IPL; ಯುಜಿ ಚಾಹಲ್ ರನ್ನು ಆರ್ ಸಿಬಿಯಿಂದ ಕೈಬಿಟ್ಟಿದ್ಯಾಕೆ? ಉತ್ತರ ನೀಡಿದ ಮೈಕ್ ಹೆಸನ್


Team Udayavani, Feb 20, 2024, 11:36 AM IST

IPL; ಯುಜಿ ಚಾಹಲ್ ರನ್ನು ಆರ್ ಸಿಬಿಯಿಂದ ಕೈಬಿಟ್ಟಿದ್ಯಾಕೆ? ಉತ್ತರ ನೀಡಿದ ಮೈಕ್ ಹೆಸನ್

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡದ ಮಾಜಿ ನಿರ್ದೇಶಕ ಮೈಕ್ ಹೆಸನ್ ಅವರು ಲೆಗ್ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಅವರನ್ನು ತಂಡದಿಂದ ಕೈಬಿಟ್ಟ ಕಾರಣವನ್ನು ಬಹಿರಂಗ ಪಡಿಸಿದ್ದಾರೆ. 2022ರ ಮೆಗಾ ಹರಾಜಿನಲ್ಲಿ ಚಾಹಲ್ ರನ್ನು ಖರೀದಿ ಮಾಡಲು ಯೋಜಿಸಿದ್ದೆವು, ಆದರೆ ಹರಾಜಿನಲ್ಲಿ ಲೆಕ್ಕಾಚಾರಗಳು ಬುಡಮೇಲಾದವು ಎಂದಿದ್ದಾರೆ.

ಯುಜಿ ಚಾಹಲ್ ಅವರು ಆರ್ ಸಿಬಿ ಸಾರ್ವಕಾಲಿಕ ಟಾಪ್ 5 ಆಟಗಾರರಲ್ಲಿ ಒಬ್ಬರು ಎಂದು ಹೆಸನ್ ಬಣ್ಣಿಸಿದರು.

2022 ರ ಋತುವಿನ ಮೆಗಾ ಹರಾಜಿನ ಮೊದಲು, ತಂಡಗಳಿಗೆ ನಾಲ್ಕು ರಿಟೆನ್ಶನ್ ಅವಕಾಶ ನೀಡಲಾಗಿತ್ತು. ಆದರೆ ಆರ್ ಸಿಬಿ ಕೇವಲ ಮೂರು ಆಟಗಾರರನ್ನು ಉಳಿಸಿಕೊಳ್ಳಲು ಆಯ್ಕೆ ಮಾಡಿತು. ವಿರಾಟ್ ಕೊಹ್ಲಿ (15 ಕೋಟಿ), ಗ್ಲೆನ್ ಮ್ಯಾಕ್ಸ್ವೆಲ್ (11 ಕೋಟಿ) ಮತ್ತು ಮೊಹಮ್ಮದ್ ಸಿರಾಜ್ (7 ಕೋಟಿ) ರನ್ನು ಮಾತ್ರ ತಂಡದಲ್ಲಿ ಉಳಿಸಿಕೊಂಡಿತು.

ಚಾಹಲ್ ಅವರನ್ನು ತಂಡಕ್ಕೆ ಮತ್ತೆ ಕರೆಸಿಕೊಳ್ಳಲು ಹರಾಜಿನಲ್ಲಿ ಆರ್ ಸಿಬಿ ಪ್ರಯತ್ನಿಸಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಹರಾಜಿನಲ್ಲಿ ಚಾಹಲ್ ಹೆಸರು ಬಂದಾಗ ಆರ್ ಸಿಬಿ ಒಂದೇ ಒಂದೇ ಬಿಡ್ ಮಾಡಲಿಲ್ಲ. ಕೊನೆಗೆ ರಾಜಸ್ಥಾನ ರಾಯಲ್ಸ್ ತಂಡವು ಚಾಹಲ್ ಅವರನ್ನು 6.50 ಕೋಟಿ ರೂ ಗೆ ಖರೀದಿ ಮಾಡಿತು.

