ʼಕಾಟೇರʼ ಟೈಟಲ್‌,ಕಥೆ ನನ್ನದು…‌ ಉಮಾಪತಿ ವಿರುದ್ದ ಗರಂ ಆದ ದಾಸ; ಏನಿದು ವಿವಾದ?


Team Udayavani, Feb 20, 2024, 3:13 PM IST

ʼಕಾಟೇರʼ ಟೈಟಲ್‌,ಕಥೆ ನನ್ನದು – ನಿನ್ನದು..‌  ಉಮಾಪತಿ ವಿರುದ್ದ ಗರಂ ಆದ ದಾಸ; ಏನಿದು ವಿವಾದ?

ಬೆಂಗಳೂರು: ದರ್ಶನ್‌ ಅವರ ʼಕಾಟೇರʼ ಸಿನಿಮಾ ದೊಡ್ಡಮಟ್ಟದಲ್ಲಿ ಯಶಸ್ಸಾಗಿದೆ. ಸಿನಿಮಾ ಥಿಯೇಟರ್‌ ಬಳಿಕ ಓಟಿಟಿಯಲ್ಲೂ ಸದ್ದು ಮಾಡುತ್ತಿದೆ. ಈ ನಡುವೆ ʼಕಾಟೇರʼ ಕಥೆ ಹಾಗೂ ಟೈಟಲ್‌ ವಿಚಾರದಲ್ಲಿ ತೆರೆಮರೆಯಲ್ಲಿ ವಾಗ್ವಾದ ಆರಂಭಗೊಂಡಿದೆ.

ಮಾಗಡಿ ರಸ್ತೆಯಲ್ಲಿರುವ ಪ್ರಸನ್ನ ಥಿಯೇಟರ್‌ ನಲ್ಲಿ ಇದುವರೆಗೆ ಬಿಡುಗಡೆಯಾದ ದರ್ಶನ್‌ ಅವರ ಸಿನಿಮಾಗಳು ಭರ್ಜರಿ ಪ್ರದರ್ಶನ ಕಂಡಿದೆ. ʼಕಾಟೇರʼ ಕೂಡ ಇದೇ ಥಿಯೇಟರ್‌ ನಲ್ಲಿ 50 ದಿನಗಳನ್ನು ಪೊರೈಸಿದೆ. ಈ ಥಿಯೇಟರ್‌ 50 ವರ್ಷಗಳು ತುಂಬಿದೆ. ಇದರೊಂದಿಗೆ ʼಕಾಟೇರʼ 50 ದಿನಗಳನ್ನು ಪೊರೈಸಿದೆ. ಈ ಸಂಭ್ರಮವನ್ನು ಜೊತೆಯಾಗಿ ಚಿತ್ರತಂಡ ಇತ್ತೀಚೆಗೆ ಆಯೋಜನೆ ಮಾಡಿತ್ತು.

