ಕ್ಕೂ ಹೆಚ್ಚು ಕುಟುಂಬಗಳು ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಇವರೊಂದಿಗೆ ಮಕ್ಕಳು ಸಹ ಶಾಲೆ ತೊರೆದು ಆಗಮಿಸಿದ್ದು, ಪೋಷಕರೊಂದಿಗಿದ್ದು, ಮಕ್ಕಳ ಶಿಕ್ಷಣ ಮೊಟಕಾಗಿತ್ತು.
ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಸಹಾಯಕ ಕಾರ್ಮಿಕ ಆಯುಕ್ತೆ ರಜಿಯಾ ಸುಲ್ತಾನರ ನಿರ್ದೇಶನದಂತೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿದೇಶಕ ಮಲ್ಲಿಕಾರ್ಜುನ್, ತಾಲೂಕು ಕಾರ್ಮಿಕ ಅಧಿಕಾರಿ ಲಕ್ಷ್ಮೀಶ ಹಾಗೂ ಶಿಕ್ಷಣ ಇಲಾಖೆಯ ಬಿಆರ್ಸಿ ಸಂತೋಷ್ಕುಮಾರ್, ಇಸಿಓ ಕುಮಾರಸ್ವಾಮಿ, ಅಂಗನವಾಡಿ ಮೇಲ್ವಿಚಾರಕಿ ಶೋಭಾ ಮತ್ತಿತರ ಅಧಿಕಾರಿಗಳ ತಂಡ ಕಾರ್ಖಾನೆಗೆ ಭೇಟಿ ಇತ್ತು ಪೋಷಕರಿಗೆ ಮಕ್ಕಳನ್ನು ಶಾಲೆಗೆ ಕಳುಹಿಸದಿರುವುದು ಕಾನೂನು ಪ್ರಕಾರ ಅಪರಾಧವಾಗಲಿದೆ ಎಂದು ತಿಳುವಳಿಕೆ ನೀಡಿ, ಕಾರ್ಖಾನೆ ಮಾಲಿಕರಿಗೆ ಎಚ್ಚರಿಕೆ ನೀಡಿ
6-14 ವರ್ಷದೊಳಗಿನ 23 ಮಕ್ಕಳನ್ನು ಸಮೀಪದ ಯಶೋಧರಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿಗೆ 9ಮಕ್ಕಳನ್ನು ದಾಖಲಿಸಲಾಯಿತು. ಮಕ್ಕಳು ಖುಷಿಯಿಂದಲೇ ಶಾಲೆ, ಅಂಗನವಾಡಿಗೆ ಪೋಷಕರು ಹಾಗೂ ಅಧಿಕಾರಿಗಳೊಂದಿಗೆ ಹೊರಟರು.
ಮಾಹಿತಿ ಮೇರೆಗೆ ಕಾರ್ಖಾನೆ ಆವರಣದಲ್ಲಿರುವ ವಸತಿ ಗೃಹದಲ್ಲಿ ಪರಿಶೀಲನೆ ನಡೆಸಿದ ವೇಳೆ ಶಾಲೆಗೆ ಹೋಗದೆ ಆಟವಾಡಿಕೊಂಡಿರುವ32 ಮಕ್ಕಳು ಪತ್ತೆಯಾಗಿದ್ದು, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆಶಾಲೆಗೆ ಸೇರಿಸಲು ಕ್ರಮವಹಿಸಲಾಗಿದೆ ಎಂದು ತಾಲೂಕು ಕಾರ್ಮಿಕ ಅಧಿಕಾರಿ ಲಕ್ಷ್ಮೀಶ ತಿಳಿಸಿದ್ದಾರೆ.
ಈ ಮಕ್ಕಳಿಗಾಗಿ ಸ್ಥಳದಲ್ಲೇ ಟೆಂಟ್ ಶಾಲೆ ತೆರೆಯುವ ಹಾಗೂ ಈ ಶಾಲೆಗೆ ಉರ್ದು ಮತ್ತು ಹಿಂದಿ ಶಿಕ್ಷಕರನ್ನು ನೇಮಿಸಲಾಗುವುದೆಂದು ಡಿಡಿಪಿಐ ಎಚ್.ಕೆ.ಪಾಂಡು ತಿಳಿಸಿದ್ದಾರೆಂದು ಬಿಆರ್ಸಿ ಸಂತೋಷ್ಕುಮಾರ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
BJP vs Congress ; ಕೇಸ್ ಮೇಲೆ ಕೇಸ್
CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು
Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ
FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್ಐಆರ್ ಹಾಕಿದ ಗುರುಗ್ರಾಮ್ ಪೊಲೀಸರು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.