“ನಾವು ಹರಾಜಿನಲ್ಲಿ ಹರ್ಷಲ್ ಪಟೇಲ್ ಮತ್ತು ಯುಜಿ ಇಬ್ಬರನ್ನೂ ಮರಳಿ ಖರೀದಿಸಲು ಬಯಸಿದ್ದರಿಂದ ನಾವು ಕೇವಲ ಮೂರು ಆಟಗಾರರನ್ನು ಮಾತ್ರ ಉಳಿಸಿಕೊಂಡಿದ್ದೆವು. ಕೇವಲ ಮೂರು ಆಟಗಾರರನ್ನು ಉಳಿಸಿಕೊಂಡಿದ್ದರಿಂದ ನಮಗೆ ಹೆಚ್ಚುವರಿ ನಾಲ್ಕು ಕೋಟಿ ಉಳಿಯಿತು” ಎಂದು ಹೆಸನ್ ಕಾಸಗಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಹೇಳಿದರು.

“ಬಹುಶಃ ನಾನು ಈಗಲೂ ಹತಾಶೆಗೊಂಡಿರುವ ವಿಷಯವೆಂದರೆ ಅವರು ಐಪಿಎಲ್‌ ನಲ್ಲಿ ಅತ್ಯುತ್ತಮ ಆಟಗಾರರಲ್ಲೊಬ್ಬರಾಗಿದ್ದರೂ ಅಗ್ರ ಎರಡು ಮಾರ್ಕ್ಯೂ ಪಟ್ಟಿಗಳಲ್ಲಿ ಸ್ಥಾನ ಪಡೆದಿರಲಿಲ್ಲ. ಅದು ಹಾಸ್ಯಾಸ್ಪದವಾಗಿತ್ತು. ಅವರು ಹರಾಜು ಪಟ್ಟಿಯಲ್ಲಿ ಅವರು 65ನೇ ಸಂಖ್ಯೆಯಲ್ಲಿದ್ದರು, ಇದು ನಮಗೆ ಕಷ್ಟಕರವಾಗಿತ್ತು” ಎಂದರು.

“ನಾವು ಅಣಕು ಹರಾಜಿನಲ್ಲಿ ಹೆಚ್ಚಿನ ಸಮಯವನ್ನು ಕಳೆದಿದ್ದೇವೆ. ಹರ್ಷಲ್ ಮೊದಲ ಮೂರು ಸೆಟ್‌ಗಳಲ್ಲಿದ್ದರು ಆದರೆ ಯುಜಿ ಕೆಳಗಿಳಿದಿದ್ದರು. ನಾವು ನಮ್ಮ ಎಲ್ಲಾ ಹಣವನ್ನು ಉಳಿಸಿ ಆರನೇ ಸೆಟ್‌ ಗಾಗಿ ಕಾಯುತ್ತಿದ್ದರೆ, ನಮಗಿಂತ ಹೆಚ್ಚು ಹಣವನ್ನು ಹೊಂದಿರುವ ಇತರ ಐದು ತಂಡಗಳಿವೆ ಎಂದು ನಮಗೆ ತಿಳಿದಿತ್ತು. ಅದಕ್ಕೂ ಮೊದಲು ನಾವು ಎಲ್ಲಾ ಬೌಲರ್‌ ಗಳನ್ನು ಕೈಬಿಟ್ಟೆವು. ಒಂದು ವೇಳೆ ಯುಜಿಯನ್ನು ಪಡೆಯಲು ವಿಫಲರಾಗಿದ್ದರೆಆಗ ನಾವು ಲೆಗ್-ಸ್ಪಿನ್ನರ್ ಇಲ್ಲದೆ ಉಳಿಯುತ್ತಿದ್ದೆವು” ಎಂದು ಹೆಸನ್ ಹೇಳಿದರು.

2022ರ ಮೆಗಾ ಹರಾಜಿನಲ್ಲಿ ಆರ್ ಸಿಬಿ ಲಂಕಾದ ಆಲ್ ರೌಂಡ್ ಸ್ಪಿನ್ನರ್ ವಾನಿಂದು ಹಸರಂಗ ಅವರನ್ನು ಖರೀದಿ ಮಾಡಿತ್ತು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.