ಈ ವೇದಿಕೆಯಲ್ಲಿ ನಟ ದರ್ಶನ್‌ ಅವರು ಮಾತನಾಡಿದ್ದು, ʼರಾಬರ್ಟ್‌ʼ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರ ʼ”ಕಾಟೇರ ಕಥೆ ಬರೆಸಿದ್ದು ನಾನು, ಟೈಟಲ್‌ ಕೂಡ ನಾನೇ ಕೊಟ್ಟಿದ್ದು” ಎನ್ನುವ ಮಾತಿಗೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ದರ್ಶನ್‌ ಹೇಳಿದ್ದೇನು?: ವೇದಿಕೆಯಲ್ಲಿ ಮಾತನಾಡಿದ ಅವರು, “ಕೆಲವರು ಹೇಳಿದ್ರು ಕಥೆ ನಾನು ಮಾಡಿಸಿದೆ, ಟೈಟಲ್‌ ನಾನು ಕೊಟ್ಟೆ ಅಂತ. ಅಯ್ಯೋ ತಗಡೇ. ನಿನಗೆ ‘ರಾಬರ್ಟ್’ ಕಥೆ ಕೊಟ್ಟದ್ದೇ ನಾವು ಈಗ. ಯಾಕಂದರೆ ಕೊಟ್ಟಿದ್ದು ಮಾಡಿದ್ದು ಹೇಳಬಾರದು. ಯಾಕಂದರೆ ಇದೇ ರೀತಿ ಒಂದ್ಸಲ ಸಿಕ್ಕಿಹಾಕಿಕೊಂಡು ಹೇಳಿಸಿಕೊಂಡು ಬಾಯಿಇದ್ದಂಗೆ ಹೇಳಿಕೊಂಡು ಬುದ್ದಿ ಕಲಿಯಲಿಲ್ಲ ಅಂದ್ರೆ ನಾವು ಏನು ಹೇಳೋಣ. ಯಾಕಪ್ಪಾ ಬಂದು ಬಂದು ನಮ್ಮ ಕೈಯಲ್ಲಿ ಯಾಕೆ ಗುಮ್ಮಿಸಿಕೊಳ್ಳುತ್ತೀಯಾ? ಗುಮ್ಮಿಸಿಕೊಳ್ಳಬೇಡ, ಎಲ್ಲೋ ಚೆನ್ನಾಗಿದ್ದೀಯಾ. ಅಲ್ಲೇ ಇದ್ದುಬಿಡು” ಎಂದು ಖಾರವಾಗಿಯೇ ಹೇಳಿದರು.

“ನೀನು ಕಥೆ ಮಾಡಿಸಿದೆ ಅಲ್ವಾ? ಹಾಗಾದರೆ ಇಂತಹ ಒಳ್ಳೆ ಕಥೆ ಯಾಕೆ ಬಿಟ್ಟೆ? ನಿನ್ನ ಜಡ್ಜ್‌ಮೆಂಟ್ ಅಷ್ಟು ಚೆನ್ನಾಗಿದೆ ಗುಡ್. ನೀನು ಮಾಡಬಹುದಿತ್ತಲ್ಲ. ಟೈಟಲ್ ನಾನು ಕೊಟ್ಟೆ ಎನ್ನುತ್ತೀಯಾ. ಕಾಟೇರ ಟೈಟಲ್‌ ಕೊಟ್ಟಿದ್ದು ನಾನು ಅದಕ್ಕೂ ಸ್ಪಷ್ಟನೆ ಕೊಡುತ್ತೀನಿ. ಎಲ್ಲಾ ಆಧಾರ ಇಟ್ಟುಕೊಂಡೇ ಮಾತನಾಡಬೇಕು” ಎಂದು ನಿರ್ದೇಶಕ ಮಹೇಶ್‌ ಅವರನ್ನು ವೇದಿಕೆಗೆ ಕರೆದಿದ್ದಾರೆ.

ಮದಗಜ ಟೈಟಲ್ ರಾಮಮೂರ್ತಿ ಸರ್ ಬಳಿ ಇತ್ತು. ಅದನ್ನು ತೆಗೆದುಕೊಳ್ಳಲು ‘ಕಾಟೇರ’ ಟೈಟಲ್ ಅನ್ನು ಉಮಾಪತಿ ಸರ್ ಕೊಟ್ಟರು. ಮದಗಜ ಟೈಟಲ್ ಅನ್ನು ರಾಮಮೂರ್ತಿ ಸರ್ ನನಗೆ ಕೊಟ್ಟರು” ಎಂದು ಮಹೇಶ್‌ ಹೇಳಿದ್ದಾರೆ.

ʼಕಾಟೇರʼ ಟೈಟಲ್‌ ನ್ನು ಮೊದಲು ತಮ್ಮ ಬ್ಯಾನರ್‌ನಲ್ಲಿ ರಿಜಿಸ್ಟರ್ ಮಾಡಿಸೋಕೆ ನೀವು ಹೇಳಿದ್ರಿ. ಆದರೆ ನನ್ನ ಬ್ಯಾನರ್‌ನಲ್ಲಿ ಜಾಗ ಇರಲಿಲ್ಲ ಎನ್ನುವ ಕಾರಣಕ್ಕೆ ಸರಿ, ಅದು ನಮ್ಮ ಬ್ಯಾನರ್ ಎಂದು ಉಮಾಪತಿ ಬ್ಯಾನರ್‌ನಲ್ಲಿ ರಿಜಿಸ್ಟರ್ ಮಾಡಿಸಿದೆವು. ಆದರೆ ಟೈಟಲ್ ಕೊಟ್ಟಿದ್ದು ನೀವೇ(ದರ್ಶನ್) ಎಂದು ನಿರ್ದೇಶಕ ತರುಣ್‌ ಸುಧೀರ್‌ ವೇದಿಕೆಯಲ್ಲಿ ಹೇಳಿದ್ದಾರೆ.

ಅಷ್ಟಕ್ಕೂ ಉಮಾಪತಿ ಹೇಳಿದ್ದೇನು?: ʼಕಾಟೇರʼ ಸಿನಿಮಾದ ಕಥೆ ಬರೆಸಿದವನು ನಾನು. ಸಿನಿಮಾ ಚೆನ್ನಾಗಿ ಮೂಡಿಬಂದಿದೆ. ಮಕ್ಕಳಿಗೆ ಪರೀಕ್ಷೆ ಇದ್ದ ಕಾರಣಕ್ಕೆ ನಾನು ಸಿನಿಮಾವನ್ನು ನೋಡಲು ಆಗಿಲ್ಲ. ʼಕಾಟೇರʼ ಕಥೆ ಹಾಗೂ ಟೈಟಲ್‌ ಕೊಟ್ಟವನು ನಾನೇ. ಯಾರಿಗೆ ಏನು ಧಕ್ಕಬೇಕೋ ಅದು ದಕ್ಕುತ್ತದೆ” ಎಂದು ಸಂದರ್ಶನವೊಂದರಲ್ಲಿ ಹೇಳಿದ್ದರು.

ದರ್ಶನ್‌ ಅವರ ಮಾತಿನ ಬಳಿಕ ಮಾಧ್ಯಮವೊಂದರ ಜೊತೆ ಮಾತನಾಡಿರುವ ಉಮಾಪತಿ “ನಟ ದರ್ಶನ್‌ ಗೆಲುವಿಗೆ ನಮ್ಮಿಂದ ಏನು ಕೊಡುಗೆ ಇಲ್ಲ ಬಿಡಿ. ಸಮಯ ಸಂದರ್ಭ ಬಂದಾಗ ಈ ಬಗ್ಗೆ ಮಾತನಾಡುತ್ತೇನೆ. ಈಗ ಎಲ್ಲದಕ್ಕೂ ಉತ್ತರ ಕೊಟ್ಕೊಂಡು ಕೂರಲು ಆಗಲ್ಲ. ಮಾಡಲು ಬೇಕಾದಷ್ಟು ಕೆಲಸವಿದೆ. ದರ್ಶನ್‌ ಅವರಷ್ಟು ನಾವು ದೊಡ್ಡವರು ಆಗಿಲ್ಲ. ಆ ಹಂತಕ್ಕೆ ಬಂದಾಗ ಉತ್ತರಿಸ್ತೀವಿ” ಎಂದು ಹೇಳಿದ್ದಾರೆ.

 

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranaksha

Ranaksha: ಫ್ಯಾಮಿಲಿ ಡ್ರಾಮಾದಲ್ಲಿ ಸೀರುಂಡೆ ರಘು

Sarvasva Kannada video song

Sarvasva: ಹಾಡಲ್ಲಿ ʼಸರ್ವಸ್ವʼ ಕನಸು; ನವತಂಡದ ಪ್ರಯತ್ನ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.